Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...