Homeಮುಖಪುಟಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕೆಂದು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿ ಸಂಘದ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಶುಲ್ಕ ಹೆಚ್ಚಳದ ಕಾರಣಕ್ಕಾಗಿ ಮುಂದಿನ ಸೆಮಿಸ್ಟರ್‌ಗೆ ನೋಂದಾಯಿಸದ ವಿದ್ಯಾರ್ಥಿಗಳಿಗೆ ಮುಂದಿನ ಒಂದು ವಾರದೊಳಗೆ ಔಪಚಾರಿಕತೆಯನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸಿದೆ.

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

ಶುಲ್ಕ ಹೆಚ್ಚಳವನ್ನು ಪ್ರಶ್ನಿಸಿರುವ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖಂಡರು ಕಳೆದ ವರ್ಷ ಇದ್ದಷ್ಟೆ ಶುಲ್ಕವನ್ನು ಮುಂದುವರೆಸಬೇಕು, ಹೊಸ ಶುಲ್ಕ ಹೆಚ್ಚಳದ ಆದೇಶವನ್ನು ಕೈಬಿಡಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಅವರು ವಿದ್ಯಾರ್ಥಿಗಳ ಮನವಿಯನ್ನು ಈಗಿನಿಂದಲೇ ತಿರಸ್ಕರಿಸುವಂತೆ ನ್ಯಾಯಾಲಯವನ್ನು ಕೋರಿದರು. ಶೇಕಡಾ 90 ರಷ್ಟು ವಿದ್ಯಾರ್ಥಿಗಳು ಈಗಾಗಲೇ ಹೆಚ್ಚುವರಿ  ಶುಲ್ಕ ಪಾವತಿಸಿದ್ದಾರೆ ಎಂದು ಸೂಚಿಸಿದರು.

ಈ ವಾದವನ್ನು ಒಪ್ಪದ ನ್ಯಾಯಾಧೀಶರು “ನಿಮಗೆ ಆಯ್ಕೆಯೇ ಇಲ್ಲದಿದ್ದರೆ, ನೀವು ಏನು ಮಾಡುತ್ತೀರಿ?” ಎಂದು ಪ್ರಶ್ನಿಸಿದರು. ಆಗ ಕೇಂದ್ರದ ಹಿರಿಯ ಕಾನೂನು ಅಧಿಕಾರಿ, ವಿಶ್ವವಿದ್ಯಾನಿಲಯವು ನೇಮಕ ಮಾಡಿಕೊಂಡ ಗುತ್ತಿಗೆ ಕಾರ್ಮಿಕರಿಗೆ ಸಂಬಳ ನೀಡಲು ಶುಲ್ಕವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಆ ವಾದವನ್ನು ನ್ಯಾಯಮೂರ್ತಿ ಶಕ್ದೇರ್‌ ಪ್ರತಿರೋಧಿಸಿದರು.

“ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕು. ಗುತ್ತಿಗೆ ಕಾರ್ಮಿಕರ ವೇತನವನ್ನು ಪಾವತಿಸುವ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹಾಕುವುದು ಸಮರ್ಥನೀಯವಲ್ಲ. ಅದಕ್ಕಾಗಿ ಬೇರೆ ಮೂಲವನ್ನು ಹುಡುಕಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಸೂಚಿಸಿದ್ದಾರೆ. ನಂತರ ಮುಂದಿನ ವಿಚಾರಣೆಯನ್ನು ಫೆಬ್ರವರಿ 28 ಕ್ಕೆ ಮುಂದೂಡಿದರು.

ಜೆಎನ್‌ಯುಎಸ್‌ಯು ಪದಾಧಿಕಾರಿಗಳು ಸಲ್ಲಿಸಿದ ಅರ್ಜಿಯಲ್ಲಿ ಹಾಸ್ಟೆಲ್ ಕೈಪಿಡಿ ಮತ್ತು ಶುಲ್ಕಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸುವಂತೆ ಕೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ದೊರಕಿರುವುದು ಸಂತೋಷದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....