Homeಕರ್ನಾಟಕಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

- Advertisement -
- Advertisement -

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಸಾಧನೆ ಬಳಿಕ ಇದೀಗ ರಾಜ್ಯ ಘಟಕದ ಅಧ್ಯಕ್ಷರನ್ನು ಬದಲಾವಣೆ ಮಾಡಿದೆ. ಮಧ್ಯಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ  ಹಿಂದುಳಿದ ವರ್ಗಗಳ ನಾಯಕ ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಮಧ್ಯಪ್ರದೇಶದಲ್ಲಿ ಒಬಿಸಿ ಸಮುದಾಯದ ನಾಯಕನಿಗೆ ಸಿಎಂ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆದಿದೆ.

ಇದಲ್ಲದೆ ಉಮಂಗ್ ಸಿಂಘರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಮಧ್ಯಪ್ರದೇಶದ ಉಪ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಮಾಡಿದ ತನ್ನ ಅಧಿಕೃತ ಪೋಸ್ಟ್‌ನಲ್ಲಿ ತಿಳಿಸಿದ್ದು, ನಿರ್ಗಮಿತ ಅಧ್ಯಕ್ಷರಾದ ಕಮಲ್ ನಾಥ್ ಅವರ ಕೊಡುಗೆಗಳನ್ನು ಪಕ್ಷವು ಪ್ರಶಂಸಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಮಧ್ಯಪ್ರದೇಶ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮತ್ತು 2024ರಲ್ಲಿ ಲೋಕಸಭಾ ಚುನಾವಣೆಯನ್ನು ಮುಂದಿಟ್ಟು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಈ ಮಹತ್ವದ ಬದಲಾವಣೆ ಮಾಡಿದೆ.

ಜಿತು ಪಟ್ವಾರಿ ಯಾರು?

49 ವರ್ಷದ ಜಿತು ಪಟ್ವಾರಿ ಅವರು ಮಧ್ಯಪ್ರದೇಶದ ಪ್ರಭಾವಿ ಕಾಂಗ್ರೆಸ್‌ ನಾಯಕರಲ್ಲಿ ಓರ್ವರಾಗಿದ್ದಾರೆ. 2013ರಲ್ಲಿ ರಾವು ಕ್ಷೇತ್ರದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಜಿತು ಪಟ್ವಾರಿ, ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿಯಾಗಿದ್ದರು. ಗುಜರಾತ್‌ ಕಾಂಗ್ರೆಸ್‌ನ ಉಸ್ತುವಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2023ರ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರು. ಅವರು 2018ರಲ್ಲಿ ರಾವು ಕ್ಷೇತ್ರದಿಂದ ಎರಡನೇ ಬಾರಿಗೆ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ನಂತರ ಕಮಲ್ ನಾಥ್ ನೇತೃತ್ವದ ಸರ್ಕಾರದಲ್ಲಿ ಪಟ್ವಾರಿ ಅವರು ಉನ್ನತ ಶಿಕ್ಷಣ, ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2018ರಲ್ಲಿ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿ (MPCC) ಮುಖ್ಯಸ್ಥರನ್ನಾಗಿ ನೇಮಿಸಿದಾಗ, ಪಟ್ವಾರಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಏಪ್ರಿಲ್ 2020ರಲ್ಲಿ ಅವರನ್ನು ಕಮಲನಾಥ್‌ ಅವರು ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷರಾಗಿ ನೇಮಿಸಿದ್ದರು.

ಪಟ್ವಾರಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿದ್ದಾರೆ. ಕಟಾರೆಯವರ ತಂದೆ ಸತ್ಯದೇವ್ ಕಟಾರೆ ಕೂಡ ರಾಜ್ಯದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಯು ಒಬಿಸಿ ಸಮುದಾಯದ ಮೋಹನ್ ಯಾದವ್ ಅವರನ್ನು ಸಿಎಂ ಆಗಿ, ಬ್ರಾಹ್ಮಣ ಸಮುದಾಯದ ರಾಜೇಂದ್ರ ಶುಕ್ಲಾ ಮತ್ತು ದಲಿತ ಸಮುದಾಯದ ಜಗದೀಶ್ ದೇವದಾ ಅವರನ್ನು ಡಿಸಿಎಂ ಆಗಿ ನೇಮಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ನೇಮಕಾತಿಯನ್ನು ಮಾಡಿದೆ.

ನವೆಂಬರ್ 17ರಂದು ನಡೆದ 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡರೆ, ಕಾಂಗ್ರೆಸ್ 66 ಸ್ಥಾನಗಳನ್ನು ಪಡೆದುಕೊಂಡಿದೆ. ಇದು 2018ರಲ್ಲಿ ಕಾಂಗ್ರೆಸ್‌ ಗೆದ್ದ 114 ಸ್ಥಾನಗಳಿಗಿಂತ ಕಡಿಮೆಯಾಗಿದೆ.

ಇದಕ್ಕೆ ಮೊದಲು ಕಾಂಗ್ರೆಸ್ ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಬೈಜ್ ಮತ್ತು ಛತ್ತೀಸ್‌ಗಢದ ಸಿಎಲ್‌ಪಿ ನಾಯಕರಾಗಿ ಚರಣ್ ದಾಸ್ ಮಹಂತ್ ಅವರನ್ನು ನೇಮಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...