Homeಕರ್ನಾಟಕಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆ ಬಳಿಕ ಇದೀಗ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ  ಹಿಂದುಳಿದ ವರ್ಗಗಳ ನಾಯಕ ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಒಬಿಸಿ ಸಮುದಾಯದ ನಾಯಕನಿಗೆ ಸಿಎಂ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆದಿದೆ.

ಇದಲ್ಲದೆ ಉಮಂಗ್ ಸಿಂಘರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶದ ಉಪ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಮಾಡಿದ ತನ್ನ ಅಧಿಕೃತ ಪೋಸ್ಟ್‌ನಲ್ಲಿ ತಿಳಿಸಿದ್ದು, ನಿರ್ಗಮಿತ ಅಧ್ಯಕ್ಷರಾದ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಮಧ್ಯಪ್ರದೇಶ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮತ್ತು 2024ರಲ್ಲಿ ಲೋಕಸಭಾ ಚುನಾವಣೆಯನ್ನು ಮುಂದಿಟ್ಟು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಮಹತ್ವದ ಬದಲಾವಣೆ ಮಾಡಿದೆ.

ಜಿತು ಪಟ್ವಾರಿ ಯಾರು?

49 ವರ್ಷದ ಜಿತು ಪಟ್ವಾರಿ ಅವರು ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್‌ ನಾಯಕರಲ್ಲಿ ಓರ್ವರಾಗಿದ್ದಾರೆ. 2013ರಲ್ಲಿ ರಾವು ಕ್ಷೇತ್ರದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಜಿತು ಪಟ್ವಾರಿ, ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿಯಾಗಿದ್ದರು. ಗುಜರಾತ್‌ ಕಾಂಗ್ರೆಸ್‌ನ ಉಸ್ತುವಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2023ರ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರು. ಅವರು 2018ರಲ್ಲಿ ರಾವು ಕ್ಷೇತ್ರದಿಂದ ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ನಂತರ ಕಮಲ್ ನಾಥ್ ನೇತೃತ್ವದ ಸರ್ಕಾರದಲ್ಲಿ ಪಟ್ವಾರಿ ಅವರು ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2018ರಲ್ಲಿ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ (MPCC) ಮುಖ್ಯಸ್ಥರನ್ನಾಗಿ ನೇಮಿಸಿದಾಗ, ಪಟ್ವಾರಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಏಪ್ರಿಲ್ 2020ರಲ್ಲಿ ಅವರನ್ನು ಕಮಲನಾಥ್‌ ಅವರು ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದರು.

ಪಟ್ವಾರಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿದ್ದಾರೆ. ಕಟಾರೆಯವರ ತಂದೆ ಸತ್ಯದೇವ್ ಕಟಾರೆ ಕೂಡ ರಾಜ್ಯದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯು ಒಬಿಸಿ ಸಮುದಾಯದ ಮೋಹನ್ ಯಾದವ್ ಅವರನ್ನು ಸಿಎಂ ಆಗಿ, ಬ್ರಾಹ್ಮಣ ಸಮುದಾಯದ ರಾಜೇಂದ್ರ ಶುಕ್ಲಾ ಮತ್ತು ದಲಿತ ಸಮುದಾಯದ ಜಗದೀಶ್ ದೇವದಾ ಅವರನ್ನು ಡಿಸಿಎಂ ಆಗಿ ನೇಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ನೇಮಕಾತಿಯನ್ನು ಮಾಡಿದೆ.

ನವೆಂಬರ್ 17ರಂದು ನಡೆದ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡರೆ, ಕಾಂಗ್ರೆಸ್ 66 ಸ್ಥಾನಗಳನ್ನು ಪಡೆದುಕೊಂಡಿದೆ. ಇದು 2018ರಲ್ಲಿ ಕಾಂಗ್ರೆಸ್‌ ಗೆದ್ದ 114 ಸ್ಥಾನಗಳಿಗಿಂತ ಕಡಿಮೆಯಾಗಿದೆ.

ಇದಕ್ಕೆ ಮೊದಲು ಕಾಂಗ್ರೆಸ್ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಬೈಜ್ ಮತ್ತು ಛತ್ತೀಸ್‌ಗಢದ ಸಿಎಲ್‌ಪಿ ನಾಯಕರಾಗಿ ಚರಣ್ ದಾಸ್ ಮಹಂತ್ ಅವರನ್ನು ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...