Homeಮುಖಪುಟಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

ಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

- Advertisement -
- Advertisement -

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಚುನಾವಣಾ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಣಿವೆ ರಾಜ್ಯಕ್ಕೆ ತೆರಳುತ್ತಿದ್ದು, ಈ ವೇಳೆ ಜನಸಂದಣಿಯನ್ನು ತೋರಿಸುವ ಹಿನ್ನೆಲೆ 7,000 ಸರಕಾರಿ ನೌಕರರಿಗೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿರುವ ಬಗ್ಗೆ ವರದಿಯಾಗಿತ್ತು. ಇದೀಗ ಇದರ ಬೆನ್ನಲ್ಲಿ ಮೋದಿ ಭೇಟಿ ಹಿನ್ನೆಲೆ ಮಾರ್ಚ್ 7ರಂದು ನಿಗದಿಯಾಗಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಮಂಡಳಿಯ ಆದೇಶದಲ್ಲಿ ಮೋದಿ ಭೇಟಿಯನ್ನು ಉಲ್ಲೇಖಿಸದಿದ್ದರೂ, ಅನಿವಾರ್ಯ ಸಂದರ್ಭಗಳ ಹಿನ್ನೆಲೆ ಕೃಷಿ,  ಪ್ರವಾಸೋದ್ಯಮ ಸೇರಿದಂತೆ ವೃತ್ತಿಪರ ವಿಷಯಗಳ ಪರೀಕ್ಷೆ, 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡುವುದಾಗಿ ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ ಎಂದು ದಿ ಟೆಲಿಗ್ರಾಫ್ ವರದಿಯನ್ನು ಮಾಡಿದೆ. ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮಾರ್ಚ್ 7 ಮತ್ತು ಏಪ್ರಿಲ್ 3ರ ನಡುವೆ ನಡೆಯಲಿವೆ. ಪ್ರಾಯೋಗಿಕ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ.

ಮಾರ್ಚ್ 7ರಂದು ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೋದಿಯ ಮೊದಲ ಭೇಟಿಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲ ಎಂಬುವುದನ್ನು ಬಿಂಬಿಸಲು ಪ್ರಧಾನಿಯ ರ್ಯಾಲಿಗೆ ಭಾಗವಹಿಸುವಂತೆ ಸರಕಾರಿ ಅಧಿಕಾರಿಗಳಿಗೆ ಈ ಮೊದಲು ಸೂಚನೆಯನ್ನು ನೀಡಲಾಗಿತ್ತು. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿತ್ತು. ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ. ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1,000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ.

ಇದನ್ನು ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...