Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...