Homeಕರ್ನಾಟಕ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ತನ್ನ ಹೇಳಿಕೆಗೆ RSS ನಾಯಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ಅದರ ಕೆಲವು ತುಣುಕು ಇಲ್ಲಿದೆ

- Advertisement -
- Advertisement -

ಮಂಗಳೂರಿನ ಉಳ್ಳಾಲವು ’ಪಾಕಿಸ್ತಾನ’ ಆಗಿದೆ ಎಂದು ವಿವಾದ ಸೃಷ್ಟಿಸಿದ್ದ RSS ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ವಿರೋಧಿಸಿ ಉಳ್ಳಾಲವನ್ನು ಪ್ರತಿನಿಧಿಸುವ ಶಾಸಕ ಯು.ಟಿ. ಖಾದರ್‌ ತಿರುಗೇಟು ನೀಡಿದ್ದು, “ಕಲ್ಲಡ್ಕ ಪ್ರಭಾಕರ ಭಟ್ಟರ ಪಾಕಿಸ್ತಾನ ಪ್ರೇಮವನ್ನು ನೋಡಿದರೆ ಮುಹಮ್ಮದ್ ಅಲಿ ಜಿನ್ನಾ ಅವರ ಗುರು ಇದ್ದಂತಿದೆ” ಎಂದು ಹೇಳಿದ್ದಾರೆ.

“ಅವರ ಪಾಕಿಸ್ತಾನ ಪ್ರೇಮ ಹೊಸತೇನು ಅಲ್ಲ. ಅವರು ಮಾತು ಮಾತಿಗೆ ಪಾಕಿಸ್ಥಾನದ ಜಪ ಮಾಡುವುದನ್ನು ನೋಡಿದರೆ ಮಹಮದ್ ಅಲಿ ಜಿನ್ಹಾ ಅವರ ಗುರು ಇದ್ದಂತಿದೆ. ಅವರು ಭಾರತಕ್ಕಿಂತ ಪಾಕಿಸ್ಥಾನದ ಇತಿಹಾಸ ಹೆಚ್ಚು ಓದಿದಂತಿದೆ” ಎಂದು ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

“ಸಮಾಜದಲ್ಲಿ ವಿಷಕಕ್ಕುವ ಕೆಲ ಸರ್ಪಗಳಿಗೆ ಪಾಕಿಸ್ಥಾನವೆ ಬಂಡವಾಳ. ನನಗೆ ಉಳ್ಳಾಲದ ಕಣ ಕಣದಲ್ಲೂ ಭಾರತದ ಬಹುಸಂಸ್ಕೃತಿ ಕಾಣುತ್ತದೆ. ಪೋರ್ಚುಗೀಸರನ್ನು ಒದ್ದೋಡಿಸಿದ ಅಬ್ಬಕ್ಕನ ಸೈನ್ಯದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರು ಒಟ್ಟಾಗಿಯೆ ಇದ್ದರು. ಅಂದಿನ ಧಾರ್ಮಿಕ ಕೇಂದ್ರಗಳು ಇಂದೂ ಇದೆ. ಅಂದಿನ ಸಂಪ್ರದಾಯಗಳು ಸರ್ವಧರ್ಮಗಳಿಂದ ಇಂದೂ ಕೂಡ ಗೌರವಿಸಲ್ಪಡುತ್ತಿದೆ. ಉಳ್ಳಾಲದ ಸೌಹಾರ್ದ ಸಂಸ್ಕೃತಿ ಬಲಪಡಿಸುವ ಮಾತುಗಳೆ ಸರ್ವರಿಂದ ಬರಲಿ ಎಂಬುದು ನನ್ನ ಅಪೇಕ್ಷೆ” ಎಂದು ಖಾದರ್ ತಿಳಿದ್ದಾರೆ.

ಮಂಗಳೂರಿನ ಕಿನ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್‌ ಭಟ್, “ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ. ಪಾಕಿಸ್ತಾನ ಯಾಕೆ ಆಯಿತು? ’ನಮ್ಮವರ’ ಸಂಖ್ಯೆ ಕಡಿಮೆ ಇತ್ತು, ’ಅವರ’ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ” ಎಂದು ಧ್ವೇಷ ಬಿತ್ತುವ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

“ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು” ಎಂದು ಸೇರಿದ್ದ ಜನರನ್ನು ಉದ್ದೇಶಿಸಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಟ್ರೋಲ್!

ಪ್ರಭಾಕರ ಭಟ್ಟರ ವಿವಾದಾತ್ಮಕ ಹೇಳಿಕೆಗೆ ಕರಾವಳಿಗರು ಅಸಮಧಾನ ವ್ಯಕ್ತಪಡಿಸಿದ್ದು, ಕೆಲವರು ಗಂಭೀರವಾಗಿ ಪ್ರತಿಕ್ರಯಿಸಿದ್ದರೆ, ಇನ್ನು ಕೆಲವರು ಹಾಸ್ಯದಿಂದ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...