Homeಮುಖಪುಟಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು - ಪಕ್ಷೇತರರು ಕಿಂಗ್ ಮೇಕರ್?

ಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು – ಪಕ್ಷೇತರರು ಕಿಂಗ್ ಮೇಕರ್?

"ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ- ಗುಪ್ಕರ್ ಮೈತ್ರಿಕೂಟ

- Advertisement -
- Advertisement -

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆದ ಮೊದಲ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್‌ ಕೌನ್ಸಿಲ್(ಡಿಡಿಸಿ) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್​​ ಅಬ್ದುಲ್ಲಾ ನೇತೃತ್ವದ ಗುಪ್ಕರ್​ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಒಟ್ಟು 20 ಜಿಲ್ಲೆಗಳಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಎನ್‌ಸಿ, ಪಿಡಿಪಿ ಸೇರಿದಂತೆ ಏಳು ಪ್ರಾದೇಶಿಕ ಪಕ್ಷಗಳ ಗುಂಪಾಗಿರುವ ಗುಪ್ಕರ್ ಮೈತ್ರಿಕೂಟ 13 ಜಿಲ್ಲೆಗಳಲ್ಲಿ ಜಯಗಳಿಸಿದೆ. ಜಮ್ಮುವಿನ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯ ಸಾಧಿಸಿದೆ.

ಪ್ರತಿ ಜಿಲ್ಲೆಯಲ್ಲಿ 14 ಸ್ಥಾನಗಳಂತೆ ಎಲ್ಲಾ 20 ಜಿಲ್ಲೆಗಳೂ ಸೇರಿ ಜಮ್ಮು ಕಾಶ್ಮೀರದ ಒಟ್ಟು 280 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಗುಪ್ಕರ್ ಮೈತ್ರಿಕೂಟ 110 ಸ್ಥಾನಗಳನ್ನು ಪಡೆದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು 74 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದು ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಇವರು ಕಿಂಗ್ ಮೇಕರ್‌ಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಒಂದು ಜಿಲ್ಲೆಯ ಫಲಿತಾಂಶ ಹೊರಬೀಳುವುದು ಬಾಕಿ ಇದೆ.

ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಮೈತ್ರಿ 72 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ಮೂರು ಸ್ಥಾನಗಳನ್ನು, ಕಾಂಗ್ರೆಸ್​​ 10 ಸ್ಥಾನಗಳನ್ನ ಗೆದ್ದುಕೊಂಡಿದೆ. ಗುಪ್ಕರ್​ ಮೈತ್ರಿಕೂಟ 9 ಜಿಲ್ಲಾ ಮಂಡಳಿಗಳ ಉಸ್ತುವಾರಿ ವಹಿಸಿಕೊಂಡರೆ, ಸ್ವತಂತ್ರ ಅಭ್ಯರ್ಥಿಗಳು ಗೆದ್ದಿರುವ ಶ್ರೀನಗರ ಜಿಲ್ಲಾ ಮಂಡಳಿಗಳ ಉಸ್ತುವಾರಿಯ ಕುರಿತು ಇನ್ನೂ ತೀರ್ಮಾನವಾಗಿಲ್ಲ.

ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದಿದ್ದು, ಜಮ್ಮು, ಉಧಂಪುರ್, ಸಾಂಬಾ, ಕಥುವಾ, ರಿಯಾಸಿ ಮತ್ತು ದೋಡಾದಲ್ಲಿ ಗೆದ್ದಿದೆ. ಗುಪ್ಕರ್ ಕೂಟ 35 ಸ್ಥಾನ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಅವರು ಯಾವ ಕಡೆ ಹೊರಳುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪಕ್ಷೇತರರ ಸಂಖ್ಯೆ ಕಾಂಗ್ರೆಸ್ ಮತ್ತು ಪಿಡಿಪಿಗಿಂತ ಹೆಚ್ಚಾಗಿದೆ.

“ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ” ಎಂದು ಗುಪ್ಕರ್‌ ಮೈತ್ರಿಕೂಟದ ಸದಸ್ಯರಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಇನ್ನು ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಜಯಗಳಿಸಿದ್ದಾರೆ.


ಇದನ್ನೂ ಓದಿ: ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...