Homeಮುಖಪುಟಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು.

- Advertisement -
- Advertisement -

ಖ್ಯಾತ ಮಲಯಾಳಂ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಅಕ್ಕಿತಂ ಅಚ್ಯುತನ್ ನಂಬೂದಿರಿ ಇಂದು ಬೆಳಿಗ್ಗೆ ನಿಧನರಾದರು. ಅವರ 94 ವಯಸ್ಸಾಗಿತ್ತು. ಅವರು ಕಳೆದ ಕೆಲವು ದಿನಗಳಿಂದ ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರು ಕವನ, ಸಣ್ಣ ಕಥೆಗಳು, ನಾಟಕಗಳು, ಅನುವಾದಗಳು ಮತ್ತು ಪ್ರಬಂಧಗಳು ಸೇರಿದಂತೆ 40 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಅಕ್ಕಿತಂಗೆ ಕಳೆದ ಸೆಪ್ಟೆಂಬರ್‌ನಲ್ಲಿ ದೇಶದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರು ಮಲಯಾಳಂ ಸಾಹಿತ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿ ಪಡೆದ ಆರನೇ ಸಾಹಿತಿಯಾಗಿದ್ದರು.  ಅಷ್ಟೇ ಅಲ್ಲದೆ ಅವರಿಗೆ ಪದ್ಮಶ್ರೀ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಎಳುತಚ್ಚನ್ ಪ್ರಶಸ್ತಿಗಳನ್ನು ಪಡೆದಿದ್ದರು.

ಅಕ್ಕಿತಂ ಅವರ ಕೃತಿಗಳಲ್ಲಿ ’ಇರುವತಾಮ್ ನೂಟಾಡಿಂಡೆ ಇತಿಹಾಸಂ’, ’ಬಲಿದರಾಶನಂ’ ಮತ್ತು ‘ಧರ್ಮ ಸೂರ್ಯನ್’ ಪ್ರಮುಖವಾಗಿದೆ. ಮಲಯಾಳಂ ಕಾವ್ಯದಲ್ಲಿ ಆಧುನಿಕತಾವಾದವನ್ನು ತಿಳಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಆನ್ ಮನೋರಮ ಬರೆದಿದೆ.

ಸಾಂಪ್ರದಾಯಿಕ ನಂಬೂದಿರಿ (ಬ್ರಾಹ್ಮಣ) ಕುಟುಂಬದಲ್ಲಿ ಮಾರ್ಚ್ 18, 1926 ರಂದು ಜನಿಸಿದ ಅಕ್ಕಿತಂ ತನ್ನ ಎಂಟನೇ ವಯಸ್ಸಿನಲ್ಲಿ ಮಲಯಾಳಂ ಸಾಹಿತ್ಯಕ್ಕೆ ತನ್ನ ಮೊದಲ ಕವಿತೆಯನ್ನು ಬರೆಯುವ ಮೂಲಕ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಬಾಲ್ಯದಲ್ಲಿ ಚಿತ್ರಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಅವರು ವೇದ, ಇಂಗ್ಲಿಷ್, ಗಣಿತ ಮತ್ತು ತಮಿಳು ಭಾಷೆಯನ್ನು ಅಧ್ಯಯನ ಮಾಡಿದ್ದಾರೆ.

ಕೋಯಿಕೋಡ್‌ನ ಝಾಮೊರಿನ್ ಗುರುವಾಯೂರಪ್ಪನ್ ಕಾಲೇಜಿಗೆ ಸೇರಿಕೊಂಡಿದ್ದ ಅವರು, ಅನಾರೋಗ್ಯದ ಕಾರಣ ಅಧ್ಯಯನ ಕೈಬಿಟ್ಟರು. ನಂತರ ಅವರು ತ್ರಿಶೂರ್ ಮಂಗಳೋದಯಂ ಪ್ರೆಸ್ ಬಿಡುಗಡೆ ಮಾಡುವ ”ಉಣ್ಣಿ ನಂಬೂದಿರಿ”ಗೆ ಮುದ್ರಕ ಮತ್ತು ಪ್ರಕಾಶಕರಾದರು. ನಂತರ ಸಾಮಾಜಿಕ ಸುಧಾರಣೆ ಮತ್ತು ನವೋದಯ ಚಳುವಳಿಗಳಲ್ಲಿ ಪಾಲ್ಗೊಳ್ಳುವುದರ ಜೊತೆಜೊತೆಗೆ ಕವಿ, ಪ್ರಬಂಧಕಾರ ಮತ್ತು ಸಂಪಾದಕರಾಗಿ ಮಾನ್ಯತೆ ಪಡೆದರು. ಅಷ್ಟೇ ಅಲ್ಲದೆ ಯೋಗಕ್ಷೆಮಂ ಮತ್ತು ಮಂಗಳೋದಯಂ ನಿಯತಕಾಲಿಕೆಗಳ ಸಂಪಾದಕೀಯ ಮಂಡಳಿಯ ಸದಸ್ಯರಾಗಿದ್ದರು.

ಅಕ್ಕಿತಂ ಆಲ್ ಇಂಡಿಯಾ ರೇಡಿಯೊದಲ್ಲಿ ಕೆಲಸ ಮಾಡಿ 1985 ರಲ್ಲಿ ನಿವೃತ್ತರಾದರು. ಕೇರಳ ಸಾಹಿತ್ಯ ಅಕಾಡೆಮಿಯ ಉಪಾಧ್ಯಕ್ಷರಾಗಿ ಕೂಡಾ ಇವರು ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...