Homeಮುಖಪುಟಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

ಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

- Advertisement -
- Advertisement -

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಚುನಾವಣಾ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಣಿವೆ ರಾಜ್ಯಕ್ಕೆ ತೆರಳುತ್ತಿದ್ದು, ಈ ವೇಳೆ ಜನಸಂದಣಿಯನ್ನು ತೋರಿಸುವ ಹಿನ್ನೆಲೆ 7,000 ಸರಕಾರಿ ನೌಕರರಿಗೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿರುವ ಬಗ್ಗೆ ವರದಿಯಾಗಿತ್ತು. ಇದೀಗ ಇದರ ಬೆನ್ನಲ್ಲಿ ಮೋದಿ ಭೇಟಿ ಹಿನ್ನೆಲೆ ಮಾರ್ಚ್ 7ರಂದು ನಿಗದಿಯಾಗಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಮಂಡಳಿಯ ಆದೇಶದಲ್ಲಿ ಮೋದಿ ಭೇಟಿಯನ್ನು ಉಲ್ಲೇಖಿಸದಿದ್ದರೂ, ಅನಿವಾರ್ಯ ಸಂದರ್ಭಗಳ ಹಿನ್ನೆಲೆ ಕೃಷಿ,  ಪ್ರವಾಸೋದ್ಯಮ ಸೇರಿದಂತೆ ವೃತ್ತಿಪರ ವಿಷಯಗಳ ಪರೀಕ್ಷೆ, 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡುವುದಾಗಿ ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ ಎಂದು ದಿ ಟೆಲಿಗ್ರಾಫ್ ವರದಿಯನ್ನು ಮಾಡಿದೆ. ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮಾರ್ಚ್ 7 ಮತ್ತು ಏಪ್ರಿಲ್ 3ರ ನಡುವೆ ನಡೆಯಲಿವೆ. ಪ್ರಾಯೋಗಿಕ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ.

ಮಾರ್ಚ್ 7ರಂದು ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೋದಿಯ ಮೊದಲ ಭೇಟಿಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲ ಎಂಬುವುದನ್ನು ಬಿಂಬಿಸಲು ಪ್ರಧಾನಿಯ ರ್ಯಾಲಿಗೆ ಭಾಗವಹಿಸುವಂತೆ ಸರಕಾರಿ ಅಧಿಕಾರಿಗಳಿಗೆ ಈ ಮೊದಲು ಸೂಚನೆಯನ್ನು ನೀಡಲಾಗಿತ್ತು. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿತ್ತು. ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ. ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1,000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ.

ಇದನ್ನು ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...