Homeಮುಖಪುಟಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್...

ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

- Advertisement -
- Advertisement -

2019 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಿಂಗ್‌ಮೇಕರ್ ಆಗಿದ್ದ ಜನನಾಯಕ್ ಜನತಾ ಪಕ್ಷವು (ಜೆಜೆಪಿ), 2024ರ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲೂ ವಿಫಲವಾಗಿದೆ. ಹಿಂದೆ ತಾನು ಗೆದ್ದಿದ್ದ ಹತ್ತೂ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವಂತೆ ಭಾಸವಾಗುತ್ತಿದೆ.

ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದರಿಂದ ಹಿಡಿದು ಐದು ವರ್ಷಗಳ ನಂತರ ಪಕ್ಷದ ಸಂಭಾವ್ಯ ನಾಶವನ್ನು ಎದುರಿಸುವವರೆಗೆ ಅದರ ಮುಖ್ಯಸ್ಥ ದುಶ್ಯಂತ್ ಚೌತಾಲಾ ಭಾರಿ ಮುಖಭಂಗ ಅನುಭವಿಸಿದ್ದಾರೆ. ಇದೇ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕೊನೆಗೊಂಡ ನಂತರ ಜನನಾಯಕ್ ಜನತಾ ಪಕ್ಷವು ತನ್ನ ಚುನಾವಣಾ ಅದೃಷ್ಟದಲ್ಲಿ ಭಾರಿ ಕುಸಿತವನ್ನು ಕಂಡಿದೆ.

ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು 2019 ರಲ್ಲಿ ಗೆದ್ದಿದ್ದ ಉಚ್ಚನ ಕಲಾನ್ ಅಸೆಂಬ್ಲಿ ಕ್ಷೇತ್ರದಲ್ಲೆ ಐದನೇ ಸ್ಥಾನದಲ್ಲಿ ಕುಸಿಯುವ ಮೂಲಕ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಯಾಸದ ಗೆಲುವು ಕಂಡಿದೆ.

2019 ರ ಚುನಾವಣೆಯಲ್ಲಿ ಜೆಜೆಪಿ 90 ಅಸೆಂಬ್ಲಿ ಸ್ಥಾನಗಳಲ್ಲಿ 10 ಅನ್ನು ಗೆದ್ದುಕೊಂಡಿತು. ಆ ಮೂಲಕ, ಅದು ಕಿಂಗ್ ಮೇಕರ್ ಆಗಿ ಹೊರಹೊಮ್ಮಿತು. 40 ಸ್ಥಾನಗಳನ್ನು ಗೆದ್ದ ನಂತರ ಸರಳ ಬಹುಮತಕ್ಕೆ ಆರು ಸ್ಥಾನ ಕಡಿಮೆ ಇದ್ದ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಯನ್ನು ರೂಪಿಸಿತು.

ಕೌಟುಂಬಿಕ ಕಲಹದಿಂದಾಗಿ 2018 ರ ಡಿಸೆಂಬರ್‌ನಲ್ಲಿ ಪೋಷಕ ಸಂಘಟನೆ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್‌ಡಿಎಲ್‌) ನ ಜೊತೆಗಿನ ವಿಭಜನೆಯ ನಂತರ ಮುನ್ನೆಲೆಗೆ ಬಂದ ಅಜಯ್ ಸಿಂಗ್ ಚೌಟಾಲಾ ನೇತೃತ್ವದ ಪಕ್ಷವು ಅದರ ಗ್ರಾಫ್‌ನಲ್ಲಿ ಹಠಾತ್ ಏರಿಕೆ ಕಂಡಿತು.

ಬಿಜೆಪಿ ತನ್ನ ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಿದ ನಂತರ ಮೈತ್ರಿ ಮುರಿದುಬಿತ್ತು. ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಯಿತು.

ಹರಿಯಾಣ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ತಯಾರಿ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಪ್ರವೃತ್ತಿಯಲ್ಲಿ ದೊಡ್ಡ ಹಿನ್ನಡೆಯನ್ನು ಎದುರಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿತ್ತು. ಆದರೆ, ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸುತ್ತಿದೆ.

ದುಶ್ಯಂತ್ ಚೌಟಾಲಾ ಅವರ ಪಕ್ಷವಾದ ಜೆಜೆಪಿ ಹರಿಯಾಣದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ.

ಈ ಬಾರಿ ಜೆಜೆಪಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಜೆಜೆಪಿ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) 20 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, 70 ಸ್ಥಾನಗಳಲ್ಲಿ ಯಾವುದೇ ಜೆಜೆಪಿ ಅಭ್ಯರ್ಥಿ ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹರಿಯಾಣದಿಂದ ಜೆಜೆಪಿ ನಿರ್ನಾಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಬಿರುಸಿನ ಸಿದ್ಧತೆಗಳ ನಡುವೆಯೇ ಜನನಾಯಕ ಜನತಾ ಪಕ್ಷ (ಜೆಜೆಪಿ) ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಬಹುದು. 2019ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದ್ದ ಜೆಜೆಪಿ ಈ ಚುನಾವಣೆಗೂ ಮುನ್ನ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಏಕೆಂದರೆ, ಅದರ ಅನೇಕ ಶಾಸಕರು ಬಂಡಾಯವೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ನಿರಾಶಾದಾಯಕವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದಿದ್ದರು.

2019 ರಲ್ಲಿ ಮೊದಲ ಬಾರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿ ಸ್ಪರ್ಧಿಸಿತ್ತು. ಆಗ 10 ಸ್ಥಾನ ಗೆದ್ದಿತ್ತು. ಆ ಸಮಯದಲ್ಲಿ ಅದು ಹರಿಯಾಣ ಮತ್ತು ಜೆಜೆಪಿಗೆ ದೊಡ್ಡ ಯಶಸ್ಸು. ದುಶ್ಯಂತ್ ಚೌಟಾಲಾ ಇದರ ಹಿಂದಿನ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿತ್ತು. 2019ರ ಚುನಾವಣಾ ಫಲಿತಾಂಶದ ನಂತರ, ಜೆಜೆಪಿ ಖಟ್ಟರ್ ಸರ್ಕಾರವನ್ನು ಬೆಂಬಲಿಸಿತು ಮತ್ತು ಬಿಜೆಪಿಯ ಸಹಯೋಗದೊಂದಿಗೆ ಸರ್ಕಾರವನ್ನು ನಡೆಸಿತು. ಈ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ಇದ್ದು, ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಬೇರ್ಪಟ್ಟವು.

ಪಕ್ಷದ ಕಾರ್ಯವೈಖರಿ ನೋಡಿದರೆ ಜೆಜೆಪಿಗೆ ರೈತರ ವಿರೋಧ ವ್ಯಕ್ತವಾಗಿದೆ ಎನ್ನಬಹುದು. ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ನಿಂತಿದ್ದಕ್ಕಾಗಿ ಜೆಜೆಪಿ ನಾಯಕರು ಭಾರಿ ವಿರೋಧವನ್ನು ಎದುರಿಸಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುಷ್ಯಂತ್ ಚೌಟಾಲಾ ಅವರ ತಾಯಿ ಮತ್ತು ಶಾಸಕಿ ನೈನಾ ಚೌತಾಲಾ ಅವರು ಹಿಸಾರ್‌ನಿಂದ ಜೆಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ, ಅವರು ರೈತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಶೇ. 1ರಷ್ಟೂ ಮತ ಪಡೆಯದ ಜೆಜೆಪಿ

ಕಳೆದ ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ತೀರಾ ಕಳಪೆಯಾಗಿದ್ದು, ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರ ಸ್ಥಿತಿ ಎಷ್ಟು ಹದಗೆಟ್ಟಿತ್ತು ಎಂದರೆ, ಶೇ.1 ರಷ್ಟೂ ಮತಗಳಿಗೆ ಪಡೆದಿರಲಿಲ್ಲ. ಇದೀಗ ಹರಿಯಾಣದ 90 ವಿಧಾನಸಭಾ ಸ್ಥಾನಗಳ ಒಂದರಲ್ಲಿಯೂ ಜೆಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಸೋತಿದ್ದು, ಬಹುತೇಕರು ಠೇವಣಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹರಿಯಾಣ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ: ಕುಮಾರಿ ಶೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....