Homeಕರ್ನಾಟಕ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ತನ್ನ ಹೇಳಿಕೆಗೆ RSS ನಾಯಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ಅದರ ಕೆಲವು ತುಣುಕು ಇಲ್ಲಿದೆ

- Advertisement -
- Advertisement -

ಮಂಗಳೂರಿನ ಉಳ್ಳಾಲವು ’ಪಾಕಿಸ್ತಾನ’ ಆಗಿದೆ ಎಂದು ವಿವಾದ ಸೃಷ್ಟಿಸಿದ್ದ RSS ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ವಿರೋಧಿಸಿ ಉಳ್ಳಾಲವನ್ನು ಪ್ರತಿನಿಧಿಸುವ ಶಾಸಕ ಯು.ಟಿ. ಖಾದರ್‌ ತಿರುಗೇಟು ನೀಡಿದ್ದು, “ಕಲ್ಲಡ್ಕ ಪ್ರಭಾಕರ ಭಟ್ಟರ ಪಾಕಿಸ್ತಾನ ಪ್ರೇಮವನ್ನು ನೋಡಿದರೆ ಮುಹಮ್ಮದ್ ಅಲಿ ಜಿನ್ನಾ ಅವರ ಗುರು ಇದ್ದಂತಿದೆ” ಎಂದು ಹೇಳಿದ್ದಾರೆ.

“ಅವರ ಪಾಕಿಸ್ತಾನ ಪ್ರೇಮ ಹೊಸತೇನು ಅಲ್ಲ. ಅವರು ಮಾತು ಮಾತಿಗೆ ಪಾಕಿಸ್ಥಾನದ ಜಪ ಮಾಡುವುದನ್ನು ನೋಡಿದರೆ ಮಹಮದ್ ಅಲಿ ಜಿನ್ಹಾ ಅವರ ಗುರು ಇದ್ದಂತಿದೆ. ಅವರು ಭಾರತಕ್ಕಿಂತ ಪಾಕಿಸ್ಥಾನದ ಇತಿಹಾಸ ಹೆಚ್ಚು ಓದಿದಂತಿದೆ” ಎಂದು ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

“ಸಮಾಜದಲ್ಲಿ ವಿಷಕಕ್ಕುವ ಕೆಲ ಸರ್ಪಗಳಿಗೆ ಪಾಕಿಸ್ಥಾನವೆ ಬಂಡವಾಳ. ನನಗೆ ಉಳ್ಳಾಲದ ಕಣ ಕಣದಲ್ಲೂ ಭಾರತದ ಬಹುಸಂಸ್ಕೃತಿ ಕಾಣುತ್ತದೆ. ಪೋರ್ಚುಗೀಸರನ್ನು ಒದ್ದೋಡಿಸಿದ ಅಬ್ಬಕ್ಕನ ಸೈನ್ಯದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರು ಒಟ್ಟಾಗಿಯೆ ಇದ್ದರು. ಅಂದಿನ ಧಾರ್ಮಿಕ ಕೇಂದ್ರಗಳು ಇಂದೂ ಇದೆ. ಅಂದಿನ ಸಂಪ್ರದಾಯಗಳು ಸರ್ವಧರ್ಮಗಳಿಂದ ಇಂದೂ ಕೂಡ ಗೌರವಿಸಲ್ಪಡುತ್ತಿದೆ. ಉಳ್ಳಾಲದ ಸೌಹಾರ್ದ ಸಂಸ್ಕೃತಿ ಬಲಪಡಿಸುವ ಮಾತುಗಳೆ ಸರ್ವರಿಂದ ಬರಲಿ ಎಂಬುದು ನನ್ನ ಅಪೇಕ್ಷೆ” ಎಂದು ಖಾದರ್ ತಿಳಿದ್ದಾರೆ.

ಮಂಗಳೂರಿನ ಕಿನ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್‌ ಭಟ್, “ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ. ಪಾಕಿಸ್ತಾನ ಯಾಕೆ ಆಯಿತು? ’ನಮ್ಮವರ’ ಸಂಖ್ಯೆ ಕಡಿಮೆ ಇತ್ತು, ’ಅವರ’ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ” ಎಂದು ಧ್ವೇಷ ಬಿತ್ತುವ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

“ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು” ಎಂದು ಸೇರಿದ್ದ ಜನರನ್ನು ಉದ್ದೇಶಿಸಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಟ್ರೋಲ್!

ಪ್ರಭಾಕರ ಭಟ್ಟರ ವಿವಾದಾತ್ಮಕ ಹೇಳಿಕೆಗೆ ಕರಾವಳಿಗರು ಅಸಮಧಾನ ವ್ಯಕ್ತಪಡಿಸಿದ್ದು, ಕೆಲವರು ಗಂಭೀರವಾಗಿ ಪ್ರತಿಕ್ರಯಿಸಿದ್ದರೆ, ಇನ್ನು ಕೆಲವರು ಹಾಸ್ಯದಿಂದ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...