Homeಮುಖಪುಟಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಜ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಿಂದೂಸ್ತಾನಿ ಅವಮ್ ಮೋರ್ಚಾದ ಸ್ಥಾಪಕ ಅಧ್ಯಕ್ಷರಾಗಿರುವ ಜಿತಾನ್ ರಾಮ್ ಮಾಂಜಿ ಅವರಿಗೆ ರಾಜ್ಯಪಾಲ ಫಗು ಚೌಹಾನ್ ಅವರು ಪ್ರಮಾಣವಚನ ಭೋಧಿಸಿದರು.

“2020 ರ ನವೆಂಬರ್ 23-24ರ ಅವಧಿಯಲ್ಲಿ ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಅವರನ್ನು ನೇಮಕ ಮಾಡಲಾಗಿದೆ” ಎಂದು ಪ್ರಕಟನೆ ತಿಳಿಸಿದೆ. ಹೊಸದಾಗಿ ರಚಿಸಲಾದ ವಿಧಾನಸಭೆಯ ಐದು ದಿನಗಳ ಉದ್ಘಾಟನಾ ಅಧಿವೇಶನ ನವೆಂಬರ್ 23 ರಂದು ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಬಿಹಾರ ಚುನವಣೆಯಲ್ಲಿ ಎನ್‌ಡಿಎ ಕೂಟದ ಮಿತ್ರಪಕ್ಷವಾಗದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 07 ಸ್ಥಾನಗಳಲ್ಲಿ ಸ್ಪರ್ಧಿಸಿ 04 ಸ್ಥಾನಗಳಲ್ಲಿ ಜಯಗಳಿಸಿದ್ದು ಎನ್‌ಡಿಎಗೆ ಸರಳ ಬಹುಮತ ಪಡೆಯಲು ಸಹಕರಿಸಿದೆ.

ನವೆಂಬರ್‌ 13 ರಂದು ಹೇಳಿಕೆ ನೀಡಿದ್ದ ಅವರು, “ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಆದ್ದರಿಂದ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದರು.

ಜಿತನ್ ರಾಮ್ ಮಾಂಜಿ ಯಾರು?

ಜಿತನ್ ರಾಮ್ ಮಾಂಜಿ ದಲಿತ ನಾಯಕರಾಗಿದ್ದು, 1980 ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಲ್ಲಿಂದ ಅವರು ಆರ್‌ಜೆಡಿ ಸೇರಿ, ನಂತರ ಆ‌ರ್‌‌ಜೆಡಿ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

2014 ರವರೆಗೂ ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು, ಆಗ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014 ರ ಲೋಕಸಭಾ ಚುನಾವಣೆಯನ್ನು ನಿತೀಶ್ ಕುಮಾರ್‌ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ಕುಮಾರ್‌‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ಕುಮಾರ್‌ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದ್ದರಾದರೂ, ನಂತರ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಇದಾಗಿ ಜೆಡಿಯು ತೊರೆದ ಜಿತನ್‌ ರಾಮ್ ಮಾಂಜಿ ಹಿಂದುಸ್ಥಾನಿ ಅವಾಮ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಕಟ್ಟಿದರು.

ಇದನ್ನೂ ಓದಿ: ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...