Homeಮುಖಪುಟಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

ಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

- Advertisement -
- Advertisement -

ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೋರ್ಟ್‌ಗೆ ರಾಜ್ಯಸಭೆಯಿಂದ ಡಾ.ಕೆ. ಲಕ್ಷ್ಮಣ್, ಡಾ. ಸುಮರ್ ಸಿಂಗ್ ಸೋಲಂಕಿ ಮತ್ತು ಡಾ. ಅನಿಲ್ ಸುಖದೇರಾವ್ ಬೋಂಡೆ ಸೇರಿದಂತೆ ಮೂವರು ಬಿಜೆಪಿ ಸಂಸದರನ್ನು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ಜೆಎನ್‌ಯು ಕೋರ್ಟ್‌ ವಿಶ್ವವಿದ್ಯಾನಿಲಯದ ಸರ್ವೋಚ್ಚ ಪ್ರಾಧಿಕಾರವಾಗಿದ್ದು, ಅದು ಕಾರ್ಯಕಾರಿ ಮಂಡಳಿ ಮತ್ತು ಅಕಾಡೆಮಿಕ್ ಕೌನ್ಸಿಲ್‌ನ ಕ್ರಮಗಳನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದೆ. ವಾರ್ಷಿಕವಾಗಿ ಸಭೆ ಸೇರುವ ಈ ಕೋರ್ಟ್ ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ, ಲೆಕ್ಕಪತ್ರಗಳು, ಆಡಿಟ್ ವರದಿ ಮತ್ತು ಬಜೆಟ್ ಅನ್ನು ಪರಿಗಣಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಲಕ್ಷ್ಮಣ್ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಲ್ಲಿ ಒಬ್ಬರು. ಅಷ್ಟೆ ಅಲ್ಲದೆ, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಮುಂಬರುವ ಸಾಂಸ್ಥಿಕ ಚುನಾವಣೆಯ ರಾಷ್ಟ್ರೀಯ ಚುನಾವಣಾಧಿಕಾರಿಯಾಗಿ ಲಕ್ಷ್ಮಣ್ ಅವರನ್ನು ನೇಮಿಸಲಾಗಿದೆ.

ಡಾ. ಸುಮೇರ್ ಸಿಂಗ್ ಸೋಲಂಕಿ ಅವರು ಮಧ್ಯಪ್ರದೇಶದ ಸಂಸದರಾಗಿದ್ದು, ಅವರು ಈ ಹಿಂದೆ ಬರ್ವಾನಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ (ಇತಿಹಾಸ) ಕೆಲಸ ಮಾಡಿದ್ದರು. ಅವರು ಆರೆಸ್ಸೆಸ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಕೂಡಾ ಹೇಳಲಾಗುತ್ತದೆ.

ಮಹಾರಾಷ್ಟ್ರದವರಾಗಿರುವ ಡಾ. ಅನಿಲ್ ಸುಖದೇವರಾವ್ ಬೋಂಡೆ ಅವರು ವೈದ್ಯಕೀಯ ವೃತ್ತಿಪರರಾಗಿದ್ದು, ಪ್ರಸ್ತುತ ರಾಜಕೀಯಕ್ಕೆ ಇಳಿದಿದ್ದಾರೆ. ಸಂಸತ್ತಿನ ಕಳೆದ ಅಧಿವೇಶನದಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ದೂರವಿಡುವಂತೆ ಅವರು ಧ್ವನಿ ಎತ್ತಿದ್ದರು.

ಜೆಎನ್‌ಯು ಕೋರ್ಟ್‌ ಸಭೆಯು ಅದರ ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತದೆ. ಜೆಎನ್‌ಯು ಕೋರ್ಟ್‌ ಕಾರ್ಯಕಾರಿ ಮಂಡಳಿಯ ಸದಸ್ಯರು, ರೆಕ್ಟರ್, ವಿದ್ಯಾರ್ಥಿಗಳ ಡೀನ್‌ಗಳು, ಮುಖ್ಯ ರಕ್ಷಕ ಹಣಕಾಸು ಅಧಿಕಾರಿ, ವಿಶ್ವವಿದ್ಯಾಲಯದ ಗ್ರಂಥಪಾಲಕರು, ಹಿರಿಯ ವಾರ್ಡನ್‌ಗಳು ಮತ್ತು ಸಂಸತ್ತಿನ ಹತ್ತು ಪ್ರತಿನಿಧಿಗಳನ್ನು ಒಳಗೊಂಡಿದೆ.

ಸಂಸತ್ತಿನ ಪ್ರತಿನಿಧಿಗಳಲ್ಲಿ ಲೋಕಸಭೆಯ ಸ್ಪೀಕರ್ ನಾಮನಿರ್ದೇಶನ ಮಾಡಿದ ಆರು ಸದಸ್ಯರು ಮತ್ತು ರಾಜ್ಯಸಭೆಯ ಸ್ಪೀಕರ್‌ ನಾಮನಿರ್ದೇಶನ ಮಾಡಿದ ನಾಲ್ಕು ಸದಸ್ಯರು ಸೇರಿದ್ದಾರೆ. ಅಲ್ಲದೆ, ಉಪಕುಲಪತಿಯಿಂದ ನಾಮನಿರ್ದೇಶನಗೊಂಡ ಪ್ರತಿ ಮಾನ್ಯತೆ ಪಡೆದ ಸಂಸ್ಥೆಗಳ ಪ್ರತಿನಿಧಿಯೂ ಸಹ ಈ ಕೋರ್ಟ್‌ನ ಸದಸ್ಯರಾಗಿ ಉಳಿಯುತ್ತಾರೆ.

ಹೊಸ ನಾಮನಿರ್ದೇಶನಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಪುರುಷೋತ್ತಮ ಬಿಳಿಮಲೆ, ”ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಇದು ನಿರೀಕ್ಷಿತ ನಡೆಯಾಗಿದೆ. ಆದರೆ, ಜೆಎನ್‌ಯುವಿನಲ್ಲಿ ನಡೆಯುತ್ತಿದ್ದ ವಿದ್ವತ್‌ಪೂರ್ಣ ಚರ್ಚೆಗಳು, ಅಕಾಡೆಮಿಕ್ ಚರ್ಚೆಗಳು ಈಗ ನಡೆಯುತ್ತಿಲ್ಲ. ಈಗ ಏನಿದ್ದರೂ, ಗುರುಪೂಜೆ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಲ್ಲಿ ಬೆಲೆ. ಒಂದು ವಿಶ್ವವಿದ್ಯಾನಿಲಯವನ್ನು ಹಾಳುಗೆಡವಲು ಏನು ಮಾಡಬೇಕೊ ಅದನ್ನು ಬಿಜೆಪಿ ಮಾಡುತ್ತಲೆ ಬಂದಿದೆ. ಆದರೆ, ಭಾರತೀಯ ಇತಿಹಾಸದಲ್ಲಿ ಇದು ಒಂದು ಹಂತ ಅಷ್ಟೆ. ಆದರೆ, ಇದು ಹೀಗೆಯೆ ಇರುವುದಿಲ್ಲ, ಮುಂದೊಂದು ದಿನ ಇವೆಲ್ಲಾ ಇಲ್ಲವಾಗಿ ಎಲ್ಲವೂ ಸರಿಯಾಗುತ್ತದೆ ಎಂಬ ಆಶಾವಾದವಿದೆ” ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...