Homeಮುಖಪುಟಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು.

- Advertisement -
- Advertisement -

ಖ್ಯಾತ ಮಲಯಾಳಂ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಅಕ್ಕಿತಂ ಅಚ್ಯುತನ್ ನಂಬೂದಿರಿ ಇಂದು ಬೆಳಿಗ್ಗೆ ನಿಧನರಾದರು. ಅವರ 94 ವಯಸ್ಸಾಗಿತ್ತು. ಅವರು ಕಳೆದ ಕೆಲವು ದಿನಗಳಿಂದ ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರು ಕವನ, ಸಣ್ಣ ಕಥೆಗಳು, ನಾಟಕಗಳು, ಅನುವಾದಗಳು ಮತ್ತು ಪ್ರಬಂಧಗಳು ಸೇರಿದಂತೆ 40 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಅಕ್ಕಿತಂಗೆ ಕಳೆದ ಸೆಪ್ಟೆಂಬರ್‌ನಲ್ಲಿ ದೇಶದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರು ಮಲಯಾಳಂ ಸಾಹಿತ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿ ಪಡೆದ ಆರನೇ ಸಾಹಿತಿಯಾಗಿದ್ದರು.  ಅಷ್ಟೇ ಅಲ್ಲದೆ ಅವರಿಗೆ ಪದ್ಮಶ್ರೀ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಎಳುತಚ್ಚನ್ ಪ್ರಶಸ್ತಿಗಳನ್ನು ಪಡೆದಿದ್ದರು.

ಅಕ್ಕಿತಂ ಅವರ ಕೃತಿಗಳಲ್ಲಿ ’ಇರುವತಾಮ್ ನೂಟಾಡಿಂಡೆ ಇತಿಹಾಸಂ’, ’ಬಲಿದರಾಶನಂ’ ಮತ್ತು ‘ಧರ್ಮ ಸೂರ್ಯನ್’ ಪ್ರಮುಖವಾಗಿದೆ. ಮಲಯಾಳಂ ಕಾವ್ಯದಲ್ಲಿ ಆಧುನಿಕತಾವಾದವನ್ನು ತಿಳಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಆನ್ ಮನೋರಮ ಬರೆದಿದೆ.

ಸಾಂಪ್ರದಾಯಿಕ ನಂಬೂದಿರಿ (ಬ್ರಾಹ್ಮಣ) ಕುಟುಂಬದಲ್ಲಿ ಮಾರ್ಚ್ 18, 1926 ರಂದು ಜನಿಸಿದ ಅಕ್ಕಿತಂ ತನ್ನ ಎಂಟನೇ ವಯಸ್ಸಿನಲ್ಲಿ ಮಲಯಾಳಂ ಸಾಹಿತ್ಯಕ್ಕೆ ತನ್ನ ಮೊದಲ ಕವಿತೆಯನ್ನು ಬರೆಯುವ ಮೂಲಕ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಬಾಲ್ಯದಲ್ಲಿ ಚಿತ್ರಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಅವರು ವೇದ, ಇಂಗ್ಲಿಷ್, ಗಣಿತ ಮತ್ತು ತಮಿಳು ಭಾಷೆಯನ್ನು ಅಧ್ಯಯನ ಮಾಡಿದ್ದಾರೆ.

ಕೋಯಿಕೋಡ್‌ನ ಝಾಮೊರಿನ್ ಗುರುವಾಯೂರಪ್ಪನ್ ಕಾಲೇಜಿಗೆ ಸೇರಿಕೊಂಡಿದ್ದ ಅವರು, ಅನಾರೋಗ್ಯದ ಕಾರಣ ಅಧ್ಯಯನ ಕೈಬಿಟ್ಟರು. ನಂತರ ಅವರು ತ್ರಿಶೂರ್ ಮಂಗಳೋದಯಂ ಪ್ರೆಸ್ ಬಿಡುಗಡೆ ಮಾಡುವ ”ಉಣ್ಣಿ ನಂಬೂದಿರಿ”ಗೆ ಮುದ್ರಕ ಮತ್ತು ಪ್ರಕಾಶಕರಾದರು. ನಂತರ ಸಾಮಾಜಿಕ ಸುಧಾರಣೆ ಮತ್ತು ನವೋದಯ ಚಳುವಳಿಗಳಲ್ಲಿ ಪಾಲ್ಗೊಳ್ಳುವುದರ ಜೊತೆಜೊತೆಗೆ ಕವಿ, ಪ್ರಬಂಧಕಾರ ಮತ್ತು ಸಂಪಾದಕರಾಗಿ ಮಾನ್ಯತೆ ಪಡೆದರು. ಅಷ್ಟೇ ಅಲ್ಲದೆ ಯೋಗಕ್ಷೆಮಂ ಮತ್ತು ಮಂಗಳೋದಯಂ ನಿಯತಕಾಲಿಕೆಗಳ ಸಂಪಾದಕೀಯ ಮಂಡಳಿಯ ಸದಸ್ಯರಾಗಿದ್ದರು.

ಅಕ್ಕಿತಂ ಆಲ್ ಇಂಡಿಯಾ ರೇಡಿಯೊದಲ್ಲಿ ಕೆಲಸ ಮಾಡಿ 1985 ರಲ್ಲಿ ನಿವೃತ್ತರಾದರು. ಕೇರಳ ಸಾಹಿತ್ಯ ಅಕಾಡೆಮಿಯ ಉಪಾಧ್ಯಕ್ಷರಾಗಿ ಕೂಡಾ ಇವರು ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...