Homeಮುಖಪುಟಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

ಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

- Advertisement -
- Advertisement -

2020 ರ ಜೆಎನ್‌ಯು ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಲವಾರು ವಿದ್ಯಾರ್ಥಿಗಳ ಮೇಳೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

2020 ರ ಜನವರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ ಎಂದು  ಕೇಂದ್ರ ಗೃಹ ಖಾತೆಗಳ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಘಟನೆ ನಡೆದು ಒಂದೂವರೆ ವರ್ಷಗಳ ನಂತರವೂ ಯಾರನ್ನೂ ಬಂಧಿಸಲಾಗಿಲ್ಲ.

ಹಿಂಸಾಚಾರ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡ ರಚಿಸಲಾಗಿತ್ತು, ಇದರ ಭಾಗವಾಗಿ ಸಾಕ್ಷಿಗಳನ್ನು ಪರಿಶೀಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದ ಫೂಟೇಜ್‌ಗಳ ಸಂಗ್ರಹ ಮತ್ತು ವಿಶ್ಲೇಷಣೆ ನಡೆಸಲಾಗಿತ್ತು. ಶಂಕಿತರನ್ನು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಲಾಗಿತ್ತು. ಆದರೆ, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಕೇಂದ್ರ ಸಚಿವಾಲಯವು ಸಂಸತ್ತಿನಲ್ಲಿ ಡಿಎಂಕೆಯ ದಯಾನಿಧಿ ಮಾರನ್ ಅವರ ಪ್ರಶ್ನೆಗೆ ಮಾಹಿತಿ ನೀಡಿದೆ.

ಜನವರಿ 5, 2020 ರಂದು, ಸುಮಾರು 50 ಮಂದಿ ಮುಖವಾಡ ಧರಿಸಿದ ಯುವಕರು ಮತ್ತು ಮಹಿಳೆಯರು, ಕಬ್ಬಿಣದ ರಾಡ್‌ಗಳು ಮತ್ತು ಸುತ್ತಿಗೆಗಗಳನ್ನು ಹಿಡಿದು ಶಸ್ತ್ರಸಜ್ಜಿತರಾಗಿ, ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಿದ್ದರು. ವಿದ್ಯಾರ್ಥಿಗಳು ಎಚ್ಚರಗೊಳ್ಳುವ ಮೊದಲೇ ಹಾಸ್ಟೆಲ್‌ಗಳು ಮತ್ತು ಇತರ ಕಟ್ಟಡಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಇದನ್ನೂ ಓದಿ: “ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

 

ಜೆಎನ್‌ಯು  ಅಧ್ಯಕ್ಷೆ ಐಶೆ ಘೋಷ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಮಾರಣಾಂತಿಕ ದಾಲೀಗೆ ಒಳಗಾಗಿ ತಲೆಯಿಂದ ರಕ್ತ ಹರಿಯುತ್ತಿದ್ದ ಆಕೆಯ ಫೋಟೋಗಳು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ABVP ಸದಸ್ಯರೇ ದಾಳಿ ನಡೆಸಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದೆ, ಹಾಗಾಗಿಯೇ ಪೊಲೀಸರು ದಾಳಿಗೆ ಸಹಕರಿಸಿದ್ದಾರೆ ಎಂದು ಹಿಂಸಾಚಾರದ ವಿರುದ್ಧ ಮುಂಬೈ, ಚೆನ್ನೈ, ಪುಣೆ, ಹೈದರಾಬಾದ್, ಒಡಿಶಾ, ಕೋಲ್ಕತಾ, ಬೆಂಗಳೂರು ಮತ್ತು ಅಹಮದಾಬಾದ್‌ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ವಿಪಕ್ಷ ನಾಯಕರು ಘಟನೆಯನ್ನು ಖಂಡಿಸಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದರು. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಕರೆದಿದ್ದರು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಸಚಿವ ಪಿ ಚಿದಂಬರಂ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ಮಂದಿ ತನಿಖೆಗೆ ಆಗ್ರಹಿಸಿದ್ದರು.


ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿಗಳ ಪರವಾಗಿ ನಾವಿದ್ದೇವೆ: JNU ಹಿಂಸೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...