Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...