Homeಕರ್ನಾಟಕಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆ ಬಳಿಕ ಇದೀಗ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ  ಹಿಂದುಳಿದ ವರ್ಗಗಳ ನಾಯಕ ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಒಬಿಸಿ ಸಮುದಾಯದ ನಾಯಕನಿಗೆ ಸಿಎಂ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆದಿದೆ.

ಇದಲ್ಲದೆ ಉಮಂಗ್ ಸಿಂಘರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶದ ಉಪ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಮಾಡಿದ ತನ್ನ ಅಧಿಕೃತ ಪೋಸ್ಟ್‌ನಲ್ಲಿ ತಿಳಿಸಿದ್ದು, ನಿರ್ಗಮಿತ ಅಧ್ಯಕ್ಷರಾದ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಮಧ್ಯಪ್ರದೇಶ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮತ್ತು 2024ರಲ್ಲಿ ಲೋಕಸಭಾ ಚುನಾವಣೆಯನ್ನು ಮುಂದಿಟ್ಟು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಮಹತ್ವದ ಬದಲಾವಣೆ ಮಾಡಿದೆ.

ಜಿತು ಪಟ್ವಾರಿ ಯಾರು?

49 ವರ್ಷದ ಜಿತು ಪಟ್ವಾರಿ ಅವರು ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್‌ ನಾಯಕರಲ್ಲಿ ಓರ್ವರಾಗಿದ್ದಾರೆ. 2013ರಲ್ಲಿ ರಾವು ಕ್ಷೇತ್ರದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಜಿತು ಪಟ್ವಾರಿ, ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿಯಾಗಿದ್ದರು. ಗುಜರಾತ್‌ ಕಾಂಗ್ರೆಸ್‌ನ ಉಸ್ತುವಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2023ರ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರು. ಅವರು 2018ರಲ್ಲಿ ರಾವು ಕ್ಷೇತ್ರದಿಂದ ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ನಂತರ ಕಮಲ್ ನಾಥ್ ನೇತೃತ್ವದ ಸರ್ಕಾರದಲ್ಲಿ ಪಟ್ವಾರಿ ಅವರು ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2018ರಲ್ಲಿ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ (MPCC) ಮುಖ್ಯಸ್ಥರನ್ನಾಗಿ ನೇಮಿಸಿದಾಗ, ಪಟ್ವಾರಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಏಪ್ರಿಲ್ 2020ರಲ್ಲಿ ಅವರನ್ನು ಕಮಲನಾಥ್‌ ಅವರು ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದರು.

ಪಟ್ವಾರಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿದ್ದಾರೆ. ಕಟಾರೆಯವರ ತಂದೆ ಸತ್ಯದೇವ್ ಕಟಾರೆ ಕೂಡ ರಾಜ್ಯದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯು ಒಬಿಸಿ ಸಮುದಾಯದ ಮೋಹನ್ ಯಾದವ್ ಅವರನ್ನು ಸಿಎಂ ಆಗಿ, ಬ್ರಾಹ್ಮಣ ಸಮುದಾಯದ ರಾಜೇಂದ್ರ ಶುಕ್ಲಾ ಮತ್ತು ದಲಿತ ಸಮುದಾಯದ ಜಗದೀಶ್ ದೇವದಾ ಅವರನ್ನು ಡಿಸಿಎಂ ಆಗಿ ನೇಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ನೇಮಕಾತಿಯನ್ನು ಮಾಡಿದೆ.

ನವೆಂಬರ್ 17ರಂದು ನಡೆದ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡರೆ, ಕಾಂಗ್ರೆಸ್ 66 ಸ್ಥಾನಗಳನ್ನು ಪಡೆದುಕೊಂಡಿದೆ. ಇದು 2018ರಲ್ಲಿ ಕಾಂಗ್ರೆಸ್‌ ಗೆದ್ದ 114 ಸ್ಥಾನಗಳಿಗಿಂತ ಕಡಿಮೆಯಾಗಿದೆ.

ಇದಕ್ಕೆ ಮೊದಲು ಕಾಂಗ್ರೆಸ್ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಬೈಜ್ ಮತ್ತು ಛತ್ತೀಸ್‌ಗಢದ ಸಿಎಲ್‌ಪಿ ನಾಯಕರಾಗಿ ಚರಣ್ ದಾಸ್ ಮಹಂತ್ ಅವರನ್ನು ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...