Homeಮುಖಪುಟಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಜ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಿಂದೂಸ್ತಾನಿ ಅವಮ್ ಮೋರ್ಚಾದ ಸ್ಥಾಪಕ ಅಧ್ಯಕ್ಷರಾಗಿರುವ ಜಿತಾನ್ ರಾಮ್ ಮಾಂಜಿ ಅವರಿಗೆ ರಾಜ್ಯಪಾಲ ಫಗು ಚೌಹಾನ್ ಅವರು ಪ್ರಮಾಣವಚನ ಭೋಧಿಸಿದರು.

“2020 ರ ನವೆಂಬರ್ 23-24ರ ಅವಧಿಯಲ್ಲಿ ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಅವರನ್ನು ನೇಮಕ ಮಾಡಲಾಗಿದೆ” ಎಂದು ಪ್ರಕಟನೆ ತಿಳಿಸಿದೆ. ಹೊಸದಾಗಿ ರಚಿಸಲಾದ ವಿಧಾನಸಭೆಯ ಐದು ದಿನಗಳ ಉದ್ಘಾಟನಾ ಅಧಿವೇಶನ ನವೆಂಬರ್ 23 ರಂದು ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಬಿಹಾರ ಚುನವಣೆಯಲ್ಲಿ ಎನ್‌ಡಿಎ ಕೂಟದ ಮಿತ್ರಪಕ್ಷವಾಗದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 07 ಸ್ಥಾನಗಳಲ್ಲಿ ಸ್ಪರ್ಧಿಸಿ 04 ಸ್ಥಾನಗಳಲ್ಲಿ ಜಯಗಳಿಸಿದ್ದು ಎನ್‌ಡಿಎಗೆ ಸರಳ ಬಹುಮತ ಪಡೆಯಲು ಸಹಕರಿಸಿದೆ.

ನವೆಂಬರ್‌ 13 ರಂದು ಹೇಳಿಕೆ ನೀಡಿದ್ದ ಅವರು, “ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಆದ್ದರಿಂದ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದರು.

ಜಿತನ್ ರಾಮ್ ಮಾಂಜಿ ಯಾರು?

ಜಿತನ್ ರಾಮ್ ಮಾಂಜಿ ದಲಿತ ನಾಯಕರಾಗಿದ್ದು, 1980 ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಲ್ಲಿಂದ ಅವರು ಆರ್‌ಜೆಡಿ ಸೇರಿ, ನಂತರ ಆ‌ರ್‌‌ಜೆಡಿ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

2014 ರವರೆಗೂ ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು, ಆಗ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014 ರ ಲೋಕಸಭಾ ಚುನಾವಣೆಯನ್ನು ನಿತೀಶ್ ಕುಮಾರ್‌ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ಕುಮಾರ್‌‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ಕುಮಾರ್‌ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದ್ದರಾದರೂ, ನಂತರ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಇದಾಗಿ ಜೆಡಿಯು ತೊರೆದ ಜಿತನ್‌ ರಾಮ್ ಮಾಂಜಿ ಹಿಂದುಸ್ಥಾನಿ ಅವಾಮ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಕಟ್ಟಿದರು.

ಇದನ್ನೂ ಓದಿ: ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...