Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...