Homeಮುಖಪುಟಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

ಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

- Advertisement -
- Advertisement -

ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೋರ್ಟ್‌ಗೆ ರಾಜ್ಯಸಭೆಯಿಂದ ಡಾ.ಕೆ. ಲಕ್ಷ್ಮಣ್, ಡಾ. ಸುಮರ್ ಸಿಂಗ್ ಸೋಲಂಕಿ ಮತ್ತು ಡಾ. ಅನಿಲ್ ಸುಖದೇರಾವ್ ಬೋಂಡೆ ಸೇರಿದಂತೆ ಮೂವರು ಬಿಜೆಪಿ ಸಂಸದರನ್ನು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ಜೆಎನ್‌ಯು ಕೋರ್ಟ್‌ ವಿಶ್ವವಿದ್ಯಾನಿಲಯದ ಸರ್ವೋಚ್ಚ ಪ್ರಾಧಿಕಾರವಾಗಿದ್ದು, ಅದು ಕಾರ್ಯಕಾರಿ ಮಂಡಳಿ ಮತ್ತು ಅಕಾಡೆಮಿಕ್ ಕೌನ್ಸಿಲ್‌ನ ಕ್ರಮಗಳನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದೆ. ವಾರ್ಷಿಕವಾಗಿ ಸಭೆ ಸೇರುವ ಈ ಕೋರ್ಟ್ ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ, ಲೆಕ್ಕಪತ್ರಗಳು, ಆಡಿಟ್ ವರದಿ ಮತ್ತು ಬಜೆಟ್ ಅನ್ನು ಪರಿಗಣಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಲಕ್ಷ್ಮಣ್ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಲ್ಲಿ ಒಬ್ಬರು. ಅಷ್ಟೆ ಅಲ್ಲದೆ, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಮುಂಬರುವ ಸಾಂಸ್ಥಿಕ ಚುನಾವಣೆಯ ರಾಷ್ಟ್ರೀಯ ಚುನಾವಣಾಧಿಕಾರಿಯಾಗಿ ಲಕ್ಷ್ಮಣ್ ಅವರನ್ನು ನೇಮಿಸಲಾಗಿದೆ.

ಡಾ. ಸುಮೇರ್ ಸಿಂಗ್ ಸೋಲಂಕಿ ಅವರು ಮಧ್ಯಪ್ರದೇಶದ ಸಂಸದರಾಗಿದ್ದು, ಅವರು ಈ ಹಿಂದೆ ಬರ್ವಾನಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ (ಇತಿಹಾಸ) ಕೆಲಸ ಮಾಡಿದ್ದರು. ಅವರು ಆರೆಸ್ಸೆಸ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಕೂಡಾ ಹೇಳಲಾಗುತ್ತದೆ.

ಮಹಾರಾಷ್ಟ್ರದವರಾಗಿರುವ ಡಾ. ಅನಿಲ್ ಸುಖದೇವರಾವ್ ಬೋಂಡೆ ಅವರು ವೈದ್ಯಕೀಯ ವೃತ್ತಿಪರರಾಗಿದ್ದು, ಪ್ರಸ್ತುತ ರಾಜಕೀಯಕ್ಕೆ ಇಳಿದಿದ್ದಾರೆ. ಸಂಸತ್ತಿನ ಕಳೆದ ಅಧಿವೇಶನದಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ದೂರವಿಡುವಂತೆ ಅವರು ಧ್ವನಿ ಎತ್ತಿದ್ದರು.

ಜೆಎನ್‌ಯು ಕೋರ್ಟ್‌ ಸಭೆಯು ಅದರ ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತದೆ. ಜೆಎನ್‌ಯು ಕೋರ್ಟ್‌ ಕಾರ್ಯಕಾರಿ ಮಂಡಳಿಯ ಸದಸ್ಯರು, ರೆಕ್ಟರ್, ವಿದ್ಯಾರ್ಥಿಗಳ ಡೀನ್‌ಗಳು, ಮುಖ್ಯ ರಕ್ಷಕ ಹಣಕಾಸು ಅಧಿಕಾರಿ, ವಿಶ್ವವಿದ್ಯಾಲಯದ ಗ್ರಂಥಪಾಲಕರು, ಹಿರಿಯ ವಾರ್ಡನ್‌ಗಳು ಮತ್ತು ಸಂಸತ್ತಿನ ಹತ್ತು ಪ್ರತಿನಿಧಿಗಳನ್ನು ಒಳಗೊಂಡಿದೆ.

ಸಂಸತ್ತಿನ ಪ್ರತಿನಿಧಿಗಳಲ್ಲಿ ಲೋಕಸಭೆಯ ಸ್ಪೀಕರ್ ನಾಮನಿರ್ದೇಶನ ಮಾಡಿದ ಆರು ಸದಸ್ಯರು ಮತ್ತು ರಾಜ್ಯಸಭೆಯ ಸ್ಪೀಕರ್‌ ನಾಮನಿರ್ದೇಶನ ಮಾಡಿದ ನಾಲ್ಕು ಸದಸ್ಯರು ಸೇರಿದ್ದಾರೆ. ಅಲ್ಲದೆ, ಉಪಕುಲಪತಿಯಿಂದ ನಾಮನಿರ್ದೇಶನಗೊಂಡ ಪ್ರತಿ ಮಾನ್ಯತೆ ಪಡೆದ ಸಂಸ್ಥೆಗಳ ಪ್ರತಿನಿಧಿಯೂ ಸಹ ಈ ಕೋರ್ಟ್‌ನ ಸದಸ್ಯರಾಗಿ ಉಳಿಯುತ್ತಾರೆ.

ಹೊಸ ನಾಮನಿರ್ದೇಶನಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಪುರುಷೋತ್ತಮ ಬಿಳಿಮಲೆ, ”ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಇದು ನಿರೀಕ್ಷಿತ ನಡೆಯಾಗಿದೆ. ಆದರೆ, ಜೆಎನ್‌ಯುವಿನಲ್ಲಿ ನಡೆಯುತ್ತಿದ್ದ ವಿದ್ವತ್‌ಪೂರ್ಣ ಚರ್ಚೆಗಳು, ಅಕಾಡೆಮಿಕ್ ಚರ್ಚೆಗಳು ಈಗ ನಡೆಯುತ್ತಿಲ್ಲ. ಈಗ ಏನಿದ್ದರೂ, ಗುರುಪೂಜೆ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಲ್ಲಿ ಬೆಲೆ. ಒಂದು ವಿಶ್ವವಿದ್ಯಾನಿಲಯವನ್ನು ಹಾಳುಗೆಡವಲು ಏನು ಮಾಡಬೇಕೊ ಅದನ್ನು ಬಿಜೆಪಿ ಮಾಡುತ್ತಲೆ ಬಂದಿದೆ. ಆದರೆ, ಭಾರತೀಯ ಇತಿಹಾಸದಲ್ಲಿ ಇದು ಒಂದು ಹಂತ ಅಷ್ಟೆ. ಆದರೆ, ಇದು ಹೀಗೆಯೆ ಇರುವುದಿಲ್ಲ, ಮುಂದೊಂದು ದಿನ ಇವೆಲ್ಲಾ ಇಲ್ಲವಾಗಿ ಎಲ್ಲವೂ ಸರಿಯಾಗುತ್ತದೆ ಎಂಬ ಆಶಾವಾದವಿದೆ” ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...