Homeಮುಖಪುಟಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

- Advertisement -
- Advertisement -

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಸುಮಾರು 7,000 ಉದ್ಯೋಗಿಗಳಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ಶ್ರೀನಗರದಲ್ಲಿ ಕಳೆದ 9 ವರ್ಷಗಳಲ್ಲಿ ಮೋದಿ ಇದೇ ಮೊದಲ ಬಾರಿಗೆ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಕಾಶ್ಮೀರದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕೇಸರಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲವನ್ನು ನೀಡುವ ಪ್ರಯತ್ನವಾಗಿ ಜಮ್ಮು-ಕಾಶ್ಮೀರ ಆಡಳಿತವು ಶಿಕ್ಷಣ, ಕ್ರೀಡೆ, ಕೃಷಿ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಇತರ 13 ಇಲಾಖೆಗಳ ನೌಕರರಿಗೆ ಮೋದಿಯ ರ್ಯಾಲಿಯಲ್ಲಿ ಭಾಗವಹಿಸುವಂತೆ ಆದೇಶ ನೀಡಿದೆ. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿದೆ, ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ.

ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿಯವರ ಭೇಟಿಗೆ ಮುಂಚಿತವಾಗಿ, ಕೇಂದ್ರ ಗೃಹ ಸಚಿವಾಲಯವು ಎಕ್ಸ್‌ನಲ್ಲಿ ಸ್ವಯಂ-ಅಭಿನಂದನೆಯ ಪೋಸ್ಟ್‌ಗಳನ್ನು ಹಾಕಿಕೊಂಡಿದೆ. ಆರ್ಟಿಕಲ್ 370 ರದ್ದತಿ  “ಶಾಂತಿಯುತ ಮತ್ತು ಸಮೃದ್ಧ” ಜಮ್ಮು ಮತ್ತು ಕಾಶ್ಮೀರವನ್ನು ರಚಿಸಲು ಸಹಾಯ ಮಾಡಿದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ. ಕಲ್ಲು ತೂರಾಟದ ಘಟನೆಗಳಲ್ಲಿ 100 ಪ್ರತಿಶತದಷ್ಟು ಇಳಿಕೆಯಾಗಿದೆ. 2023ರಲ್ಲಿ ಒಂದೇ ಒಂದು ಕಲ್ಲು ತೂರಾಟದ ಘಟನೆಯೂ ವರದಿಯಾಗಿಲ್ಲ. ನಾಗರಿಕರ ಸಾವುಗಳು ಶೇಕಡಾ 81ರಷ್ಟು ಕಡಿಮೆಯಾಗಿದೆ. 69ರಷ್ಟು ಭಯೋತ್ಪಾದಕ ಘಟನೆಗಳು ಕಡಿಮೆಯಾಗಿದೆ. ಭದ್ರತಾ ಸಿಬ್ಬಂದಿಯ ಹತ್ಯೆಗಳು ಶೇಕಡಾ 47ರಷ್ಟು ಕಡಿಮೆಯಾಗಿದೆ ಎಂದು ಗೃಹ ಸಚಿವಾಲಯದ ವರದಿ ತಿಳಿಸಿದೆ.

ಶ್ರೀನಗರದಲ್ಲಿ ಬಿಜೆಪಿಯ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ ನಂತರ ಕಾಶ್ಮೀರದಲ್ಲಿ ಪ್ರಧಾನಿಯವರ ಮೊದಲ ರ್ಯಾಲಿಗೆ ಎರಡು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಬಕ್ಷಿ ಕ್ರೀಡಾಂಗಣವು ಕೇವಲ 18,000 ಆಸನಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ವರದಿಯಾಗಿದೆ ಮತ್ತು ಮೈದಾನದಲ್ಲಿ ಸುಮಾರು 10,000 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಂಗಣವು ಸುಮಾರು 30,000 ಜನರಿಗೆ ಅವಕಾಶ ಕಲ್ಪಿಸುತ್ತದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಅದರೆ ಜಮ್ಮು-ಕಾಶ್ಮೀರ ಬಿಜೆಪಿ ಮುಖ್ಯಸ್ಥರ ಹೇಳಿಕೆ ಅನುಮಾನಗಳನ್ನು ಹುಟ್ಟುಹಾಕಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ ಬಿಜೆಪಿಯ ವಕ್ತಾರ ಅಲ್ತಾಫ್ ಠಾಕೂರ್ ಹೇಳಿದ್ದಾರೆ.

ಮೋದಿ ರ್ಯಾಲಿಯ ಹಿನ್ನೆಲೆ ಶ್ರೀನಗರದಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಶ್ರೀನಗರ ವಿಮಾನ ನಿಲ್ದಾಣದಿಂದ ಸ್ಥಳಕ್ಕೆ ಹೋಗುವ ರಸ್ತೆಗಳಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳಿಂದ ಭದ್ರತೆ ಕಲ್ಪಿಸಲಾಗಿದೆ.

ಇದನ್ನು ಓದಿ: ಇಬ್ಬರು ಯುವಕರನ್ನು ಕಟ್ಟಿ ಹಾಕಿ ಥಳಿಸಿದ ಪೊಲೀಸ್‌ ಪೇದೆ: ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...