Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...