Homeಕರ್ನಾಟಕಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆ ಬಳಿಕ ಇದೀಗ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ  ಹಿಂದುಳಿದ ವರ್ಗಗಳ ನಾಯಕ ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಒಬಿಸಿ ಸಮುದಾಯದ ನಾಯಕನಿಗೆ ಸಿಎಂ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆದಿದೆ.

ಇದಲ್ಲದೆ ಉಮಂಗ್ ಸಿಂಘರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶದ ಉಪ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಮಾಡಿದ ತನ್ನ ಅಧಿಕೃತ ಪೋಸ್ಟ್‌ನಲ್ಲಿ ತಿಳಿಸಿದ್ದು, ನಿರ್ಗಮಿತ ಅಧ್ಯಕ್ಷರಾದ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಮಧ್ಯಪ್ರದೇಶ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮತ್ತು 2024ರಲ್ಲಿ ಲೋಕಸಭಾ ಚುನಾವಣೆಯನ್ನು ಮುಂದಿಟ್ಟು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಮಹತ್ವದ ಬದಲಾವಣೆ ಮಾಡಿದೆ.

ಜಿತು ಪಟ್ವಾರಿ ಯಾರು?

49 ವರ್ಷದ ಜಿತು ಪಟ್ವಾರಿ ಅವರು ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್‌ ನಾಯಕರಲ್ಲಿ ಓರ್ವರಾಗಿದ್ದಾರೆ. 2013ರಲ್ಲಿ ರಾವು ಕ್ಷೇತ್ರದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಜಿತು ಪಟ್ವಾರಿ, ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿಯಾಗಿದ್ದರು. ಗುಜರಾತ್‌ ಕಾಂಗ್ರೆಸ್‌ನ ಉಸ್ತುವಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2023ರ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರು. ಅವರು 2018ರಲ್ಲಿ ರಾವು ಕ್ಷೇತ್ರದಿಂದ ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ನಂತರ ಕಮಲ್ ನಾಥ್ ನೇತೃತ್ವದ ಸರ್ಕಾರದಲ್ಲಿ ಪಟ್ವಾರಿ ಅವರು ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2018ರಲ್ಲಿ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ (MPCC) ಮುಖ್ಯಸ್ಥರನ್ನಾಗಿ ನೇಮಿಸಿದಾಗ, ಪಟ್ವಾರಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಏಪ್ರಿಲ್ 2020ರಲ್ಲಿ ಅವರನ್ನು ಕಮಲನಾಥ್‌ ಅವರು ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದರು.

ಪಟ್ವಾರಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿದ್ದಾರೆ. ಕಟಾರೆಯವರ ತಂದೆ ಸತ್ಯದೇವ್ ಕಟಾರೆ ಕೂಡ ರಾಜ್ಯದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯು ಒಬಿಸಿ ಸಮುದಾಯದ ಮೋಹನ್ ಯಾದವ್ ಅವರನ್ನು ಸಿಎಂ ಆಗಿ, ಬ್ರಾಹ್ಮಣ ಸಮುದಾಯದ ರಾಜೇಂದ್ರ ಶುಕ್ಲಾ ಮತ್ತು ದಲಿತ ಸಮುದಾಯದ ಜಗದೀಶ್ ದೇವದಾ ಅವರನ್ನು ಡಿಸಿಎಂ ಆಗಿ ನೇಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ನೇಮಕಾತಿಯನ್ನು ಮಾಡಿದೆ.

ನವೆಂಬರ್ 17ರಂದು ನಡೆದ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡರೆ, ಕಾಂಗ್ರೆಸ್ 66 ಸ್ಥಾನಗಳನ್ನು ಪಡೆದುಕೊಂಡಿದೆ. ಇದು 2018ರಲ್ಲಿ ಕಾಂಗ್ರೆಸ್‌ ಗೆದ್ದ 114 ಸ್ಥಾನಗಳಿಗಿಂತ ಕಡಿಮೆಯಾಗಿದೆ.

ಇದಕ್ಕೆ ಮೊದಲು ಕಾಂಗ್ರೆಸ್ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಬೈಜ್ ಮತ್ತು ಛತ್ತೀಸ್‌ಗಢದ ಸಿಎಲ್‌ಪಿ ನಾಯಕರಾಗಿ ಚರಣ್ ದಾಸ್ ಮಹಂತ್ ಅವರನ್ನು ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...