Homeಮುಖಪುಟಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್...

ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

- Advertisement -
- Advertisement -

2019 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಿಂಗ್‌ಮೇಕರ್ ಆಗಿದ್ದ ಜನನಾಯಕ್ ಜನತಾ ಪಕ್ಷವು (ಜೆಜೆಪಿ), 2024ರ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲೂ ವಿಫಲವಾಗಿದೆ. ಹಿಂದೆ ತಾನು ಗೆದ್ದಿದ್ದ ಹತ್ತೂ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವಂತೆ ಭಾಸವಾಗುತ್ತಿದೆ.

ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದರಿಂದ ಹಿಡಿದು ಐದು ವರ್ಷಗಳ ನಂತರ ಪಕ್ಷದ ಸಂಭಾವ್ಯ ನಾಶವನ್ನು ಎದುರಿಸುವವರೆಗೆ ಅದರ ಮುಖ್ಯಸ್ಥ ದುಶ್ಯಂತ್ ಚೌತಾಲಾ ಭಾರಿ ಮುಖಭಂಗ ಅನುಭವಿಸಿದ್ದಾರೆ. ಇದೇ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕೊನೆಗೊಂಡ ನಂತರ ಜನನಾಯಕ್ ಜನತಾ ಪಕ್ಷವು ತನ್ನ ಚುನಾವಣಾ ಅದೃಷ್ಟದಲ್ಲಿ ಭಾರಿ ಕುಸಿತವನ್ನು ಕಂಡಿದೆ.

ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು 2019 ರಲ್ಲಿ ಗೆದ್ದಿದ್ದ ಉಚ್ಚನ ಕಲಾನ್ ಅಸೆಂಬ್ಲಿ ಕ್ಷೇತ್ರದಲ್ಲೆ ಐದನೇ ಸ್ಥಾನದಲ್ಲಿ ಕುಸಿಯುವ ಮೂಲಕ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಯಾಸದ ಗೆಲುವು ಕಂಡಿದೆ.

2019 ರ ಚುನಾವಣೆಯಲ್ಲಿ ಜೆಜೆಪಿ 90 ಅಸೆಂಬ್ಲಿ ಸ್ಥಾನಗಳಲ್ಲಿ 10 ಅನ್ನು ಗೆದ್ದುಕೊಂಡಿತು. ಆ ಮೂಲಕ, ಅದು ಕಿಂಗ್ ಮೇಕರ್ ಆಗಿ ಹೊರಹೊಮ್ಮಿತು. 40 ಸ್ಥಾನಗಳನ್ನು ಗೆದ್ದ ನಂತರ ಸರಳ ಬಹುಮತಕ್ಕೆ ಆರು ಸ್ಥಾನ ಕಡಿಮೆ ಇದ್ದ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಯನ್ನು ರೂಪಿಸಿತು.

ಕೌಟುಂಬಿಕ ಕಲಹದಿಂದಾಗಿ 2018 ರ ಡಿಸೆಂಬರ್‌ನಲ್ಲಿ ಪೋಷಕ ಸಂಘಟನೆ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್‌ಡಿಎಲ್‌) ನ ಜೊತೆಗಿನ ವಿಭಜನೆಯ ನಂತರ ಮುನ್ನೆಲೆಗೆ ಬಂದ ಅಜಯ್ ಸಿಂಗ್ ಚೌಟಾಲಾ ನೇತೃತ್ವದ ಪಕ್ಷವು ಅದರ ಗ್ರಾಫ್‌ನಲ್ಲಿ ಹಠಾತ್ ಏರಿಕೆ ಕಂಡಿತು.

ಬಿಜೆಪಿ ತನ್ನ ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಿದ ನಂತರ ಮೈತ್ರಿ ಮುರಿದುಬಿತ್ತು. ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಯಿತು.

ಹರಿಯಾಣ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ತಯಾರಿ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಪ್ರವೃತ್ತಿಯಲ್ಲಿ ದೊಡ್ಡ ಹಿನ್ನಡೆಯನ್ನು ಎದುರಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿತ್ತು. ಆದರೆ, ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸುತ್ತಿದೆ.

ದುಶ್ಯಂತ್ ಚೌಟಾಲಾ ಅವರ ಪಕ್ಷವಾದ ಜೆಜೆಪಿ ಹರಿಯಾಣದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ.

ಈ ಬಾರಿ ಜೆಜೆಪಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಜೆಜೆಪಿ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) 20 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, 70 ಸ್ಥಾನಗಳಲ್ಲಿ ಯಾವುದೇ ಜೆಜೆಪಿ ಅಭ್ಯರ್ಥಿ ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹರಿಯಾಣದಿಂದ ಜೆಜೆಪಿ ನಿರ್ನಾಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಬಿರುಸಿನ ಸಿದ್ಧತೆಗಳ ನಡುವೆಯೇ ಜನನಾಯಕ ಜನತಾ ಪಕ್ಷ (ಜೆಜೆಪಿ) ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಬಹುದು. 2019ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದ್ದ ಜೆಜೆಪಿ ಈ ಚುನಾವಣೆಗೂ ಮುನ್ನ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಏಕೆಂದರೆ, ಅದರ ಅನೇಕ ಶಾಸಕರು ಬಂಡಾಯವೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ನಿರಾಶಾದಾಯಕವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದಿದ್ದರು.

2019 ರಲ್ಲಿ ಮೊದಲ ಬಾರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿ ಸ್ಪರ್ಧಿಸಿತ್ತು. ಆಗ 10 ಸ್ಥಾನ ಗೆದ್ದಿತ್ತು. ಆ ಸಮಯದಲ್ಲಿ ಅದು ಹರಿಯಾಣ ಮತ್ತು ಜೆಜೆಪಿಗೆ ದೊಡ್ಡ ಯಶಸ್ಸು. ದುಶ್ಯಂತ್ ಚೌಟಾಲಾ ಇದರ ಹಿಂದಿನ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿತ್ತು. 2019ರ ಚುನಾವಣಾ ಫಲಿತಾಂಶದ ನಂತರ, ಜೆಜೆಪಿ ಖಟ್ಟರ್ ಸರ್ಕಾರವನ್ನು ಬೆಂಬಲಿಸಿತು ಮತ್ತು ಬಿಜೆಪಿಯ ಸಹಯೋಗದೊಂದಿಗೆ ಸರ್ಕಾರವನ್ನು ನಡೆಸಿತು. ಈ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ಇದ್ದು, ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಬೇರ್ಪಟ್ಟವು.

ಪಕ್ಷದ ಕಾರ್ಯವೈಖರಿ ನೋಡಿದರೆ ಜೆಜೆಪಿಗೆ ರೈತರ ವಿರೋಧ ವ್ಯಕ್ತವಾಗಿದೆ ಎನ್ನಬಹುದು. ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ನಿಂತಿದ್ದಕ್ಕಾಗಿ ಜೆಜೆಪಿ ನಾಯಕರು ಭಾರಿ ವಿರೋಧವನ್ನು ಎದುರಿಸಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುಷ್ಯಂತ್ ಚೌಟಾಲಾ ಅವರ ತಾಯಿ ಮತ್ತು ಶಾಸಕಿ ನೈನಾ ಚೌತಾಲಾ ಅವರು ಹಿಸಾರ್‌ನಿಂದ ಜೆಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ, ಅವರು ರೈತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಶೇ. 1ರಷ್ಟೂ ಮತ ಪಡೆಯದ ಜೆಜೆಪಿ

ಕಳೆದ ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ತೀರಾ ಕಳಪೆಯಾಗಿದ್ದು, ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರ ಸ್ಥಿತಿ ಎಷ್ಟು ಹದಗೆಟ್ಟಿತ್ತು ಎಂದರೆ, ಶೇ.1 ರಷ್ಟೂ ಮತಗಳಿಗೆ ಪಡೆದಿರಲಿಲ್ಲ. ಇದೀಗ ಹರಿಯಾಣದ 90 ವಿಧಾನಸಭಾ ಸ್ಥಾನಗಳ ಒಂದರಲ್ಲಿಯೂ ಜೆಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಸೋತಿದ್ದು, ಬಹುತೇಕರು ಠೇವಣಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹರಿಯಾಣ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ: ಕುಮಾರಿ ಶೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...