Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪ್ರಾರ್ಥನೆ ಮಾಡಲು ಬಯಸುವ ಹಿಂದೂ ಮಹಿಳೆಯರ ಅರ್ಜಿಯಗಳನ್ನು ಆಲಿಸಲು ಜಿಲ್ಲಾ ನ್ಯಾಯಾಲಯ ಸೋಮವಾರ ಒಪ್ಪಿಗೆ ನೀಡಿದೆ. ಕೋರ್ಟ್‌ನ ಈ ತೀರ್ಪನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮುಸ್ಲಿಂ ಅರ್ಜಿದಾರರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯ ಇಂದು ನೀಡಿದ ತೀರ್ಪಿನಂತೆ ಸೆಪ್ಟೆಂಬರ್‌‌‌ 22ರಂದು ಮಹಿಳೆಯರ ಅರ್ಜಿ ವಿಚಾರಣೆ ನಡೆಯಲಿದೆ. ಮಹಿಳೆಯರು ತಮ್ಮ ಅರ್ಜಿಯಲ್ಲಿ ಮಸೀದಿ ಸಂಕೀರ್ಣದ ಒಂದು ಭಾಗದಲ್ಲಿ ವರ್ಷಪೂರ್ತಿ ಪೂಜೆ ಮತ್ತು ಆಚರಣೆಗಳಿಗೆ ಅನುಮತಿ ನೀಡುವಂತೆ ಕೋರಿದ್ದರು. ಈ ಅರ್ಜಿಯನ್ನು ಪರಿಗಣಿಸಬಾರದು ಎಂದು ಮಸೀದಿ ಸಮಿತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ಮಸೀದಿ ಸಮಿತಿ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಮಹಿಳೆಯರ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀರ್ಪಿನ ಮೊದಲು, ಯಾವುದೇ ರೀತಿಯ ಹಿಂಸಾತ್ಮಕ ಪರಿಸ್ಥಿತಿಯನ್ನು ತಪ್ಪಿಸಲು ಮತ್ತು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಾರಣಾಸಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಮಹಿಳೆಯರು ಮಸೀದಿ ಸಂಕೀರ್ಣದಲ್ಲಿ ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳಿವೆ ಎಂದು ಪ್ರತಿಪಾದಿಸಿದ್ದಾರೆ. ಮುಸ್ಲಿಂ ಅರ್ಜಿದಾರರು ಮತ್ತು ಮುಖ್ಯವಾಗಿ ಮಸೀದಿ ನಿರ್ವಾಹಕರು, ಮಹಿಳೆಯರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕಾನೂನು ಹೋರಾಟ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್‌ನವರೆಗೆ ಹೋರಾಡಲು ಸಿದ್ಧ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಮಹಿಳೆಯರ ಅರ್ಜಿಯ ಆಧಾರದ ಮೇಲೆ ಮಸೀದಿಯ ಚಿತ್ರೀಕರಣಕ್ಕೆ ಕೆಳ ನ್ಯಾಯಾಲಯವು ಆದೇಶ ನೀಡಿತ್ತು. ಚಿತ್ರೀಕರಣದ ವರದಿಯನ್ನು ವಾರಣಾಸಿ ನ್ಯಾಯಾಲಯಕ್ಕೆ ಮುಚ್ಚಿದ ಕವರ್‌ನಲ್ಲಿ ಸಲ್ಲಿಸಲಾಗಿತ್ತು. ಆದರೆ ಹಿಂದೂ ಅರ್ಜಿದಾರರು ಕೆಲವೇ ಗಂಟೆಗಳ ನಂತರ ವಿವಾದಾತ್ಮಕವಾಗಿ ವಿವರಗಳನ್ನು ಸೋರಿಕೆ ಮಾಡಿದ್ದರು.

ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ಮೊದಲು ಅಂಗಾಗ ಶುದ್ಧೀಕರಣ ಆಚರಣೆ(ವುಝೂ)ಗಳಿಗಾಗಿ ಬಳಸಲಾಗುವ ಮಸೀದಿಯೊಳಗಿನ ಕೊಳದಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂದು ಸಂಘಪರಿವಾರ ಮತ್ತು ಮಾಧ್ಯಮಗಳು ವರದಿ ಮಾಡಿದ್ದವು. ಹೀಗಾಗಿ ನ್ಯಾಯಾಲಯವು ಕೊಳವನ್ನು ಸೀಲ್ ಮಾಡುವಂತೆ ಆದೇಶ ನೀಡಿ ಮಸೀದಿಯಲ್ಲಿ ದೊಡ್ಡ ನಮಾಜ್ ಕೂಟಗಳನ್ನು ನಿಷೇಧಿಸಿತು. ಕೂಟಗಳನ್ನು 20 ಜನರಿಗೆ ಸೀಮಿತಗೊಳಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಪೂಜೆಯ ಹಕ್ಕಿಗಾಗಿ ಸಲ್ಲಿಸಿದ್ದ ‘ಅರ್ಜಿ ವಿಚಾರಣೆ’ಗೆ ಅಂಗೀಕರಿಸಿದ ನ್ಯಾಯಾಲಯ

ಮಸೀದಿಯೊಳಗಿನ ಚಿತ್ರೀಕರಣವನ್ನು ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಈ ಕ್ರಮವು 1947 ಆಗಸ್ಟ್ 15ರಿಂದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ಥಾನಮಾನವನ್ನು ಕಾಯ್ದುಕೊಳ್ಳುವ 1991 ರ ಪೂಜಾ ಸ್ಥಳಗಳ ಕಾಯಿದೆಗೆ ವಿರುದ್ಧವಾಗಿ ಚಿತ್ರೀಕರಣ ನಡೆಯುತ್ತಿದೆ ಎಂದು ವಾದಿಸಿದ್ದರು.

“ವಿಷಯದ ಸಂಕೀರ್ಣತೆ ಮತ್ತು ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ವಾರಣಾಸಿಯ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆಯನ್ನು ಯುಪಿ ನ್ಯಾಯಾಂಗ ಸೇವೆಯ ಹಿರಿಯ ಮತ್ತು ಅನುಭವಿ ನ್ಯಾಯಾಂಗ ಅಧಿಕಾರಿಯ ಮುಂದೆ ವಿಚಾರಣೆ ನಡೆಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...