Homeಮುಖಪುಟಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್ ಭೇಟಿಯಾದ ಜಿತನ್ ಮಾಂಜಿ: ಬಿಹಾರದಲ್ಲಿ ರಾಜಕೀಯ ಸಂಚಲನ ಆರಂಭ

"ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ" ಎಂದು ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ದೇಶಾದ್ಯಂತ ಪಕ್ಷಾಂತರಗಳ ಪರ್ವ ಆರಂಭಗೊಂಡಿದೆ. ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರೆ, ಬಂಗಾಳದಲ್ಲಿ ಮುಕುಲ್ ರಾಯ್ ಮತ್ತು ಅವರ ಪುತ್ರ ಬಿಜೆಪಿ ತೊರೆದು ಟಿಎಂಸಿಗೆ ಮರಳಿದ್ದಾರೆ. ಈಗ ಬಿಹಾರದಲ್ಲಿ ಎನ್‌ಡಿಎ ಭಾಗವಾಗಿರುವ ಹಿಂದೂಸ್ತಾನ್ ಅವಾಮ್ ಮೋರ್ಚಾದ ಹಿರಿಯ ನಾಯಕ ಜಿತನ್ ರಾಮ್ ಮಾಂಜಿಯವರು ಆರ್‌ಜೆಡಿಯ ತೇಜ್ ಪ್ರತಾಪ್ ಯಾದವ್‌ರವರನ್ನು ಭೇಟಿಯಾಗಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಕಳೆದ ವರ್ಷ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಇರುವಂತೆ ಜಿತನ್ ಮಾಂಜಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆಗಿನ ಮಹಾಘಟಬಂಧನ್ ತ್ಯಜಿಸಿ ಎನ್‌ಡಿಎ ಒಕ್ಕೂಟ ಸೇರಿದ್ದರು. ಇದು ಚುನಾವಣಾ ಫಲಿತಾಂಶದಲ್ಲಿ ಪ್ರಭಾವ ಬೀರಿದೆ ಎನ್ನಲಾಗುತ್ತಿತ್ತು. ಸದ್ಯ ಸರ್ಕಾರದ ಪಾಲುದಾರರಾಗಿರುವ ಅವರು ಬಿಜೆಪಿಯೊಂದಿಗೆ ಮನಸ್ತಾಪ ಹೊಂದಿದ್ದಾರೆ ಎನ್ನಲಾಗಿದೆ.

ಬಿಹಾರದ ಬಂಕಾ ಜಿಲ್ಲೆಯ ಮದರಸಾವೊಂದರಲ್ಲಿ ಬಾಂಬ್‌ ಸ್ಪೋಟದ ನಂತರ ಅವರು ತಮ್ಮ ಬಿಜೆಪಿ ಜೊತೆಗಿನ ಮನಸ್ತಾಪ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಮದರಸಾಗಳನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣ ಎಂದು ಕರೆದಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಂಜಿ ರಾಜಕೀಯ ಲಾಭಕ್ಕಾಗಿ ಸಮುದಾಯವೊಂದನ್ನು ಟಾರ್ಗೆಟ್‌ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

“ಬಡ ದಲಿತರು ಮುಂದೆ ಬಂದರೆ ಅವರನ್ನು ನಕ್ಸಲರು ಎನ್ನುತ್ತೀರಿ, ಬಡ ಮುಸ್ಲಿಮರು ಮದರಸಾಗಳಲ್ಲಿ ಅಧ್ಯಯನ ಮಾಡಿದರೆ ಅವರನ್ನು ಭಯೋತ್ಪಾದಕರು ಎನ್ನುತ್ತೀರಿ.
ಸಹೋದರ, ಅಂತಹ ಮನಸ್ಥಿತಿಯಿಂದ ಹೊರಬನ್ನಿ, ಇದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಒಳ್ಳೆಯದಲ್ಲ. ಬಂಕಾ ಬಾಂಬ್ ಸ್ಫೋಟದ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ” ಎಂದು ಮಾಂಜಿಯವರು ಜೂನ್ 10 ರಂದು ಟ್ವೀಟ್ ಮಾಡಿದ್ದರು.

ಇದೇ ಸಮಯದಲ್ಲಿ ಆರ್‌ಜೆಡಿ ಮುಖಂಡ, ಲಾಲೂ ಪ್ರಸಾದ್ ಯಾದವ್‌ರವರ ಮಗ ತೇಜ್ ಪ್ರತಾಪ್ ಯಾದವ್ ಮಾಂಜಿಯವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ನಂತರ “ಮಾಂಜಿಯವರು ಮರಳಿ ಮಹಾಘಟಬಂಧನ್‌ಗೆ ಬರುವುದಾದರೆ ಅವರಿಗೆ ಮುಕ್ತ ಸ್ವಾಗತವಿದೆ” ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಬಿಹಾರ ರಾಜಕೀಯದಲ್ಲಿ ಸಂಚಲನ ಉಂಟುಮಾಡುತ್ತಿದ್ದಂತೆ, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಜೆಪಿಯ ಎಲ್ಲಾ ಸಚಿವರು, ಶಾಸಕರಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮಾಂಜಿ ಎನ್‌ಡಿಎ ತೊರೆಯುತ್ತಾರೆ ಎಂಬುದನ್ನು ಅಲ್ಲಗೆಳೆದಿದ್ದಾರೆ.

ಮಾಜಿ ಸಿಎಂ ಜಿತನ್ ರಾಮ್ ಮಾಂಜಿಯವರು ಎನ್‌ಡಿಎಯ ಹಿರಿಯ ನಾಯಕರು. ಅವರು ರಾಜಕೀಯ ಮುಖಂಡರ ಮನೆಗೆ ಸೌಜನ್ಯದ ಭೇಟಿ ನೀಡಿದ ಕೂಡಲೇ ನಾವು ಯಾವುದೇ ರಾಜಕೀಯ ತೀರ್ಮಾನಗಳಿಗೆ ಬರಬಾರದು. ಅವರು ಬಿಹಾರ ದಲಿತರ ನಾಯಕ. ಅವರು ನಮ್ಮೊಂದಿಗಿರುತ್ತಾರೆ ಮತ್ತು ಈ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.

ಬಂಕಾ ಬಾಂಬ್ ಬ್ಲಾಸ್ಟ್ ಬಗ್ಗೆ ಮಾತನಾಡಿರುವ ಅವರು, “ಎನ್‌ಡಿಎ ಮುಖಂಡರು ತಮ್ಮ ಆಂತರೀಕ ವಲಯಗಳಲ್ಲಿ ಮಾತನಾಡಬೇಕೆ ಹೊರತು ಸಾರ್ವಜನಿಕವಾಗಿ ಅಸೂಕ್ಷ್ಮವಾಗಿ ಮಾತನಾಡಬಾರದು. ಎನ್‌ಡಿಎ ಪ್ರಜಾಸತ್ತಾತ್ಮಕ ಒಕ್ಕೂಟವಾಗಿದ್ದು ಇಲ್ಲಿ ಪಕ್ಷಗಳಿಗೆ ಹಲವು ವಿಷಯಗಳಲ್ಲಿ ತಮ್ಮದೇಯಾದ ಪ್ರತ್ಯೇಕ ಅಭಿಪ್ರಾಯಗಳಿರಬಹುದು” ಎಂದಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...