Homeಮುಖಪುಟಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕೆಂದು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿ ಸಂಘದ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಶುಲ್ಕ ಹೆಚ್ಚಳದ ಕಾರಣಕ್ಕಾಗಿ ಮುಂದಿನ ಸೆಮಿಸ್ಟರ್‌ಗೆ ನೋಂದಾಯಿಸದ ವಿದ್ಯಾರ್ಥಿಗಳಿಗೆ ಮುಂದಿನ ಒಂದು ವಾರದೊಳಗೆ ಔಪಚಾರಿಕತೆಯನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸಿದೆ.

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

ಶುಲ್ಕ ಹೆಚ್ಚಳವನ್ನು ಪ್ರಶ್ನಿಸಿರುವ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖಂಡರು ಕಳೆದ ವರ್ಷ ಇದ್ದಷ್ಟೆ ಶುಲ್ಕವನ್ನು ಮುಂದುವರೆಸಬೇಕು, ಹೊಸ ಶುಲ್ಕ ಹೆಚ್ಚಳದ ಆದೇಶವನ್ನು ಕೈಬಿಡಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಅವರು ವಿದ್ಯಾರ್ಥಿಗಳ ಮನವಿಯನ್ನು ಈಗಿನಿಂದಲೇ ತಿರಸ್ಕರಿಸುವಂತೆ ನ್ಯಾಯಾಲಯವನ್ನು ಕೋರಿದರು. ಶೇಕಡಾ 90 ರಷ್ಟು ವಿದ್ಯಾರ್ಥಿಗಳು ಈಗಾಗಲೇ ಹೆಚ್ಚುವರಿ  ಶುಲ್ಕ ಪಾವತಿಸಿದ್ದಾರೆ ಎಂದು ಸೂಚಿಸಿದರು.

ಈ ವಾದವನ್ನು ಒಪ್ಪದ ನ್ಯಾಯಾಧೀಶರು “ನಿಮಗೆ ಆಯ್ಕೆಯೇ ಇಲ್ಲದಿದ್ದರೆ, ನೀವು ಏನು ಮಾಡುತ್ತೀರಿ?” ಎಂದು ಪ್ರಶ್ನಿಸಿದರು. ಆಗ ಕೇಂದ್ರದ ಹಿರಿಯ ಕಾನೂನು ಅಧಿಕಾರಿ, ವಿಶ್ವವಿದ್ಯಾನಿಲಯವು ನೇಮಕ ಮಾಡಿಕೊಂಡ ಗುತ್ತಿಗೆ ಕಾರ್ಮಿಕರಿಗೆ ಸಂಬಳ ನೀಡಲು ಶುಲ್ಕವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಆ ವಾದವನ್ನು ನ್ಯಾಯಮೂರ್ತಿ ಶಕ್ದೇರ್‌ ಪ್ರತಿರೋಧಿಸಿದರು.

“ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕು. ಗುತ್ತಿಗೆ ಕಾರ್ಮಿಕರ ವೇತನವನ್ನು ಪಾವತಿಸುವ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹಾಕುವುದು ಸಮರ್ಥನೀಯವಲ್ಲ. ಅದಕ್ಕಾಗಿ ಬೇರೆ ಮೂಲವನ್ನು ಹುಡುಕಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಸೂಚಿಸಿದ್ದಾರೆ. ನಂತರ ಮುಂದಿನ ವಿಚಾರಣೆಯನ್ನು ಫೆಬ್ರವರಿ 28 ಕ್ಕೆ ಮುಂದೂಡಿದರು.

ಜೆಎನ್‌ಯುಎಸ್‌ಯು ಪದಾಧಿಕಾರಿಗಳು ಸಲ್ಲಿಸಿದ ಅರ್ಜಿಯಲ್ಲಿ ಹಾಸ್ಟೆಲ್ ಕೈಪಿಡಿ ಮತ್ತು ಶುಲ್ಕಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸುವಂತೆ ಕೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ದೊರಕಿರುವುದು ಸಂತೋಷದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...