Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪ್ರಾರ್ಥನೆ ಮಾಡಲು ಬಯಸುವ ಹಿಂದೂ ಮಹಿಳೆಯರ ಅರ್ಜಿಯಗಳನ್ನು ಆಲಿಸಲು ಜಿಲ್ಲಾ ನ್ಯಾಯಾಲಯ ಸೋಮವಾರ ಒಪ್ಪಿಗೆ ನೀಡಿದೆ. ಕೋರ್ಟ್‌ನ ಈ ತೀರ್ಪನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮುಸ್ಲಿಂ ಅರ್ಜಿದಾರರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನ್ಯಾಯಾಲಯ ಇಂದು ನೀಡಿದ ತೀರ್ಪಿನಂತೆ ಸೆಪ್ಟೆಂಬರ್‌‌‌ 22ರಂದು ಮಹಿಳೆಯರ ಅರ್ಜಿ ವಿಚಾರಣೆ ನಡೆಯಲಿದೆ. ಮಹಿಳೆಯರು ತಮ್ಮ ಅರ್ಜಿಯಲ್ಲಿ ಮಸೀದಿ ಸಂಕೀರ್ಣದ ಒಂದು ಭಾಗದಲ್ಲಿ ವರ್ಷಪೂರ್ತಿ ಪೂಜೆ ಮತ್ತು ಆಚರಣೆಗಳಿಗೆ ಅನುಮತಿ ನೀಡುವಂತೆ ಕೋರಿದ್ದರು. ಈ ಅರ್ಜಿಯನ್ನು ಪರಿಗಣಿಸಬಾರದು ಎಂದು ಮಸೀದಿ ಸಮಿತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ ಮಸೀದಿ ಸಮಿತಿ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಮಹಿಳೆಯರ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀರ್ಪಿನ ಮೊದಲು, ಯಾವುದೇ ರೀತಿಯ ಹಿಂಸಾತ್ಮಕ ಪರಿಸ್ಥಿತಿಯನ್ನು ತಪ್ಪಿಸಲು ಮತ್ತು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಾರಣಾಸಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಮಹಿಳೆಯರು ಮಸೀದಿ ಸಂಕೀರ್ಣದಲ್ಲಿ ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳಿವೆ ಎಂದು ಪ್ರತಿಪಾದಿಸಿದ್ದಾರೆ. ಮುಸ್ಲಿಂ ಅರ್ಜಿದಾರರು ಮತ್ತು ಮುಖ್ಯವಾಗಿ ಮಸೀದಿ ನಿರ್ವಾಹಕರು, ಮಹಿಳೆಯರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕಾನೂನು ಹೋರಾಟ ನಡೆಸುತ್ತಿದ್ದು, ಸುಪ್ರೀಂ ಕೋರ್ಟ್‌ನವರೆಗೆ ಹೋರಾಡಲು ಸಿದ್ಧ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಮಹಿಳೆಯರ ಅರ್ಜಿಯ ಆಧಾರದ ಮೇಲೆ ಮಸೀದಿಯ ಚಿತ್ರೀಕರಣಕ್ಕೆ ಕೆಳ ನ್ಯಾಯಾಲಯವು ಆದೇಶ ನೀಡಿತ್ತು. ಚಿತ್ರೀಕರಣದ ವರದಿಯನ್ನು ವಾರಣಾಸಿ ನ್ಯಾಯಾಲಯಕ್ಕೆ ಮುಚ್ಚಿದ ಕವರ್‌ನಲ್ಲಿ ಸಲ್ಲಿಸಲಾಗಿತ್ತು. ಆದರೆ ಹಿಂದೂ ಅರ್ಜಿದಾರರು ಕೆಲವೇ ಗಂಟೆಗಳ ನಂತರ ವಿವಾದಾತ್ಮಕವಾಗಿ ವಿವರಗಳನ್ನು ಸೋರಿಕೆ ಮಾಡಿದ್ದರು.

ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವ ಮೊದಲು ಅಂಗಾಗ ಶುದ್ಧೀಕರಣ ಆಚರಣೆ(ವುಝೂ)ಗಳಿಗಾಗಿ ಬಳಸಲಾಗುವ ಮಸೀದಿಯೊಳಗಿನ ಕೊಳದಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂದು ಸಂಘಪರಿವಾರ ಮತ್ತು ಮಾಧ್ಯಮಗಳು ವರದಿ ಮಾಡಿದ್ದವು. ಹೀಗಾಗಿ ನ್ಯಾಯಾಲಯವು ಕೊಳವನ್ನು ಸೀಲ್ ಮಾಡುವಂತೆ ಆದೇಶ ನೀಡಿ ಮಸೀದಿಯಲ್ಲಿ ದೊಡ್ಡ ನಮಾಜ್ ಕೂಟಗಳನ್ನು ನಿಷೇಧಿಸಿತು. ಕೂಟಗಳನ್ನು 20 ಜನರಿಗೆ ಸೀಮಿತಗೊಳಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಪೂಜೆಯ ಹಕ್ಕಿಗಾಗಿ ಸಲ್ಲಿಸಿದ್ದ ‘ಅರ್ಜಿ ವಿಚಾರಣೆ’ಗೆ ಅಂಗೀಕರಿಸಿದ ನ್ಯಾಯಾಲಯ

ಮಸೀದಿಯೊಳಗಿನ ಚಿತ್ರೀಕರಣವನ್ನು ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಈ ಕ್ರಮವು 1947 ಆಗಸ್ಟ್ 15ರಿಂದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ಥಾನಮಾನವನ್ನು ಕಾಯ್ದುಕೊಳ್ಳುವ 1991 ರ ಪೂಜಾ ಸ್ಥಳಗಳ ಕಾಯಿದೆಗೆ ವಿರುದ್ಧವಾಗಿ ಚಿತ್ರೀಕರಣ ನಡೆಯುತ್ತಿದೆ ಎಂದು ವಾದಿಸಿದ್ದರು.

“ವಿಷಯದ ಸಂಕೀರ್ಣತೆ ಮತ್ತು ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ವಾರಣಾಸಿಯ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆಯನ್ನು ಯುಪಿ ನ್ಯಾಯಾಂಗ ಸೇವೆಯ ಹಿರಿಯ ಮತ್ತು ಅನುಭವಿ ನ್ಯಾಯಾಂಗ ಅಧಿಕಾರಿಯ ಮುಂದೆ ವಿಚಾರಣೆ ನಡೆಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...