Homeಮುಖಪುಟಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಜ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಿಂದೂಸ್ತಾನಿ ಅವಮ್ ಮೋರ್ಚಾದ ಸ್ಥಾಪಕ ಅಧ್ಯಕ್ಷರಾಗಿರುವ ಜಿತಾನ್ ರಾಮ್ ಮಾಂಜಿ ಅವರಿಗೆ ರಾಜ್ಯಪಾಲ ಫಗು ಚೌಹಾನ್ ಅವರು ಪ್ರಮಾಣವಚನ ಭೋಧಿಸಿದರು.

“2020 ರ ನವೆಂಬರ್ 23-24ರ ಅವಧಿಯಲ್ಲಿ ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಅವರನ್ನು ನೇಮಕ ಮಾಡಲಾಗಿದೆ” ಎಂದು ಪ್ರಕಟನೆ ತಿಳಿಸಿದೆ. ಹೊಸದಾಗಿ ರಚಿಸಲಾದ ವಿಧಾನಸಭೆಯ ಐದು ದಿನಗಳ ಉದ್ಘಾಟನಾ ಅಧಿವೇಶನ ನವೆಂಬರ್ 23 ರಂದು ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಬಿಹಾರ ಚುನವಣೆಯಲ್ಲಿ ಎನ್‌ಡಿಎ ಕೂಟದ ಮಿತ್ರಪಕ್ಷವಾಗದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 07 ಸ್ಥಾನಗಳಲ್ಲಿ ಸ್ಪರ್ಧಿಸಿ 04 ಸ್ಥಾನಗಳಲ್ಲಿ ಜಯಗಳಿಸಿದ್ದು ಎನ್‌ಡಿಎಗೆ ಸರಳ ಬಹುಮತ ಪಡೆಯಲು ಸಹಕರಿಸಿದೆ.

ನವೆಂಬರ್‌ 13 ರಂದು ಹೇಳಿಕೆ ನೀಡಿದ್ದ ಅವರು, “ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಆದ್ದರಿಂದ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದರು.

ಜಿತನ್ ರಾಮ್ ಮಾಂಜಿ ಯಾರು?

ಜಿತನ್ ರಾಮ್ ಮಾಂಜಿ ದಲಿತ ನಾಯಕರಾಗಿದ್ದು, 1980 ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಲ್ಲಿಂದ ಅವರು ಆರ್‌ಜೆಡಿ ಸೇರಿ, ನಂತರ ಆ‌ರ್‌‌ಜೆಡಿ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

2014 ರವರೆಗೂ ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು, ಆಗ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014 ರ ಲೋಕಸಭಾ ಚುನಾವಣೆಯನ್ನು ನಿತೀಶ್ ಕುಮಾರ್‌ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ಕುಮಾರ್‌‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ಕುಮಾರ್‌ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದ್ದರಾದರೂ, ನಂತರ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಇದಾಗಿ ಜೆಡಿಯು ತೊರೆದ ಜಿತನ್‌ ರಾಮ್ ಮಾಂಜಿ ಹಿಂದುಸ್ಥಾನಿ ಅವಾಮ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಕಟ್ಟಿದರು.

ಇದನ್ನೂ ಓದಿ: ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

0
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ; ಅವರ ಆಮ್ ಆದ್ಮಿ ಪಕ್ಷವನ್ನು...