Homeಕರ್ನಾಟಕಜಿಂದಾಲ್ ಪರ ಕೊಂಡಯ್ಯ ವಕೀಲಿಕೆ : ಇದರ ಹಿಂದಿದೆ ‘ದೊಡ್ಡ’ ಕೊಡುಕೊಳ್ಳುವಿಕೆ!

ಜಿಂದಾಲ್ ಪರ ಕೊಂಡಯ್ಯ ವಕೀಲಿಕೆ : ಇದರ ಹಿಂದಿದೆ ‘ದೊಡ್ಡ’ ಕೊಡುಕೊಳ್ಳುವಿಕೆ!

ಇಲ್ಲಿ ಜಿಂದಾಲ್ ಮುಖ್ಯಸ್ಥ ಸಜ್ಜನ್ ಜಿಂದಾಲ್‍ರಿಗೆ ಎಲ್ಲ ಪಕ್ಷಗಳ ನಾಯಕರ ಜೊತೆಗೂ ‘ಸ್ನೇಹ’ವಿದೆ. ಹಿಂದೆ ಅವರ ಸಹೋದರ ನವೀನ್ ಜಿಂದಾಲ್ ಕಾಂಗ್ರೆಸ್ ಸಂಸದರಾಗಿದ್ದರು.

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ರಾಜ್ಯ ಸಂಪುಟವಾಗಲೇ ಜಿಂದಾಲ್‍ಗೆ 3,666 ಎಕರೆ ಭೂಮಿಯನ್ನು ಕೊಡಲು ಒಪ್ಪಿಯಾಗಿದೆ. ಅದಕ್ಕೆ ಕಾಂಗ್ರೆಸ್ನೊಳಗಿಂದಲೇ ಸಣ್ಣ ಮಟ್ಟದ ವಿರೋಧ ವ್ಯಕ್ತವೂ ಆಗಿದೆ. ಇನ್ನೊಂದು ಕಡೆ, ಸಿಂಗಾಪುರ್ ಪ್ರವಾಸ ಮುಗಿಸಿ ಬಂದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಮೊದಲ ಹೇಳಿಕೆಯೇ ಜಿಂದಾಲ್ ಪರವಿತ್ತು. ಈಗ ಬಳ್ಳಾರಿಯ ಕಾಂಗ್ರೆಸ್‍ನ ಪಳೆಯುಳಿಕೆ ಮತ್ತು ಹಾಲಿ ಎಂಎಲ್‍ಸಿ ಕೆ.ಸಿ. ಕೊಂಡಯ್ಯ ಜಿಂದಾಲ್‍ಗೆ ಭೂಮಿ ಕೊಡುವುದನ್ನು ಸಮರ್ಥಿಸಿ ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯನ್ನೇ ನಡೆಸುವ ಸಾಹಸ ಮಾಡಿದ್ದಾರೆ! ಕೊಂಡಯ್ಯರ ಜಿಂದಾಲ್ ಪ್ರೀತಿಯ ಹಿಂದಿನ ಕತೆ ಇಲ್ಲಿದೆ…

ಜಿಂದಾಲ್ ಪರ ಎಂಎಲ್‍ಸಿ ಕೊಂಡಯ್ಯ ಪ್ರೆಸ್‍ಮೀಟ್ ಮಾಡಿದ್ದು ಬಳ್ಳಾರಿ ಆಚೆಯವರಿಗೆ ಕೊಂಚ ಆಶ್ಚರ್ಯ ಅನಿಸಬಹುದು. ಆದರೆ ಬಳ್ಳಾರಿ ಜಿಲ್ಲೆಯವರಿಗೆ ಇದರಲ್ಲೇನೂ ವಿಚಿತ್ರ ಕಾಣುತ್ತಿಲ್ಲ. ಕೊಂಡಯ್ಯ ಜಿಂದಾಲ್ ಏಜೆಂಟರು ಎಂದು ಜನ ಎಂದೋ ಲೇಬಲ್ ಅಂಟಿಸಿಯಾಗಿದೆ.

ಜಿಂದಾಲ್‍ಗೆ ಕಡಿಮೆ ದರದಲ್ಲಿ ಭೂಮಿಯನ್ನು ಕೊಡುತ್ತಿರುವ ಸರ್ಕಾರದ ನಿರ್ಧಾರದ ಬಗ್ಗೆ ಜನರಿಂದ ಪ್ರತಿರೋಧ ಎದುರಾದ ಮೇಲೆ ಸೋಮವಾರ ಫೀಲ್ಡಿಗೆ ಇಳಿದ ಎಂಎಲ್‍ಸಿ ಕೊಂಡಯ್ಯ, ‘ಜಿಂದಾಲ್ ಜೊತೆ ಹಿಂದೆ ಮಾಡಿಕೊಂಡ ಒಪ್ಪಂದದಂತೇ ಭೂಮಿಯನ್ನು ಮಾರಲು ಸರ್ಕಾರ ನಿರ್ಧರಿಸಿದೆ, ಇದು ಸರಿಯಾದ ಮಾರ್ಗ. ಲೀಸ್ ಕಂ ಸೇಲ್ ಅವಧಿ ಮುಗಿದ ಮೇಲೆ ಕಂಪನಿಗೆ ಮಾರುವುದು ಸರಿಯಾದ ಕ್ರಮ. ಈ ಬಗ್ಗೆ ಏನೂ ಗೊತ್ತಿಲ್ಲದೇ, ಜಿಂದಾಲ್‍ಗೆ ಭೂಮಿ ಮಾರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆಯುವ ಮೊದಲು ಎಚ್ಕೆ ಪಾಟೀಲರು ನನ್ನನ್ನು ಒಂದು ಮಾತು ಕೇಳಬೇಕಿತ್ತು’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ನಂತರ ಗದಗಿನಲ್ಲಿ ಪ್ರೆಸ್ ಮೀಟ್ ಮಾಡಿದ ಎಚ್ಕೆ ಪಾಟೀಲ, ‘ಕೊಂಡಯ್ಯರಿಗೆ ಕೇಳಲು ಅವರೇನು ಜಿಂದಾಲ್ ಚೇರಮನ್ನಾ?’ ಎಂದು ಪ್ರಶ್ನಿಸದ್ದಲ್ಲದೇ, ತೀರಾ ಕಡಿಮೆ ಬೆಲೆಗೆ ಭೂಮಿ ಮಾರುತ್ತಿರುವುದೇಕೆ? ಸರ್ಕಾರದ ಸಂಸ್ಥೆಗಳಿಗೆ 2 ಸಾವಿರ ಕೋಟಿಯಷ್ಟು ಬಾಕಿ ಉಳಿಸಿಕೊಂಡಿರುವ ಜಿಂದಾಲ್ ಕಂಪನಿ ಒಪ್ಪಂದದ ಪ್ರಕಾರ ನಡೆದುಕೊಂಡಿಲ್ಲ. ಅಷ್ಟಲ್ಲದೇ ಅದರ ಮೇಲೆ ಸುಪ್ರಿಂನಲ್ಲಿ ಕೇಸು ಇರುವಾಗಲೂ ಭೂಮಿ ಮಾರಲು ತರಾತುರಿ ಏಕೆ?’ ಎಂದು ಕೊಂಡಯ್ಯರ ನಡೆಯನ್ನು ಟೀಕಿಸಿದರು.

ಈಗ ಬಳ್ಳಾರಿಯ ವ್ಯಾಟ್ಸಪ್ ಗ್ರೂಪ್‍ಗಳಲ್ಲಿ ಈ ಕುರಿತು ಪರ-ವಿರೋಧದ ಚರ್ಚೆಯಿದೆಯಾದರೂ, ಕೊಂಡಯ್ಯ ಜಿಂದಾಲ್ ಏಜೆಂಟ್ ಎಂಬ ಸಂದೇಶಗಳೇ ರಾರಾಜಿಸುತ್ತಿವೆ. 4 ದಿನಗಳ ಹಿಂದೆ, ‘ಸರ್ಕಾರದ ನಡೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತೇವೆ’ ಎಂದಿದ್ದ ವಿಪಕ್ಷ ನಾಯಕ ಯಡಿಯೂರಪ್ಪ ನಂತರ ಆ ಕುರಿತು ಮಾತೇ ಆಡಿಲ್ಲ. ಬಳ್ಳಾರಿ ಜಿಲ್ಲೆಯ ಬಿಜೆಪಿ ಪ್ರತಿನಿಧಿಗಳೂ ಮೌನದಲ್ಲೇ ಇದ್ದಾರೆ.

ಕೊಂಡಯ್ಯ-ಜಿಂದಾಲ್ ಲಿಂಕು!
ಗಣಿ ಉದ್ಯಮದಲ್ಲಿ ಅಷ್ಟೇನೂ ಯಶಸ್ಸು ಕಾಣದ ಕೊಂಡಯ್ಯರು ನಂತರ ಜಿಂದಾಲ್ ಪರವಾಗಿ ಕೆಲಸ ಮಾಡುತ್ತಲೇ ಬಂದವರು. ಹಿಂದೆ ಬಳ್ಳಾರಿ ಸ್ಟೀಲ್ಸ್ ಮತ್ತು ಅಲಾಯಡ್ಸ್ ಎಂಬ ಕಂಪನಿಯಲ್ಲಿ ಸಣ್ಣ ಶೇರು ಹೊಂದಿದ್ದ ಕೊಂಡಯ್ಯರಿಗೆ ಬೃಹತ್ ಗಣಿ ಉದ್ಯಮಿಯಾಗಲು ಸಾಧ್ಯವಾಗಲಿಲ್ಲ. ಆದರೆ ಕಾಂಗ್ರೆಸ್‍ನಲ್ಲಿ ಒಂದಿಲ್ಲೊಂದು ಸ್ಥಾನಮಾನ ಪಡೆಯುತ್ತಲೇ ಬಂದಿರುವ ಅವರಿಗೆ ಜಿಂದಾಲ್ ಆಪ್ತವಾಗಿತು. 1990ರ ದಶಕದಲ್ಲಿ ಖಾಸಗೀಕರಣ ಪರ್ವ ಆರಂಭವಾದ ಮೇಲೆ ಸರ್ಕಾರಿ ಸ್ವಾಮ್ಯದ ವಿಜಯನಗರ ಸ್ಟೀಲ್ಸ್ ಅನ್ನು ಜಿಂದಾಲ್ ಮಡಿಲಿಗೆ ಹಾಕಲಾಗಿತು. ಆಗ ಕೇವಲ ಸಣ್ಣ ಸಣ್ಣ ಘಟಕಗಳನ್ನಷ್ಟೇ ಹೊಂದಿದ್ದ ಜಿಂದಾಲ್ ಬೃಹತ್ ಕಾರ್ಯಾಚರಣೆ ಶುರು ಮಾಡಿದ್ದು ರಾಜ್ಯದಲ್ಲಿ ಎಸ್.ಎಂ ಕೃಷ್ಣ ಸರ್ಕಾರ ಬಂದ ಮೇಲೆ.

ಅಷ್ಟೊತ್ತಿಗೆ ಎರಡು ಸಲ ಎಂಪಿಗಿರಿ ಮುಗಿಸಿ ರಾಜ್ಯಸಭಾ ಸದಸ್ಯರಾಗಿದ್ದ ಕೊಂಡಯ್ಯ ಜಿಂದಾಲ್ ಕಂಪನಿಯ ಪರ ಸರ್ಕಾರಿ ಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು ಎಂದು ಜನರೇ ಹೇಳುತ್ತಾರೆ. ಆಗ ಮಲ್ಲಿಕಾರ್ಜುನ ಖರ್ಗೆ ಜಲಸಂಪನ್ಮೂಲ ಸಚಿವರಿದ್ದಾಗ ಜಿಂದಾಲ್‍ಗೆ ತುಂಗಭದ್ರಾ ನೀರು ಕೊಡಿಸುವಲ್ಲಿ ಕೊಂಡಯ್ಯ ಪಾತ್ರವೂ ಇತ್ತು. ಮುಂದೆ ದೂರದ ಆಲಮಟ್ಟಿ ಡ್ಯಾಮಿನಿಂದ ಪೈಪ್‍ಲೈನ್ ಮಾಡಿಸಿ ಜಿಂದಾಲ್‍ಗೆ ನೀರು ಒದಗಿಸಿವ ವ್ಯವಸ್ಥೆಯೂ ಆಗಿತು.

ಇಲ್ಲಿ ಜಿಂದಾಲ್ ಮುಖ್ಯಸ್ಥ ಸಜ್ಜನ್ ಜಿಂದಾಲ್‍ರಿಗೆ ಎಲ್ಲ ಪಕ್ಷಗಳ ನಾಯಕರ ಜೊತೆಗೂ ‘ಸ್ನೇಹ’ವಿದೆ. ಹಿಂದೆ ಅವರ ಸಹೋದರ ನವೀನ್ ಜಿಂದಾಲ್ ಕಾಂಗ್ರೆಸ್ ಸಂಸದರಾಗಿದ್ದರು. ಪ್ರಧಾನಿ ಮೋದಿ ಪಾಕ್‍ಗೆ ದಿಢೀರನೆ ಭೇಟಿ ಕೊಟ್ಟು ನವಾಜ್ ಶರೀಫ್ ಮನೆಯ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರಲ್ಲ? ಆ ಭೇಟಿ ಏರ್ಪಡಿಸಿದ್ದೇ ಸಜ್ಜನ ಜಿಂದಾಲ್ ಎಂಬ ಮಾತಿಗೆ ತಕ್ಕಂತೆ ಸಜ್ಜನ್ ಆ ಭೇಟಿಗೂ ಮೊದಲೇ ಅಲ್ಲಿ ಹಾಜರಿದ್ದರು. ಪಾಕ್ ನ ನವಾಜ್ ಶರೀಫರ ಕುಟುಂಬದ ಉಕ್ಕು ವ್ಯವಹಾರದ ಜೊತೆ ಸಜ್ಜನ್‍ಗೆ ಲಿಂಕ್ ಇದೆ ಎನ್ನಲಾಗುತ್ತಿದೆ.

ಸಜ್ಜನ್ ಜಿಂದಾಲ್

ಒಪ್ಪಂದ ಮುರಿಯುತ್ತಲೇ ಬಂದ ಜಿಂದಾಲ್
ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರಾಜ್ಯದ ಎಲ್ಲ ಪಕ್ಷಗಳ ಜೊತೆಗೂ ಸಜ್ಜನ್ ಜಿಂದಾಲ್‍ಗೆ ಉತ್ತಮ ‘ಬಾಂಧವ್ಯ’ವಿದೆ. ಇಂತಹ ಬಾಂಧವ್ಯ ಬೆಸೆಯಲೆಂದೇ ಕೊಂಡಯ್ಯನಂತವರು ಓಡಾಡುತ್ತಾರೆ. ದಿಢೀರನೆ ಜಿಂದಾಲ್ ಪರ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಸದ್ಯ ರಾಯಚೂರು, ಬಳ್ಳಾರಿ, ಕೊಪ್ಪಳ ಭಾಗಕ್ಕೆ ವರ್ಷಕ್ಕೆ ಒಂದೇ ಬೆಳೆ ಎಂಬ ನಿರ್ಬಂಧವಿದೆ. ಆದರೆ, ಒಳಹರಿವು ಇದ್ದಾಗ ಮಾತ್ರ (ನವಂಬರ್‍ನಿಂದ ಡಿಸೆಂಬರ್ 25) ನದಿ ನೀರನ್ನು ತೆಗೆದುಕೊಳ್ಳಬೇಕೆಂಬ ನಿರ್ಬಂಧ ಇದ್ದರೂ ಜಿಂದಾಲ್ ಕಂಪನಿ ಮಾತ್ರ ಮಾರ್ಚ್‍ವರೆಗೂ ನದಿ ನೀರನ್ನು ಪಂಪ್ ಮಾಡುತ್ತಲೇ ಇದೆ. ವಾಸ್ತವದಲ್ಲಿ ಹೊಸಪೇಟೆ ಡ್ಯಾಮ್‍ಗೆ ಸೇರುವ ಹಳ್ಳದ ನೀರನ್ನು ಜಿಂದಾಲ್ ಬಳಸಬೇಕು ಅಷ್ಟೇ. ಆದರೆ, ಡ್ಯಾಮ್ ಪರಿಧಿಯೊಳಗೆ ಮೋಟಾರ್ ಪಂಪ್ ಕೂಡಿಸಿರುವ ಜಿಂದಾಲ್ ಕಂಪನಿ ಡ್ಯಾಮ್‍ನಿಂದಲೇ ನೀರು ಎತ್ತಿ, ಜಿಂದಾಲ್ ಆವರಣದಲ್ಲಿರುವ ತನ್ನ ಕೆರೆಗೆ ಪಂಪ್ ಮಾಡುತ್ತಿದೆ.

ಇನ್ನೊಂದು ಕಡೆ ಭುವನಹಳ್ಳಿ ಬಳಿ ಏಜೆಂಟರ ಮೂಲಕ 800 ಎಕರೆಯಷ್ಟು ಭೂಮಿ ಖರೀದಿಸಿರುವ ಜಿಂದಾಲ್ ಅಲ್ಲಿ ಒಂದು ದೊಡ್ಡ ಕೆರೆ ನಿರ್ಮಿಸಿ ಅಲ್ಲಿಗೂ ನೀರು ಹರಿಸುತ್ತಿದೆ. ಕುಡಿಯಲು, ಬೇಸಾಯಕ್ಕೆ ನೀರಿಲ್ಲದಿದ್ದರೂ ಜಿಂದಾಲ್‍ಗೆ ಪಕ್ಕದ ಹೊಸಪೇಟೆಯ ಡ್ಯಾಮ್‍ನಿಂದ ತುಂಗಭದ್ರಾ ನೀರು ಮತ್ತು ದೂರದ ಆಲಮಟ್ಟಿಯಿಂದ ಕೃಷ್ಣಾ ನೀರು ಯಥೇಚ್ಛವಾಗಿ ಹರಿಯುತ್ತಲೇ ಇದೆ.

ಹೀಗೆ ಹಿಂದಿನ ಒಪ್ಪಂದದಲ್ಲಿನ ಅಂಶಗಳನ್ನು ಪಾಲಿಸದೇ ಇರುವ ಜಿಂದಾಲ್ ಕಂಪನಿ ಪರ ನಿಂತು ಕೊಂಡಯ್ಯ ಪತ್ರಿಕಾಗೋಷ್ಠಿ ನಡೆಸುತ್ತಾರೆಂದರೆ? ಒಪ್ಪಂದದ ಪ್ರಕಾರ ಸರ್ಕಾರ ಜಿಂದಾಲ್‍ಗೆ ಆ ಲೀಸ್ ಭೂಮಿಯನ್ನು ಮಾರುದ್ದು ಸರಿಯಾಗಿಯೇ ಇದೆ ಎಂದು ವಾದಿಸುತ್ತಾರೆಂದರೆ?

ವೈಕುಂಠದಿಂದ ಹಂಪಿಹೌಸ್‍ಗೆ ಶಿಫ್ಟ್!
ಹಿಂದೆಲ್ಲ ಬಳ್ಳಾರಿ ಅಥವಾ ಕೊಪ್ಪಳ ಜಿಲ್ಲೆಗೆ ಭೇಟಿ ಕೊಟ್ಟ ರಾಜ್ಯದ ಮುಖ್ಯಮಂತ್ರಿಗಳು ಹೊಸಪೇಟೆಯಲ್ಲಿ ಅಚ್ಚುಕಟ್ಟಾಗಿರುವ ‘ವೈಕುಂಠ’ ಎಂಬ ಸರ್ಕಾರಿ ಅತಿಥಿ ಗೃಹದಲ್ಲಿ ತಂಗುತ್ತಿದ್ದರು. ಎಸ್‍ಎಂ. ಕೃಷ್ಣ ಮುಖ್ಯಮಂತ್ರಿ ಅವಧಿಯಲ್ಲಿ ಕೊಂಡಯ್ಯರ ವಿಶೇಷ ಆಸಕ್ತಿಯ ಪರಿಣಾಮವಾಗಿ ಮುಖ್ಯಮಂತ್ರಿಗಳು ಜಿಂದಾಲ್‍ನ ಆವರಣದಲ್ಲಿರುವ ‘ಹಂಪಿ ಹೌಸ್’ನಲ್ಲಿ ವಿಶ್ರಾಂತಿ ಮಾಡುವ ಪರಿಪಾಠ ಶುರು ಮಾಡಲಾಗಿತು. ಲೋಕಲ್ ರಾಜಕಾರಣಿಗಳಿಗೂ ಪ್ರವೇಶ ನಿಷಿದ್ಧವಾಗಿರುವ ವಿಶ್ರಾಂತಿ ಗೃಹವಿದೆ. ಮುಂದೆ ಧರ್ಮಸಿಂಗ್, ಯಡಿಯೂರಪ್ಪ, ಕುಮಾರಸ್ವಾಮಿ, ಸಿದ್ದರಾಮಯ್ಯ ಎಲ್ಲ ಈ ಜಿಂದಾಲ್‍ನ ‘ಹಂಪಿ ಹೌಸ್’ನ ಆತಿಥ್ಯ ಸ್ವೀಕರಿಸಿಯೇ ಬಂದರು.

ಇದನ್ನು ಓದಿ: ದುಷ್ಟ ಜಿಂದಾಲ್ ಗೆ ಭೂಮಿ ನೀಡುತ್ತಿರುವ ಭ್ರಷ್ಟ ಸರ್ಕಾರ

ಕೊಂಡಯ್ಯರ ಕಾಳಜಿ ಹಿಂದಿನ ಅಸಲಿಯತ್ತು ಇದು. ಜಿಲ್ಲೆಯ ಭತ್ತದ ಬೆಳೆಗಾರರಿಗೆ ನೀರು ತಲುಪುವಲ್ಲಿ ತೊಂದರೆಯಾದಾಗ, ಕುಡಿಯುವ ನೀರಿನ ಸಮಸ್ಯೆಯಾದಾಗ ಎಂದೂ ಪ್ರೆಸ್‍ಮೀಟ್ ಮಾಡದ ಕೊಂಡಯ್ಯ ಜಿಂದಾಲ್ ಪರ ಏಕಾಏಕಿ ಪ್ರೆಸ್‍ಮೀಟ್ ಮಾಡುವುದರ ಹಿಂದೆ ಏನೆಲ್ಲ ಇದೆಯಲ್ಲವೇ? ಹಿಂದೊಮ್ಮೆ ಹೊಸಪೇಟೆ ಡ್ಯಾಮ್‍ನಲ್ಲಿ ನೀರಿನ ಲಭ್ಯತೆ ಕಡಿಮೆ ಇದ್ದಾಗ, ಅಲ್ಲಿನ ಶಾಸಕ ಆನಂದಸಿಂಗ್ ಉದ್ಯಮಗಳಿಗೆ ಸದ್ಯ ನೀರು ಪೂರೈಕೆ ನಿಲ್ಲಿಸಿ, ಕುಡಿಯುವ ನೀರಿಗಷೇ ಮೀಸಲಿಡಿ ಎಂದಾಗಲೂ ಕೊಂಡಯ್ಯ ಪ್ರೆಮೀಟ್ ಮಾಡಿ, ಒಪ್ಪಂದದ ಪ್ರಕಾರ ಉದ್ಯಮಗಳಿಗೆ ನೀರು ಕೊಡುವುದು ಸರ್ಕಾರದ ಕರ್ತವ್ಯ ಎಂದಿದ್ದರು. ಸದ್ಯ ಎಂ.ಎಲ್.ಸಿ ಯಾಗಿರುವ ಅವರು ವಿಧಾನಸೌಧದ ಮೊಗಸಾಲೆಯಲ್ಲಿ ಕಾಣಿಸಿಕೊಂಡರೆ, ಓಹ್ ಜಿಂದಾಲ್ ಫೈಲ್ ಕ್ಲಿಯರನ್ಸ್‍ಗೆ ಬಂದಿದ್ದಾರೇನೋ ಎಂಬ ಮಾತು ಪ್ರಚಲಿತಕ್ಕೆ ಬಂದಿದೆಯಂತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....