Homeಮುಖಪುಟಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕೆಂದು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿ ಸಂಘದ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಶುಲ್ಕ ಹೆಚ್ಚಳದ ಕಾರಣಕ್ಕಾಗಿ ಮುಂದಿನ ಸೆಮಿಸ್ಟರ್‌ಗೆ ನೋಂದಾಯಿಸದ ವಿದ್ಯಾರ್ಥಿಗಳಿಗೆ ಮುಂದಿನ ಒಂದು ವಾರದೊಳಗೆ ಔಪಚಾರಿಕತೆಯನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸಿದೆ.

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

ಶುಲ್ಕ ಹೆಚ್ಚಳವನ್ನು ಪ್ರಶ್ನಿಸಿರುವ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖಂಡರು ಕಳೆದ ವರ್ಷ ಇದ್ದಷ್ಟೆ ಶುಲ್ಕವನ್ನು ಮುಂದುವರೆಸಬೇಕು, ಹೊಸ ಶುಲ್ಕ ಹೆಚ್ಚಳದ ಆದೇಶವನ್ನು ಕೈಬಿಡಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಅವರು ವಿದ್ಯಾರ್ಥಿಗಳ ಮನವಿಯನ್ನು ಈಗಿನಿಂದಲೇ ತಿರಸ್ಕರಿಸುವಂತೆ ನ್ಯಾಯಾಲಯವನ್ನು ಕೋರಿದರು. ಶೇಕಡಾ 90 ರಷ್ಟು ವಿದ್ಯಾರ್ಥಿಗಳು ಈಗಾಗಲೇ ಹೆಚ್ಚುವರಿ  ಶುಲ್ಕ ಪಾವತಿಸಿದ್ದಾರೆ ಎಂದು ಸೂಚಿಸಿದರು.

ಈ ವಾದವನ್ನು ಒಪ್ಪದ ನ್ಯಾಯಾಧೀಶರು “ನಿಮಗೆ ಆಯ್ಕೆಯೇ ಇಲ್ಲದಿದ್ದರೆ, ನೀವು ಏನು ಮಾಡುತ್ತೀರಿ?” ಎಂದು ಪ್ರಶ್ನಿಸಿದರು. ಆಗ ಕೇಂದ್ರದ ಹಿರಿಯ ಕಾನೂನು ಅಧಿಕಾರಿ, ವಿಶ್ವವಿದ್ಯಾನಿಲಯವು ನೇಮಕ ಮಾಡಿಕೊಂಡ ಗುತ್ತಿಗೆ ಕಾರ್ಮಿಕರಿಗೆ ಸಂಬಳ ನೀಡಲು ಶುಲ್ಕವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಆ ವಾದವನ್ನು ನ್ಯಾಯಮೂರ್ತಿ ಶಕ್ದೇರ್‌ ಪ್ರತಿರೋಧಿಸಿದರು.

“ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕು. ಗುತ್ತಿಗೆ ಕಾರ್ಮಿಕರ ವೇತನವನ್ನು ಪಾವತಿಸುವ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹಾಕುವುದು ಸಮರ್ಥನೀಯವಲ್ಲ. ಅದಕ್ಕಾಗಿ ಬೇರೆ ಮೂಲವನ್ನು ಹುಡುಕಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಸೂಚಿಸಿದ್ದಾರೆ. ನಂತರ ಮುಂದಿನ ವಿಚಾರಣೆಯನ್ನು ಫೆಬ್ರವರಿ 28 ಕ್ಕೆ ಮುಂದೂಡಿದರು.

ಜೆಎನ್‌ಯುಎಸ್‌ಯು ಪದಾಧಿಕಾರಿಗಳು ಸಲ್ಲಿಸಿದ ಅರ್ಜಿಯಲ್ಲಿ ಹಾಸ್ಟೆಲ್ ಕೈಪಿಡಿ ಮತ್ತು ಶುಲ್ಕಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸುವಂತೆ ಕೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ದೊರಕಿರುವುದು ಸಂತೋಷದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...