Homeಮುಖಪುಟಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್...

ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

- Advertisement -
- Advertisement -

2019 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಿಂಗ್‌ಮೇಕರ್ ಆಗಿದ್ದ ಜನನಾಯಕ್ ಜನತಾ ಪಕ್ಷವು (ಜೆಜೆಪಿ), 2024ರ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲೂ ವಿಫಲವಾಗಿದೆ. ಹಿಂದೆ ತಾನು ಗೆದ್ದಿದ್ದ ಹತ್ತೂ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವಂತೆ ಭಾಸವಾಗುತ್ತಿದೆ.

ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದರಿಂದ ಹಿಡಿದು ಐದು ವರ್ಷಗಳ ನಂತರ ಪಕ್ಷದ ಸಂಭಾವ್ಯ ನಾಶವನ್ನು ಎದುರಿಸುವವರೆಗೆ ಅದರ ಮುಖ್ಯಸ್ಥ ದುಶ್ಯಂತ್ ಚೌತಾಲಾ ಭಾರಿ ಮುಖಭಂಗ ಅನುಭವಿಸಿದ್ದಾರೆ. ಇದೇ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕೊನೆಗೊಂಡ ನಂತರ ಜನನಾಯಕ್ ಜನತಾ ಪಕ್ಷವು ತನ್ನ ಚುನಾವಣಾ ಅದೃಷ್ಟದಲ್ಲಿ ಭಾರಿ ಕುಸಿತವನ್ನು ಕಂಡಿದೆ.

ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು 2019 ರಲ್ಲಿ ಗೆದ್ದಿದ್ದ ಉಚ್ಚನ ಕಲಾನ್ ಅಸೆಂಬ್ಲಿ ಕ್ಷೇತ್ರದಲ್ಲೆ ಐದನೇ ಸ್ಥಾನದಲ್ಲಿ ಕುಸಿಯುವ ಮೂಲಕ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಯಾಸದ ಗೆಲುವು ಕಂಡಿದೆ.

2019 ರ ಚುನಾವಣೆಯಲ್ಲಿ ಜೆಜೆಪಿ 90 ಅಸೆಂಬ್ಲಿ ಸ್ಥಾನಗಳಲ್ಲಿ 10 ಅನ್ನು ಗೆದ್ದುಕೊಂಡಿತು. ಆ ಮೂಲಕ, ಅದು ಕಿಂಗ್ ಮೇಕರ್ ಆಗಿ ಹೊರಹೊಮ್ಮಿತು. 40 ಸ್ಥಾನಗಳನ್ನು ಗೆದ್ದ ನಂತರ ಸರಳ ಬಹುಮತಕ್ಕೆ ಆರು ಸ್ಥಾನ ಕಡಿಮೆ ಇದ್ದ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಯನ್ನು ರೂಪಿಸಿತು.

ಕೌಟುಂಬಿಕ ಕಲಹದಿಂದಾಗಿ 2018 ರ ಡಿಸೆಂಬರ್‌ನಲ್ಲಿ ಪೋಷಕ ಸಂಘಟನೆ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್‌ಡಿಎಲ್‌) ನ ಜೊತೆಗಿನ ವಿಭಜನೆಯ ನಂತರ ಮುನ್ನೆಲೆಗೆ ಬಂದ ಅಜಯ್ ಸಿಂಗ್ ಚೌಟಾಲಾ ನೇತೃತ್ವದ ಪಕ್ಷವು ಅದರ ಗ್ರಾಫ್‌ನಲ್ಲಿ ಹಠಾತ್ ಏರಿಕೆ ಕಂಡಿತು.

ಬಿಜೆಪಿ ತನ್ನ ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಿದ ನಂತರ ಮೈತ್ರಿ ಮುರಿದುಬಿತ್ತು. ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಯಿತು.

ಹರಿಯಾಣ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ತಯಾರಿ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಪ್ರವೃತ್ತಿಯಲ್ಲಿ ದೊಡ್ಡ ಹಿನ್ನಡೆಯನ್ನು ಎದುರಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿತ್ತು. ಆದರೆ, ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸುತ್ತಿದೆ.

ದುಶ್ಯಂತ್ ಚೌಟಾಲಾ ಅವರ ಪಕ್ಷವಾದ ಜೆಜೆಪಿ ಹರಿಯಾಣದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ.

ಈ ಬಾರಿ ಜೆಜೆಪಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಜೆಜೆಪಿ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) 20 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, 70 ಸ್ಥಾನಗಳಲ್ಲಿ ಯಾವುದೇ ಜೆಜೆಪಿ ಅಭ್ಯರ್ಥಿ ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹರಿಯಾಣದಿಂದ ಜೆಜೆಪಿ ನಿರ್ನಾಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಬಿರುಸಿನ ಸಿದ್ಧತೆಗಳ ನಡುವೆಯೇ ಜನನಾಯಕ ಜನತಾ ಪಕ್ಷ (ಜೆಜೆಪಿ) ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಬಹುದು. 2019ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದ್ದ ಜೆಜೆಪಿ ಈ ಚುನಾವಣೆಗೂ ಮುನ್ನ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಏಕೆಂದರೆ, ಅದರ ಅನೇಕ ಶಾಸಕರು ಬಂಡಾಯವೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ನಿರಾಶಾದಾಯಕವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದಿದ್ದರು.

2019 ರಲ್ಲಿ ಮೊದಲ ಬಾರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿ ಸ್ಪರ್ಧಿಸಿತ್ತು. ಆಗ 10 ಸ್ಥಾನ ಗೆದ್ದಿತ್ತು. ಆ ಸಮಯದಲ್ಲಿ ಅದು ಹರಿಯಾಣ ಮತ್ತು ಜೆಜೆಪಿಗೆ ದೊಡ್ಡ ಯಶಸ್ಸು. ದುಶ್ಯಂತ್ ಚೌಟಾಲಾ ಇದರ ಹಿಂದಿನ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿತ್ತು. 2019ರ ಚುನಾವಣಾ ಫಲಿತಾಂಶದ ನಂತರ, ಜೆಜೆಪಿ ಖಟ್ಟರ್ ಸರ್ಕಾರವನ್ನು ಬೆಂಬಲಿಸಿತು ಮತ್ತು ಬಿಜೆಪಿಯ ಸಹಯೋಗದೊಂದಿಗೆ ಸರ್ಕಾರವನ್ನು ನಡೆಸಿತು. ಈ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ಇದ್ದು, ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಬೇರ್ಪಟ್ಟವು.

ಪಕ್ಷದ ಕಾರ್ಯವೈಖರಿ ನೋಡಿದರೆ ಜೆಜೆಪಿಗೆ ರೈತರ ವಿರೋಧ ವ್ಯಕ್ತವಾಗಿದೆ ಎನ್ನಬಹುದು. ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ನಿಂತಿದ್ದಕ್ಕಾಗಿ ಜೆಜೆಪಿ ನಾಯಕರು ಭಾರಿ ವಿರೋಧವನ್ನು ಎದುರಿಸಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುಷ್ಯಂತ್ ಚೌಟಾಲಾ ಅವರ ತಾಯಿ ಮತ್ತು ಶಾಸಕಿ ನೈನಾ ಚೌತಾಲಾ ಅವರು ಹಿಸಾರ್‌ನಿಂದ ಜೆಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ, ಅವರು ರೈತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಶೇ. 1ರಷ್ಟೂ ಮತ ಪಡೆಯದ ಜೆಜೆಪಿ

ಕಳೆದ ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ತೀರಾ ಕಳಪೆಯಾಗಿದ್ದು, ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರ ಸ್ಥಿತಿ ಎಷ್ಟು ಹದಗೆಟ್ಟಿತ್ತು ಎಂದರೆ, ಶೇ.1 ರಷ್ಟೂ ಮತಗಳಿಗೆ ಪಡೆದಿರಲಿಲ್ಲ. ಇದೀಗ ಹರಿಯಾಣದ 90 ವಿಧಾನಸಭಾ ಸ್ಥಾನಗಳ ಒಂದರಲ್ಲಿಯೂ ಜೆಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಸೋತಿದ್ದು, ಬಹುತೇಕರು ಠೇವಣಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹರಿಯಾಣ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ: ಕುಮಾರಿ ಶೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...