Homeಕರ್ನಾಟಕ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ತನ್ನ ಹೇಳಿಕೆಗೆ RSS ನಾಯಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ಅದರ ಕೆಲವು ತುಣುಕು ಇಲ್ಲಿದೆ

- Advertisement -
- Advertisement -

ಮಂಗಳೂರಿನ ಉಳ್ಳಾಲವು ’ಪಾಕಿಸ್ತಾನ’ ಆಗಿದೆ ಎಂದು ವಿವಾದ ಸೃಷ್ಟಿಸಿದ್ದ RSS ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ವಿರೋಧಿಸಿ ಉಳ್ಳಾಲವನ್ನು ಪ್ರತಿನಿಧಿಸುವ ಶಾಸಕ ಯು.ಟಿ. ಖಾದರ್‌ ತಿರುಗೇಟು ನೀಡಿದ್ದು, “ಕಲ್ಲಡ್ಕ ಪ್ರಭಾಕರ ಭಟ್ಟರ ಪಾಕಿಸ್ತಾನ ಪ್ರೇಮವನ್ನು ನೋಡಿದರೆ ಮುಹಮ್ಮದ್ ಅಲಿ ಜಿನ್ನಾ ಅವರ ಗುರು ಇದ್ದಂತಿದೆ” ಎಂದು ಹೇಳಿದ್ದಾರೆ.

“ಅವರ ಪಾಕಿಸ್ತಾನ ಪ್ರೇಮ ಹೊಸತೇನು ಅಲ್ಲ. ಅವರು ಮಾತು ಮಾತಿಗೆ ಪಾಕಿಸ್ಥಾನದ ಜಪ ಮಾಡುವುದನ್ನು ನೋಡಿದರೆ ಮಹಮದ್ ಅಲಿ ಜಿನ್ಹಾ ಅವರ ಗುರು ಇದ್ದಂತಿದೆ. ಅವರು ಭಾರತಕ್ಕಿಂತ ಪಾಕಿಸ್ಥಾನದ ಇತಿಹಾಸ ಹೆಚ್ಚು ಓದಿದಂತಿದೆ” ಎಂದು ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

“ಸಮಾಜದಲ್ಲಿ ವಿಷಕಕ್ಕುವ ಕೆಲ ಸರ್ಪಗಳಿಗೆ ಪಾಕಿಸ್ಥಾನವೆ ಬಂಡವಾಳ. ನನಗೆ ಉಳ್ಳಾಲದ ಕಣ ಕಣದಲ್ಲೂ ಭಾರತದ ಬಹುಸಂಸ್ಕೃತಿ ಕಾಣುತ್ತದೆ. ಪೋರ್ಚುಗೀಸರನ್ನು ಒದ್ದೋಡಿಸಿದ ಅಬ್ಬಕ್ಕನ ಸೈನ್ಯದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರು ಒಟ್ಟಾಗಿಯೆ ಇದ್ದರು. ಅಂದಿನ ಧಾರ್ಮಿಕ ಕೇಂದ್ರಗಳು ಇಂದೂ ಇದೆ. ಅಂದಿನ ಸಂಪ್ರದಾಯಗಳು ಸರ್ವಧರ್ಮಗಳಿಂದ ಇಂದೂ ಕೂಡ ಗೌರವಿಸಲ್ಪಡುತ್ತಿದೆ. ಉಳ್ಳಾಲದ ಸೌಹಾರ್ದ ಸಂಸ್ಕೃತಿ ಬಲಪಡಿಸುವ ಮಾತುಗಳೆ ಸರ್ವರಿಂದ ಬರಲಿ ಎಂಬುದು ನನ್ನ ಅಪೇಕ್ಷೆ” ಎಂದು ಖಾದರ್ ತಿಳಿದ್ದಾರೆ.

ಮಂಗಳೂರಿನ ಕಿನ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್‌ ಭಟ್, “ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ. ಪಾಕಿಸ್ತಾನ ಯಾಕೆ ಆಯಿತು? ’ನಮ್ಮವರ’ ಸಂಖ್ಯೆ ಕಡಿಮೆ ಇತ್ತು, ’ಅವರ’ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ” ಎಂದು ಧ್ವೇಷ ಬಿತ್ತುವ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

“ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು” ಎಂದು ಸೇರಿದ್ದ ಜನರನ್ನು ಉದ್ದೇಶಿಸಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಟ್ರೋಲ್!

ಪ್ರಭಾಕರ ಭಟ್ಟರ ವಿವಾದಾತ್ಮಕ ಹೇಳಿಕೆಗೆ ಕರಾವಳಿಗರು ಅಸಮಧಾನ ವ್ಯಕ್ತಪಡಿಸಿದ್ದು, ಕೆಲವರು ಗಂಭೀರವಾಗಿ ಪ್ರತಿಕ್ರಯಿಸಿದ್ದರೆ, ಇನ್ನು ಕೆಲವರು ಹಾಸ್ಯದಿಂದ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...