Homeಮುಖಪುಟಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

ಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

- Advertisement -
- Advertisement -

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಚುನಾವಣಾ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಣಿವೆ ರಾಜ್ಯಕ್ಕೆ ತೆರಳುತ್ತಿದ್ದು, ಈ ವೇಳೆ ಜನಸಂದಣಿಯನ್ನು ತೋರಿಸುವ ಹಿನ್ನೆಲೆ 7,000 ಸರಕಾರಿ ನೌಕರರಿಗೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿರುವ ಬಗ್ಗೆ ವರದಿಯಾಗಿತ್ತು. ಇದೀಗ ಇದರ ಬೆನ್ನಲ್ಲಿ ಮೋದಿ ಭೇಟಿ ಹಿನ್ನೆಲೆ ಮಾರ್ಚ್ 7ರಂದು ನಿಗದಿಯಾಗಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಮಂಡಳಿಯ ಆದೇಶದಲ್ಲಿ ಮೋದಿ ಭೇಟಿಯನ್ನು ಉಲ್ಲೇಖಿಸದಿದ್ದರೂ, ಅನಿವಾರ್ಯ ಸಂದರ್ಭಗಳ ಹಿನ್ನೆಲೆ ಕೃಷಿ,  ಪ್ರವಾಸೋದ್ಯಮ ಸೇರಿದಂತೆ ವೃತ್ತಿಪರ ವಿಷಯಗಳ ಪರೀಕ್ಷೆ, 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡುವುದಾಗಿ ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ ಎಂದು ದಿ ಟೆಲಿಗ್ರಾಫ್ ವರದಿಯನ್ನು ಮಾಡಿದೆ. ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮಾರ್ಚ್ 7 ಮತ್ತು ಏಪ್ರಿಲ್ 3ರ ನಡುವೆ ನಡೆಯಲಿವೆ. ಪ್ರಾಯೋಗಿಕ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ.

ಮಾರ್ಚ್ 7ರಂದು ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೋದಿಯ ಮೊದಲ ಭೇಟಿಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲ ಎಂಬುವುದನ್ನು ಬಿಂಬಿಸಲು ಪ್ರಧಾನಿಯ ರ್ಯಾಲಿಗೆ ಭಾಗವಹಿಸುವಂತೆ ಸರಕಾರಿ ಅಧಿಕಾರಿಗಳಿಗೆ ಈ ಮೊದಲು ಸೂಚನೆಯನ್ನು ನೀಡಲಾಗಿತ್ತು. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿತ್ತು. ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ. ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1,000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ.

ಇದನ್ನು ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...