Homeಕರೋನಾ ತಲ್ಲಣ490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ ಎಂದು ಜಿಂದಾಲ್ ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಲಾಕ್ ಡೌನ್ ನೆಪಹೇಳಿ ಜೆ ಡಬ್ಲ್ಯೂ ಎಸ್ (ಜಿಂದಾಲ್) ಕಂಪನಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಹಲವಾರು ಉದ್ಯೋಗಿಗಳು ಮತ್ತು ವಿವಿಧ ಸಂಘಟನೆಗಳು ಸೋಮವಾರ ಬಳ್ಳಾರಿಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಆಗಸ್ಟ್ 31 ರೊಳಗೆ ಸ್ವಯಂ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ, ಮೊದಲ ಹಂತದಲ್ಲಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಉದ್ಯೋಗಿಗಳು ದೂರಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಕಂಪನಿಯವರ ಬೆದರಿಕೆಗೆ ಮಣಿದು ರಾಜಿನಾಮೆ ನೀಡಿದ ಜಾಹ್ನವಿ ಎಂಬ ಉದ್ಯೋಗಿ ನಾನುಗೌರಿ.ಕಾಂ ಜೊತೆ ಮಾತನಾಡಿ, “ಲಾಕ್ ಡೌನ್ ಮುಕ್ತಾಯವಾಗುವ ಹಿಂದಿನ ರಾತ್ರಿ ಎಚ್ ಆರ್ ನನಗೆ ಫೋನ್ ಮಾಡಿದರು. ಕೊರೊನಾ ಕಾರಣದಿಂದ ಕಂಪನಿಗೆ ನಷ್ಟವಾಗಿದೆ. ಹಾಗಾಗಿ ನೀವು ಸ್ವಯಂ ರಾಜಿನಾಮೆ ಕೊಡಬೇಕು ಇಲ್ಲದಿದ್ದರೆ ನಿಮ್ಮನ್ನ ಟರ್ಮಿನೇಟ್ ಮಾಡಲಾಗುತ್ತದೆ ಎಂದು ನೇರವಾಗಿ ಹೇಳಿದರು” ಎಂದು ಅಳಲು ತೋಡಿಕೊಂಡಿದ್ದಾರೆ.

“ಎಷ್ಟು ಬೇಡಿಕೊಂಡರೂ ನಮ್ಮ ಮನವಿಗೆ ಮಣಿಯದೆ, ಇದು ಉನ್ನತ ಮಟ್ಟದ ನಿರ್ಧಾರ ಎಂದು ಹೇಳಿ ನನ್ನಿಂದ ರಾಜಿನಾಮೆ ಪಡೆದುಕೊಂಡರು. ನಮ್ಮದು ಸಾಮಾನ್ಯ ವರ್ಗದ ಕುಟುಂಬವಾಗಿದ್ದು, ನನಗೆ ಈ ಕೆಲಸ ಬಿಟ್ಟರೆ ಬೇರೆ ಆಧಾರವಿಲ್ಲ” ಎಂದು ಕಳೆದ ಹನ್ನೊಂದು ವರ್ಷಗಳಿಂದ ಜಿಂದಾಲ್ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ಜಾಹ್ನವಿ ಹೇಳಿದರು.

“ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳನ್ನೇ ಪ್ರಶ್ನಿಸಿದಾಗ, ‘You are Non Performer’ ಎಂದು ಹೇಳಿದರು. ಹನ್ನೊಂದು ವರ್ಷದಿಂದ ಇದು ಇವರಿಗೆ ತಿಳಿದಿರಲಿಲ್ಲವೇ?. ಆದರೆ ಈಗ ಈ ಕಾರಣ ನೀಡುತ್ತಿದ್ದಾರೆ. ನನ್ನ ರೀತಿ ಕಳೆದ 20-25 ವರ್ಷ ಜಿಂದಾಲ್‌ಗಾಗಿ ಕೆಲಸ ಮಾಡಿರುವವರನ್ನೂ ಉದ್ಯೋಗದಿಂದ ತೆಗೆಯಲಾಗುತ್ತಿದೆ. ಈಗ ನಾವೆಲ್ಲ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಕಂಪನಿಯಿಂದಲೇ ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ. ಯಾವ ರಾಜಕಾರಣಿಗಳು ಇದಕ್ಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೊರೊನಾ ಸಂಕಷ್ಟದ ಸಮಯದಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬೇಡಿ ಎಂದು ಪ್ರಧಾನಿಯವರೇ ಹೇಳಿದ್ದಾರೆ. ಆದರೂ ನಮ್ಮನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಇದರ ಬಗ್ಗೆ ನಾವು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ಕೈಗೊಳ್ಳಲಿದ್ದೇವೆ. ಹಾಗಾಗಿ ನಮಗೆ ಎಲ್ಲರೂ ಸಹಕರಿಸಿ” ಎಂದು ಕೇಳಿಕೊಂಡರು.

ಈ ಕುರಿತು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ಕೊರೊನಾ ಕಾರಣದಿಂದ ಕಂಪನಿಯಲ್ಲಿ ಉತ್ಪಾದನೆ ಕಡಿಮೆಯಾಗಿದೆ ಎಂಬ ನೆಪ ಹೇಳಿ 40 ವರ್ಷಕ್ಕೆ ಮೇಲ್ಪಟ್ಟ 400ಕ್ಕೂ ಹೆಚ್ಚು ಜನರನ್ನು ಕೆಲಸದಿಂದ ತೆಗೆಯಲಾಗಿದೆ. ಕೆಲಸಕ್ಕೆ ಸ್ವಯಂ ಸ್ವಯಂ ರಾಜಿನಾಮೆ ನೀಡುವಂತೆ ಕಂಪನಿಯೊಳಗೆ ಕೆಲವು ಗೂಂಡಾಗಳಿಂದ ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಅವರಿಗೆ ಸಿಗಬೇಕಾದ ಹಣದ ಸೌಲಭ್ಯಗಳನ್ನು ಒದಗಿಸಿಕೊಡುತ್ತೇವೆ ಎಂಬುದಾಗಿ ಜಿಂದಾಲ್ ಮಾಲಿಕರಾದ ಸಜ್ಜನ್ ಜಿಂದಾಲ್ ಹೇಳಿದ್ದಾರೆ. ಆದರೆ ಅದನ್ನು ಮಾಡುತ್ತಾರೆ ಎಂದು ಕಾರ್ಮಿಕರಿಗೆ ನಂಬಿಕೆಯಿಲ್ಲ. ಅಲ್ಲದೇ ಏಕಾಏಕಿ ಕೆಲಸ ಕಳೆದುಕೊಂಡವರು ಈಗ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...