Homeಚಳವಳಿಜ್ಞಾನಪೀಠ ವಿಜೇತ ಲೇಖಕ ದಾಮೋದರ್ ಮೌಜೋ ಸಹ ಸನಾತನಾ ಸಂಸ್ಥೆಯ ಹಿಟ್ ಲಿಸ್ಟ್‌ನಲ್ಲಿದ್ದರು!

ಜ್ಞಾನಪೀಠ ವಿಜೇತ ಲೇಖಕ ದಾಮೋದರ್ ಮೌಜೋ ಸಹ ಸನಾತನಾ ಸಂಸ್ಥೆಯ ಹಿಟ್ ಲಿಸ್ಟ್‌ನಲ್ಲಿದ್ದರು!

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರದ ತನಿಖೆಯಲ್ಲಿ ಮೌಜೋರವರ ಹೆಸರು ಸಹ ಇರುವುದು ಬಹಿರಂಗವಾಗಿತ್ತು.

- Advertisement -
- Advertisement -

2021ರ ಸಾಲಿನ ಜ್ಞಾನಪೀಠ ಪ್ರಶಸ್ತಿಯು ಕೊಂಕಣಿ ಭಾಷೆಯ ಖ್ಯಾತ ಲೇಖಕ ದಾಮೋದರ ಮೌಜೋರವರಿಗೆ ಲಭಿಸಿದ್ದು ನಮಗೆಲ್ಲ ಗೊತ್ತಿದೆ. 1944 ರಲ್ಲಿ ಗೋವಾದಲ್ಲಿ ಜನಿಸಿದ ದಾಮೋದರ ಮೌಜೋ ಅವರು ತಮ್ಮ ಸಣ್ಣ ಕತೆಗಳು ಮತ್ತು ಕಾದಂಬರಿಗಳಿಗೆ ಪ್ರಸಿದ್ಧರು. ಜಾತಿ, ಮತ, ಲಿಂಗ ಇತ್ಯಾದಿಗಳು ಮಾನವ ಸಂಬಂಧಗಳಲ್ಲಿ ತಂದೊಡ್ಡುವ ಬಿರುಕುಗಳನ್ನು ಅವರು ದಿಟ್ಟವಾಗಿ ಮತ್ತು ವ್ಯಂಗ್ಯವಾಗಿ ಅಭಿವ್ಯಕ್ತಿಸಿದ್ದಾರೆ. ಜಿ.ಎನ್ ದೇವಿ, ಎಂ.ಎಂ ಕಲಬುರ್ಗಿ ಮೊದಲಾದವರೊಡನೆ ಕೆಲಸ ಮಾಡಿದ ಮೌಜೋ ಅವರು ತಮ್ಮ ಕ್ರಿಯಾಶೀಲತೆಗೂ ಹೆಸರಾದವರು. ಆ ಮೂಲಕ ಕೊಂಕಣಿ ಭಾಷೆಗೆ ಎರಡನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಅವರದು. ಅಷ್ಟು ಮಾತ್ರವಲ್ಲದೆ ಅವರು ಶೋಷಿತರು, ತಳಸಮುದಾಯಗಳು ಪರವಾಗಿ ಮತ್ತು ಕೋಮುವಾದದ ವಿರುದ್ಧದ ಸ್ಪಷ್ಟ ನಿಲುವುಗಳಿಂದಾಗಿ ಸನಾತನಾ ಸಂಸ್ಥೆಯ ಹಿಟ್‌ ಲಿಸ್ಟ್‌ನಲ್ಲಿದ್ದರು ಎಂಬ ಅಂಶ ತಿಳಿದುಬಂದಿದೆ.

ಬಲಪಂಥೀಯ ತೀವ್ರವಾದಿಗಳ ವಿರುದ್ಧ ಮೌಜೋರವರು ಧೈರ್ಯದಿಂದ ಮಾತನಾಡಲು ಎಂದಿಗೂ ಹಿಂಜರಿದಿರಲಿಲ್ಲ. 2015ರಲ್ಲಿ ವಿಚಾರವಾದಿ ಎಂ.ಎಂ ಕಲಬುರ್ಗಿ ಅವರ ಹತ್ಯೆಯ ನಂತರ ಮೌಜೋರವರು ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ಸಾಹಿತ್ಯ ಅಕಾಡೆಮಿ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ, “ಸಾಹಿತಿ, ಬರಹಗಾರರು, ಚಿಂತಕರು ಏಕ ಸಂಸ್ಕೃತಿಯ ಗೂಂಡಾಗಿರಿ ಮತ್ತು ಮಾರಲ್ ಪೊಲೀಸಿಂಗ್ ಅನ್ನು ತಡೆಯಲು ಒಗ್ಗಟ್ಟಾಗಿ ನಿಲ್ಲಬೇಕು” ಎಂದು ಆಗ್ರಹಿಸಿದ್ದರು. ಹಲವು ಸನಾತನಾವಾದಿಗ ಬೆದರಿಕೆಗಳ ನಡುವೆಯೂ ಜನವರಿ 2016 ರಲ್ಲಿ ಗುಜರಾತ್‌ನ ದಂಡಿಯಲ್ಲಿ ನಡೆದ ಸೆಮಿನಾರ್‌ನಲ್ಲಿ ಅವರ ಭಾಷಣವದಲ್ಲಿ ಅವರು ಬಲಪಂಥೀಯ ಉಗ್ರಗಾಮಿಗಳನ್ನು ಕಟು ಪದಗಳಲ್ಲಿ ಟೀಕಿಸಿದ್ದರು. ಅಲ್ಲದೆ 2019 ರ ಲೋಕಸಭಾ ಚುನಾವಣೆಯ ಮುನ್ನಾದಿನದಂದು “ಫ್ಯಾಸಿಸ್ಟ್ ಆಡಳಿತವನ್ನು ಸೋಲಿಸಿ” ಎಂದು ನಾಗರಿಕರಿಗೆ ಮನವಿ ಮಾಡಿದ್ದರು.

ಹಾಗಾಗಿಯೇ ಸಾಹಿತಿ, ಚಿಂತಕರು, ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈಯಲು ಬಲಪಂಥೀಯ ಉಗ್ರಗಾಗಮಿಗಳು ಸಿದ್ದಪಡಿಸಿದ್ದ ಲಿಸ್ಟ್‌ನಲ್ಲಿ ದಾಮೋದರ ಮೌಜೋರವರ ಹೆಸರು ಸಹ ಇತ್ತು. ಕರ್ನಾಟಕದಲ್ಲಿ ಕೋಮುವಾದಿಗಳಿಗೆ ಸಿಂಹ ಸ್ವಪ್ನವಾಗಿದ್ದ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರ ಕರ್ನಾಟಕ ಎಸ್‌ಐಟಿ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದ ತನಿಖೆಯಲ್ಲಿ ಮೌಜೋರವರ ಹೆಸರು ಸಹ ಇರುವುದು ಬಹಿರಂಗವಾಗಿತ್ತು. ಅವರೊಂದಿಗೆ ದಿವಗಂತ ಗಿರೀಶ್ ಕಾರ್ನಾಡ್, ವಿಚಾರವಾದಿ ಕೆ.ಎಸ್ ಭಗವಾನ್, ಪತ್ರಕರ್ತ ನಿಖಿಲ್ ವಾಗ್ಲೆ ಸೇರಿದಂತೆ ಇತರರ ಹೆಸರುಗಳಿದ್ದವು.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಗೋವಿಂದ ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, ಸೆಪ್ಟಂಬರ್ 05, 2017ರಂದು ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಸನಾತನಾ ಸಂಸ್ಥೆಯ ಕೈವಾಡವಿದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ. ಈ ಸಂಬಂಧ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿನ 30ಕ್ಕೂ ಹೆಚ್ಚು ಸನಾತನಾ ಸಂಸ್ಥೆಯ ಸದಸ್ಯರನ್ನು ಬಂಧಿಸಲಾಗಿದೆ.

ಆ ಸಂದರ್ಭದಲ್ಲಿ ಎಲ್ಲಾ ಹೋರಾಟಗಾರರಂತೆ ಮೌಜೋರವರಿಗೆ ಇಷ್ಟವಿಲ್ಲದಿದ್ದರೂ ಪೊಲೀಸ್ ರಕ್ಷಣೆ ನೀಡಲಾಗಿತ್ತು. ಆದರೆ ದಾಮೋದರ ಮೌಜೋರವರು ಧೈರ್ಯವಾಗಿ ಮಾತನಾಡುವುದನ್ನು ನಿಲ್ಲಿಸಿರಲಿಲ್ಲ. ಅವರು ಪತ್ರಕರ್ತ ನಿಖಿಲ್ ವಾಗ್ಲೆ ಜೊತೆಗಿನ ಸಂದರ್ಶನವೊಂದರಲ್ಲಿ “ಭಾರತ ಸರ್ಕಾರವು ಸಿಮಿ [ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ] ಅಥವಾ ಝಾಕಿರ್ ನಾಯ್ಕ್ ಅವರ ಸಂಘಟನೆಗಳನ್ನು ನಿಷೇಧಿಸಲು ಸಾಧ್ಯವಾದರೆ, ಹಿಂದುತ್ವದ ಉಗ್ರಗಾಮಿ ಗುಂಪುಗಳನ್ನು ನಿಷೇಧಿಸಲು ಏಕೆ ಸಾಧ್ಯವಿಲ್ಲ? ನಿಷೇಧ ಮಾಡದಂತೆ ತಡೆಯುತ್ತಿರುವವರಾದರೂ ಯಾರು? ಈ ಸಂಘಟನೆಗಳು ಹಿಂದೂ ಗುಂಪು ಎಂಬ ಕಾರಣಕ್ಕಾಗಿ ನಿರ್ಭಯವಾಗಿ ಕುಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಹೇಳಿದ್ದರು.

ಮೌಝೋರವರು 1980ರಲ್ಲಿಯೇ ‘ಕಾರ್ಮೆಲಿನ್’ ಎಂಬ ಕಾದಂಬರಿಯಲ್ಲಿ ಮಧ್ಯಪ್ರಾಚ್ಯದಲ್ಲಿ ಮನೆಗೆಲಸದ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಬರೆದಿದ್ದಾರೆ. ಅವರ ‘ದಿ ಬರ್ಗರ್’ ಎಂಬ ಕಥೇಯಲ್ಲಿ ದನದ ಮಾಂಸದ ಪ್ರಸ್ತಾಪ ಬರುತ್ತದೆ. ಇನ್ನೊಂದು ಕಥೆಯಲ್ಲಿ ಗೋರಕ್ಷಕರು ದಲಿತ ಯುವಕರನ್ನು ಹೇಗೆ ಬೆದರಿಸಿದರು ಎಂಬುದನ್ನು ವಿವರಿಸಿದ್ದಾರೆ. ಅಂದರೆ ಬಹುತೇಕ ಈ ವಿಚಾರಗಳು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಬರುವ ಮುನ್ನವೇ ಅವರು ತಮ್ಮ ಸಾಹಿತ್ಯಗಳಲ್ಲಿ ಉಲ್ಲೇಖಿಸಿದ್ದಾರೆ. ಅವರು ಇಂದಿಗೂ ಬಲಪಂಥೀಯ ತೀವ್ರವಾದಗಳ ಅಪಾಯಗಳ ಕುರಿತು ಮಾತನಾಡುತ್ತಲೇ ಇದ್ದಾರೆ.

ಮಾಹಿತಿ ಕೃಪೆ: ನ್ಯೂಸ್ ಕ್ಲಿಕ್


ಇದನ್ನೂ ಓದಿ:  ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ಭಾಗ -2: ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ಸತ್ಯಗಳು… ಭಾಗ-2

ಭಾಗ -3: ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...