Homeಮುಖಪುಟಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು - ಪಕ್ಷೇತರರು ಕಿಂಗ್ ಮೇಕರ್?

ಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು – ಪಕ್ಷೇತರರು ಕಿಂಗ್ ಮೇಕರ್?

"ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ- ಗುಪ್ಕರ್ ಮೈತ್ರಿಕೂಟ

- Advertisement -
- Advertisement -

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆದ ಮೊದಲ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್‌ ಕೌನ್ಸಿಲ್(ಡಿಡಿಸಿ) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್​​ ಅಬ್ದುಲ್ಲಾ ನೇತೃತ್ವದ ಗುಪ್ಕರ್​ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಒಟ್ಟು 20 ಜಿಲ್ಲೆಗಳಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಎನ್‌ಸಿ, ಪಿಡಿಪಿ ಸೇರಿದಂತೆ ಏಳು ಪ್ರಾದೇಶಿಕ ಪಕ್ಷಗಳ ಗುಂಪಾಗಿರುವ ಗುಪ್ಕರ್ ಮೈತ್ರಿಕೂಟ 13 ಜಿಲ್ಲೆಗಳಲ್ಲಿ ಜಯಗಳಿಸಿದೆ. ಜಮ್ಮುವಿನ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯ ಸಾಧಿಸಿದೆ.

ಪ್ರತಿ ಜಿಲ್ಲೆಯಲ್ಲಿ 14 ಸ್ಥಾನಗಳಂತೆ ಎಲ್ಲಾ 20 ಜಿಲ್ಲೆಗಳೂ ಸೇರಿ ಜಮ್ಮು ಕಾಶ್ಮೀರದ ಒಟ್ಟು 280 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಗುಪ್ಕರ್ ಮೈತ್ರಿಕೂಟ 110 ಸ್ಥಾನಗಳನ್ನು ಪಡೆದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು 74 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದು ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಇವರು ಕಿಂಗ್ ಮೇಕರ್‌ಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಒಂದು ಜಿಲ್ಲೆಯ ಫಲಿತಾಂಶ ಹೊರಬೀಳುವುದು ಬಾಕಿ ಇದೆ.

ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಮೈತ್ರಿ 72 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ಮೂರು ಸ್ಥಾನಗಳನ್ನು, ಕಾಂಗ್ರೆಸ್​​ 10 ಸ್ಥಾನಗಳನ್ನ ಗೆದ್ದುಕೊಂಡಿದೆ. ಗುಪ್ಕರ್​ ಮೈತ್ರಿಕೂಟ 9 ಜಿಲ್ಲಾ ಮಂಡಳಿಗಳ ಉಸ್ತುವಾರಿ ವಹಿಸಿಕೊಂಡರೆ, ಸ್ವತಂತ್ರ ಅಭ್ಯರ್ಥಿಗಳು ಗೆದ್ದಿರುವ ಶ್ರೀನಗರ ಜಿಲ್ಲಾ ಮಂಡಳಿಗಳ ಉಸ್ತುವಾರಿಯ ಕುರಿತು ಇನ್ನೂ ತೀರ್ಮಾನವಾಗಿಲ್ಲ.

ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದಿದ್ದು, ಜಮ್ಮು, ಉಧಂಪುರ್, ಸಾಂಬಾ, ಕಥುವಾ, ರಿಯಾಸಿ ಮತ್ತು ದೋಡಾದಲ್ಲಿ ಗೆದ್ದಿದೆ. ಗುಪ್ಕರ್ ಕೂಟ 35 ಸ್ಥಾನ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಅವರು ಯಾವ ಕಡೆ ಹೊರಳುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪಕ್ಷೇತರರ ಸಂಖ್ಯೆ ಕಾಂಗ್ರೆಸ್ ಮತ್ತು ಪಿಡಿಪಿಗಿಂತ ಹೆಚ್ಚಾಗಿದೆ.

“ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ” ಎಂದು ಗುಪ್ಕರ್‌ ಮೈತ್ರಿಕೂಟದ ಸದಸ್ಯರಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಇನ್ನು ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಜಯಗಳಿಸಿದ್ದಾರೆ.


ಇದನ್ನೂ ಓದಿ: ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...