Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...