Homeಕರೋನಾ ತಲ್ಲಣ490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ ಎಂದು ಜಿಂದಾಲ್ ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಲಾಕ್ ಡೌನ್ ನೆಪಹೇಳಿ ಜೆ ಡಬ್ಲ್ಯೂ ಎಸ್ (ಜಿಂದಾಲ್) ಕಂಪನಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಹಲವಾರು ಉದ್ಯೋಗಿಗಳು ಮತ್ತು ವಿವಿಧ ಸಂಘಟನೆಗಳು ಸೋಮವಾರ ಬಳ್ಳಾರಿಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಆಗಸ್ಟ್ 31 ರೊಳಗೆ ಸ್ವಯಂ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ, ಮೊದಲ ಹಂತದಲ್ಲಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಉದ್ಯೋಗಿಗಳು ದೂರಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಕಂಪನಿಯವರ ಬೆದರಿಕೆಗೆ ಮಣಿದು ರಾಜಿನಾಮೆ ನೀಡಿದ ಜಾಹ್ನವಿ ಎಂಬ ಉದ್ಯೋಗಿ ನಾನುಗೌರಿ.ಕಾಂ ಜೊತೆ ಮಾತನಾಡಿ, “ಲಾಕ್ ಡೌನ್ ಮುಕ್ತಾಯವಾಗುವ ಹಿಂದಿನ ರಾತ್ರಿ ಎಚ್ ಆರ್ ನನಗೆ ಫೋನ್ ಮಾಡಿದರು. ಕೊರೊನಾ ಕಾರಣದಿಂದ ಕಂಪನಿಗೆ ನಷ್ಟವಾಗಿದೆ. ಹಾಗಾಗಿ ನೀವು ಸ್ವಯಂ ರಾಜಿನಾಮೆ ಕೊಡಬೇಕು ಇಲ್ಲದಿದ್ದರೆ ನಿಮ್ಮನ್ನ ಟರ್ಮಿನೇಟ್ ಮಾಡಲಾಗುತ್ತದೆ ಎಂದು ನೇರವಾಗಿ ಹೇಳಿದರು” ಎಂದು ಅಳಲು ತೋಡಿಕೊಂಡಿದ್ದಾರೆ.

“ಎಷ್ಟು ಬೇಡಿಕೊಂಡರೂ ನಮ್ಮ ಮನವಿಗೆ ಮಣಿಯದೆ, ಇದು ಉನ್ನತ ಮಟ್ಟದ ನಿರ್ಧಾರ ಎಂದು ಹೇಳಿ ನನ್ನಿಂದ ರಾಜಿನಾಮೆ ಪಡೆದುಕೊಂಡರು. ನಮ್ಮದು ಸಾಮಾನ್ಯ ವರ್ಗದ ಕುಟುಂಬವಾಗಿದ್ದು, ನನಗೆ ಈ ಕೆಲಸ ಬಿಟ್ಟರೆ ಬೇರೆ ಆಧಾರವಿಲ್ಲ” ಎಂದು ಕಳೆದ ಹನ್ನೊಂದು ವರ್ಷಗಳಿಂದ ಜಿಂದಾಲ್ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ಜಾಹ್ನವಿ ಹೇಳಿದರು.

“ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳನ್ನೇ ಪ್ರಶ್ನಿಸಿದಾಗ, ‘You are Non Performer’ ಎಂದು ಹೇಳಿದರು. ಹನ್ನೊಂದು ವರ್ಷದಿಂದ ಇದು ಇವರಿಗೆ ತಿಳಿದಿರಲಿಲ್ಲವೇ?. ಆದರೆ ಈಗ ಈ ಕಾರಣ ನೀಡುತ್ತಿದ್ದಾರೆ. ನನ್ನ ರೀತಿ ಕಳೆದ 20-25 ವರ್ಷ ಜಿಂದಾಲ್‌ಗಾಗಿ ಕೆಲಸ ಮಾಡಿರುವವರನ್ನೂ ಉದ್ಯೋಗದಿಂದ ತೆಗೆಯಲಾಗುತ್ತಿದೆ. ಈಗ ನಾವೆಲ್ಲ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಕಂಪನಿಯಿಂದಲೇ ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ. ಯಾವ ರಾಜಕಾರಣಿಗಳು ಇದಕ್ಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೊರೊನಾ ಸಂಕಷ್ಟದ ಸಮಯದಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬೇಡಿ ಎಂದು ಪ್ರಧಾನಿಯವರೇ ಹೇಳಿದ್ದಾರೆ. ಆದರೂ ನಮ್ಮನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಇದರ ಬಗ್ಗೆ ನಾವು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ಕೈಗೊಳ್ಳಲಿದ್ದೇವೆ. ಹಾಗಾಗಿ ನಮಗೆ ಎಲ್ಲರೂ ಸಹಕರಿಸಿ” ಎಂದು ಕೇಳಿಕೊಂಡರು.

ಈ ಕುರಿತು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ಕೊರೊನಾ ಕಾರಣದಿಂದ ಕಂಪನಿಯಲ್ಲಿ ಉತ್ಪಾದನೆ ಕಡಿಮೆಯಾಗಿದೆ ಎಂಬ ನೆಪ ಹೇಳಿ 40 ವರ್ಷಕ್ಕೆ ಮೇಲ್ಪಟ್ಟ 400ಕ್ಕೂ ಹೆಚ್ಚು ಜನರನ್ನು ಕೆಲಸದಿಂದ ತೆಗೆಯಲಾಗಿದೆ. ಕೆಲಸಕ್ಕೆ ಸ್ವಯಂ ಸ್ವಯಂ ರಾಜಿನಾಮೆ ನೀಡುವಂತೆ ಕಂಪನಿಯೊಳಗೆ ಕೆಲವು ಗೂಂಡಾಗಳಿಂದ ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಅವರಿಗೆ ಸಿಗಬೇಕಾದ ಹಣದ ಸೌಲಭ್ಯಗಳನ್ನು ಒದಗಿಸಿಕೊಡುತ್ತೇವೆ ಎಂಬುದಾಗಿ ಜಿಂದಾಲ್ ಮಾಲಿಕರಾದ ಸಜ್ಜನ್ ಜಿಂದಾಲ್ ಹೇಳಿದ್ದಾರೆ. ಆದರೆ ಅದನ್ನು ಮಾಡುತ್ತಾರೆ ಎಂದು ಕಾರ್ಮಿಕರಿಗೆ ನಂಬಿಕೆಯಿಲ್ಲ. ಅಲ್ಲದೇ ಏಕಾಏಕಿ ಕೆಲಸ ಕಳೆದುಕೊಂಡವರು ಈಗ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...