Homeಮುಖಪುಟಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಜ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಿಂದೂಸ್ತಾನಿ ಅವಮ್ ಮೋರ್ಚಾದ ಸ್ಥಾಪಕ ಅಧ್ಯಕ್ಷರಾಗಿರುವ ಜಿತಾನ್ ರಾಮ್ ಮಾಂಜಿ ಅವರಿಗೆ ರಾಜ್ಯಪಾಲ ಫಗು ಚೌಹಾನ್ ಅವರು ಪ್ರಮಾಣವಚನ ಭೋಧಿಸಿದರು.

“2020 ರ ನವೆಂಬರ್ 23-24ರ ಅವಧಿಯಲ್ಲಿ ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಅವರನ್ನು ನೇಮಕ ಮಾಡಲಾಗಿದೆ” ಎಂದು ಪ್ರಕಟನೆ ತಿಳಿಸಿದೆ. ಹೊಸದಾಗಿ ರಚಿಸಲಾದ ವಿಧಾನಸಭೆಯ ಐದು ದಿನಗಳ ಉದ್ಘಾಟನಾ ಅಧಿವೇಶನ ನವೆಂಬರ್ 23 ರಂದು ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಬಿಹಾರ ಚುನವಣೆಯಲ್ಲಿ ಎನ್‌ಡಿಎ ಕೂಟದ ಮಿತ್ರಪಕ್ಷವಾಗದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 07 ಸ್ಥಾನಗಳಲ್ಲಿ ಸ್ಪರ್ಧಿಸಿ 04 ಸ್ಥಾನಗಳಲ್ಲಿ ಜಯಗಳಿಸಿದ್ದು ಎನ್‌ಡಿಎಗೆ ಸರಳ ಬಹುಮತ ಪಡೆಯಲು ಸಹಕರಿಸಿದೆ.

ನವೆಂಬರ್‌ 13 ರಂದು ಹೇಳಿಕೆ ನೀಡಿದ್ದ ಅವರು, “ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಆದ್ದರಿಂದ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದರು.

ಜಿತನ್ ರಾಮ್ ಮಾಂಜಿ ಯಾರು?

ಜಿತನ್ ರಾಮ್ ಮಾಂಜಿ ದಲಿತ ನಾಯಕರಾಗಿದ್ದು, 1980 ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಲ್ಲಿಂದ ಅವರು ಆರ್‌ಜೆಡಿ ಸೇರಿ, ನಂತರ ಆ‌ರ್‌‌ಜೆಡಿ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

2014 ರವರೆಗೂ ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು, ಆಗ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014 ರ ಲೋಕಸಭಾ ಚುನಾವಣೆಯನ್ನು ನಿತೀಶ್ ಕುಮಾರ್‌ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ಕುಮಾರ್‌‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ಕುಮಾರ್‌ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದ್ದರಾದರೂ, ನಂತರ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಇದಾಗಿ ಜೆಡಿಯು ತೊರೆದ ಜಿತನ್‌ ರಾಮ್ ಮಾಂಜಿ ಹಿಂದುಸ್ಥಾನಿ ಅವಾಮ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಕಟ್ಟಿದರು.

ಇದನ್ನೂ ಓದಿ: ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...