Homeಮುಖಪುಟಮೂವರು ಶಾಸಕರೊಂದಿಗೆ ದೆಹಲಿಗೆ ಹೊರಟ ಜೆಎಂಎಂ ನಾಯಕ ಚಂಪೈ ಸೊರೇನ್; ಬಿಜೆಪಿ ಸೇರುವ ಸಾಧ್ಯತೆ

ಮೂವರು ಶಾಸಕರೊಂದಿಗೆ ದೆಹಲಿಗೆ ಹೊರಟ ಜೆಎಂಎಂ ನಾಯಕ ಚಂಪೈ ಸೊರೇನ್; ಬಿಜೆಪಿ ಸೇರುವ ಸಾಧ್ಯತೆ

- Advertisement -
- Advertisement -

ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳ ನಡುವೆಯೇ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಭಾನುವಾರ ದೆಹಲಿಗೆ ವಿಮಾನ ಏರಿದರು. ಅವರ ಜೊತೆ ಮೂವರು ಶಾಸಕರು ಇದ್ದಾರೆ.

ಜೆಎಂಎಂನ ಮಾಜಿ ಶಾಸಕ ಲೋಬಿನ್ ಹೆಂಬ್ರೋಮ್ ಮೂಲಕ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಗಮನಾರ್ಹವಾಗಿ, ಕಳೆದೆರಡು ದಿನಗಳಿಂದ ಹರಿದಾಡುತ್ತಿದ್ದ ವದಂತಿಗಳನ್ನು ಅವರು ತಳ್ಳಿಹಾಕಿದ ಒಂದು ದಿನದ ನಂತರ ಈ ಬೆಳವಣಿಗೆಯಾಗಿದೆ.

“ಯಾವ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ನನಗೆ ತಿಳಿದಿಲ್ಲ, ಯಾವ ಸುದ್ದಿಯನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ನನಗೆ ತಿಳಿದಿಲ್ಲ. ಹಾಗಾಗಿ, ಅದು ನಿಜವೋ ಸುಳ್ಳೋ ಎಂದು ನನಗೆ ಹೇಳಲು ಸಾಧ್ಯವಿಲ್ಲ, ಅದರ ಬಗ್ಗೆ ನನಗೆ ಏನೂ ತಿಳಿದಿಲ್ಲ” ಎಂದು ಅವರು ಹೇಳಿದ್ದರು.

ಪ್ರಸ್ತುತ ಹೇಮಂತ್ ಸೊರೇನ್ ನೇತೃತ್ವದ ಜಾರ್ಖಂಡ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಚಂಪೈ ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮಾಜಿ ಶಾಸಕ ಲೋಬಿನ್ ಹೆಂಬ್ರೋಮ್ ಕೂಡ ಸೊರೇನ್ ಅವರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಮುಖ್ಯಮಂತ್ರಿ ಕಚೇರಿಯಿಂದ ಸೊರೇನ್ ಅವರನ್ನು ಹೊರಹಾಕಿರುವುದು ಅವರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಹೇಮಂತ್ ಸೊರೇನ್ ಜೈಲು ಸೇರಿದ ನಂತರ ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕಗೊಂಡ ಚಂಪೈ ಸೊರೆನ್ ಅವರು ಐದು ತಿಂಗಳ ಅಲ್ಪಾವಧಿಯ ನಂತರ ರಾಜೀನಾಮೆ ನೀಡಿದರು. ಚಂಪೈ ಅವರು ಫೆಬ್ರವರಿ 2 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಅವರ ಹಿಂದಿನ ಹೇಮಂತ್ ಸೊರೇನ್ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತ್ತು.

ಹೇಮಂತ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ನಂತರ ಜೂನ್ 28 ರಂದು ಜೈಲಿನಿಂದ ಬಿಡುಗಡೆಗೊಂಡರು. ವಾರದ ನಂತರ ಅವರು ಪಕ್ಷದ ಶಾಸಕಾಂಗ ನಾಯಕರಾಗಿ ಆಯ್ಕೆಯಾದರು. ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್ ಅವರಿಗೆ ದಾರಿ ಮಾಡಿಕೊಡಲು ಚಂಪೈ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ವದಂತಿಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದೀಪಕ್ ಪ್ರಕಾಶ್, “ನಾನು ಇದನ್ನು ವರದಿಗಳಲ್ಲಿ ಮಾತ್ರ ಕೇಳಿದ್ದೇನೆ, ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಅವರು (ಚಂಪೈ ಸೊರೇನ್) ಜಾರ್ಖಂಡ್‌ಗೆ ಉತ್ತಮ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.. ಕೇಂದ್ರ ನಾಯಕತ್ವದ ಬಗ್ಗೆ ಜಾರ್ಖಂಡ್‌ನ 3.5 ಕೋಟಿ ಜನರು ಸಂತೋಷಪಟ್ಟಿದ್ದಾರೆ. ಆದರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ನಾನು ಯಾವುದೇ ತಪ್ಪು ಮಾಡಿಲ್ಲ, ಅಧಿಕಾರ ತ್ಯಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...