Homeಮುಖಪುಟಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

ಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

- Advertisement -
- Advertisement -

ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೋರ್ಟ್‌ಗೆ ರಾಜ್ಯಸಭೆಯಿಂದ ಡಾ.ಕೆ. ಲಕ್ಷ್ಮಣ್, ಡಾ. ಸುಮರ್ ಸಿಂಗ್ ಸೋಲಂಕಿ ಮತ್ತು ಡಾ. ಅನಿಲ್ ಸುಖದೇರಾವ್ ಬೋಂಡೆ ಸೇರಿದಂತೆ ಮೂವರು ಬಿಜೆಪಿ ಸಂಸದರನ್ನು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ಜೆಎನ್‌ಯು ಕೋರ್ಟ್‌ ವಿಶ್ವವಿದ್ಯಾನಿಲಯದ ಸರ್ವೋಚ್ಚ ಪ್ರಾಧಿಕಾರವಾಗಿದ್ದು, ಅದು ಕಾರ್ಯಕಾರಿ ಮಂಡಳಿ ಮತ್ತು ಅಕಾಡೆಮಿಕ್ ಕೌನ್ಸಿಲ್‌ನ ಕ್ರಮಗಳನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದೆ. ವಾರ್ಷಿಕವಾಗಿ ಸಭೆ ಸೇರುವ ಈ ಕೋರ್ಟ್ ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ, ಲೆಕ್ಕಪತ್ರಗಳು, ಆಡಿಟ್ ವರದಿ ಮತ್ತು ಬಜೆಟ್ ಅನ್ನು ಪರಿಗಣಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಲಕ್ಷ್ಮಣ್ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಲ್ಲಿ ಒಬ್ಬರು. ಅಷ್ಟೆ ಅಲ್ಲದೆ, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಮುಂಬರುವ ಸಾಂಸ್ಥಿಕ ಚುನಾವಣೆಯ ರಾಷ್ಟ್ರೀಯ ಚುನಾವಣಾಧಿಕಾರಿಯಾಗಿ ಲಕ್ಷ್ಮಣ್ ಅವರನ್ನು ನೇಮಿಸಲಾಗಿದೆ.

ಡಾ. ಸುಮೇರ್ ಸಿಂಗ್ ಸೋಲಂಕಿ ಅವರು ಮಧ್ಯಪ್ರದೇಶದ ಸಂಸದರಾಗಿದ್ದು, ಅವರು ಈ ಹಿಂದೆ ಬರ್ವಾನಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ (ಇತಿಹಾಸ) ಕೆಲಸ ಮಾಡಿದ್ದರು. ಅವರು ಆರೆಸ್ಸೆಸ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಕೂಡಾ ಹೇಳಲಾಗುತ್ತದೆ.

ಮಹಾರಾಷ್ಟ್ರದವರಾಗಿರುವ ಡಾ. ಅನಿಲ್ ಸುಖದೇವರಾವ್ ಬೋಂಡೆ ಅವರು ವೈದ್ಯಕೀಯ ವೃತ್ತಿಪರರಾಗಿದ್ದು, ಪ್ರಸ್ತುತ ರಾಜಕೀಯಕ್ಕೆ ಇಳಿದಿದ್ದಾರೆ. ಸಂಸತ್ತಿನ ಕಳೆದ ಅಧಿವೇಶನದಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ದೂರವಿಡುವಂತೆ ಅವರು ಧ್ವನಿ ಎತ್ತಿದ್ದರು.

ಜೆಎನ್‌ಯು ಕೋರ್ಟ್‌ ಸಭೆಯು ಅದರ ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತದೆ. ಜೆಎನ್‌ಯು ಕೋರ್ಟ್‌ ಕಾರ್ಯಕಾರಿ ಮಂಡಳಿಯ ಸದಸ್ಯರು, ರೆಕ್ಟರ್, ವಿದ್ಯಾರ್ಥಿಗಳ ಡೀನ್‌ಗಳು, ಮುಖ್ಯ ರಕ್ಷಕ ಹಣಕಾಸು ಅಧಿಕಾರಿ, ವಿಶ್ವವಿದ್ಯಾಲಯದ ಗ್ರಂಥಪಾಲಕರು, ಹಿರಿಯ ವಾರ್ಡನ್‌ಗಳು ಮತ್ತು ಸಂಸತ್ತಿನ ಹತ್ತು ಪ್ರತಿನಿಧಿಗಳನ್ನು ಒಳಗೊಂಡಿದೆ.

ಸಂಸತ್ತಿನ ಪ್ರತಿನಿಧಿಗಳಲ್ಲಿ ಲೋಕಸಭೆಯ ಸ್ಪೀಕರ್ ನಾಮನಿರ್ದೇಶನ ಮಾಡಿದ ಆರು ಸದಸ್ಯರು ಮತ್ತು ರಾಜ್ಯಸಭೆಯ ಸ್ಪೀಕರ್‌ ನಾಮನಿರ್ದೇಶನ ಮಾಡಿದ ನಾಲ್ಕು ಸದಸ್ಯರು ಸೇರಿದ್ದಾರೆ. ಅಲ್ಲದೆ, ಉಪಕುಲಪತಿಯಿಂದ ನಾಮನಿರ್ದೇಶನಗೊಂಡ ಪ್ರತಿ ಮಾನ್ಯತೆ ಪಡೆದ ಸಂಸ್ಥೆಗಳ ಪ್ರತಿನಿಧಿಯೂ ಸಹ ಈ ಕೋರ್ಟ್‌ನ ಸದಸ್ಯರಾಗಿ ಉಳಿಯುತ್ತಾರೆ.

ಹೊಸ ನಾಮನಿರ್ದೇಶನಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಪುರುಷೋತ್ತಮ ಬಿಳಿಮಲೆ, ”ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಇದು ನಿರೀಕ್ಷಿತ ನಡೆಯಾಗಿದೆ. ಆದರೆ, ಜೆಎನ್‌ಯುವಿನಲ್ಲಿ ನಡೆಯುತ್ತಿದ್ದ ವಿದ್ವತ್‌ಪೂರ್ಣ ಚರ್ಚೆಗಳು, ಅಕಾಡೆಮಿಕ್ ಚರ್ಚೆಗಳು ಈಗ ನಡೆಯುತ್ತಿಲ್ಲ. ಈಗ ಏನಿದ್ದರೂ, ಗುರುಪೂಜೆ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಲ್ಲಿ ಬೆಲೆ. ಒಂದು ವಿಶ್ವವಿದ್ಯಾನಿಲಯವನ್ನು ಹಾಳುಗೆಡವಲು ಏನು ಮಾಡಬೇಕೊ ಅದನ್ನು ಬಿಜೆಪಿ ಮಾಡುತ್ತಲೆ ಬಂದಿದೆ. ಆದರೆ, ಭಾರತೀಯ ಇತಿಹಾಸದಲ್ಲಿ ಇದು ಒಂದು ಹಂತ ಅಷ್ಟೆ. ಆದರೆ, ಇದು ಹೀಗೆಯೆ ಇರುವುದಿಲ್ಲ, ಮುಂದೊಂದು ದಿನ ಇವೆಲ್ಲಾ ಇಲ್ಲವಾಗಿ ಎಲ್ಲವೂ ಸರಿಯಾಗುತ್ತದೆ ಎಂಬ ಆಶಾವಾದವಿದೆ” ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...