HomeUncategorizedಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ - ಸರೋವರ್‌ ಬೆಂಕಿಕೆರೆ

ಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ – ಸರೋವರ್‌ ಬೆಂಕಿಕೆರೆ

ಪ್ರತಿ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ..

- Advertisement -
- Advertisement -

ಬ್ರಾಹ್ಮಣ ಸಮುದಾಯಕ್ಕೆ ಹೊರತುಪಡಿಸಿ ಇತರೆ ಸಮುದಾಯಗಳಿಗೆ ಬಹುತೇಕ ನಾಗರಿಕ ಹಕ್ಕುಗಳು ಸಹಸ್ರಾರು ವರ್ಷಗಳ ಕಾಲ ನಿರಾಕರಣೆ ಆಗಿದ್ದ ದೇಶದಲ್ಲಿ ಅದರಲ್ಲೂ ಶಿಕ್ಷಣದ ಹತ್ತಿರಕ್ಕೂ ಬಿಟ್ಟುಕೊಳ್ಳದೇ ಜಾತಿ ಪದ್ಧತಿಯನ್ನು ಆಳವಾಗಿ ಬೇರುಬಿಟ್ಟುಕೊಂಡಿರುವ ದೇಶವೊಂದರಲ್ಲಿ ಜೆಎನ್‌ಯು ಅಂಥ ವಿಶ್ವವಿದ್ಯಾಲಯವು ವಿಶೇಷವಾಗಿ ನಿಲ್ಲುತ್ತದೆ. ಸ್ವಾತಂತ್ರ್ಯ ದ 70 ವರ್ಷಗಳ ನಂತರವೂ ಸಾಕ್ಷರತೆಯನ್ನೂ ಗುಣಾತ್ಮಕವಾಗಿ ಸಾಧಿಸಲೂ ಈವರೆಗೂ ಸಾಧ್ಯವಿಲ್ಲದಿರುವಾಗ ದಲಿತರು, ಅಲ್ಪ ಸಂಖ್ಯಾತರು, ಆದಿವಾಸಿ, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಸಮುದಾಯವದರು ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಸಾಧ್ಯ ಮಾಡಿದ್ದು ಜೆಎನ್‌ಯು ಆಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರಾತಿನಿಧ್ಯವೂ ಇದೆ. ಅಲ್ಲದೆ ಇಲ್ಲಿ ಶಿಕ್ಷಣ ಪಡೆದ ಅನೇಕ ತಳಸಮುದಾಯದ ಯುವತಿಯುವಕರು ಹೊರದೇಶಗಳಲ್ಲಿ, ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರುಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆಳುವ ಮನುವಾದಿ ಸರ್ಕಾರಗಳಿಗೆ ಹಾಗೂ ಮೇಲ್ವರ್ಗದ ಜನರಿಗೆ ಜೆಎನ್‌ಯು ಎಂದರೆ ‘ಸಹಜವಾಗಿ’ ಅಸಹನೆ ಇದ್ದೇಯಿದೆ!

ಜೆಎನ್ಯು ಮೇಲೆ ಸರ್ಕಾರಕ್ಕೆ ದ್ವೇಷ ಯಾಕೆ?

ಹೈದರಾಬಾದ್‌ನ ಹೆಚ್‌ಸಿಯುನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯ ನಂತರದಲ್ಲಿ ದೇಶದಾದ್ಯಂತ ನಡೆದ ವಿದ್ಯಾರ್ಥಿ ಯುವಜನರ ಹೋರಾಟದಲ್ಲಿ ಜೆಎನ್‌ಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಗಮನ ಸೆಳೆಯುವಂತೆ ಎತ್ತಿಹಿಡಿದಿತ್ತು. ಇತ್ತೀಚೆಗಷ್ಟೆ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ‘ಒಂದಿಂಚೂ ಹಿಂದೆ ಸರಿಯುವುದಿಲ್ಲ’ ಎನ್ನುವ ಘೋಷಣೆಯೊಂದಿಗೆ ಧೀರೋದ್ಧಾತ ಪ್ರತಿಭಟನೆಗಳನ್ನು ನಡೆಸಿದ್ದರು. ಇದನ್ನು ಕೇಂದ್ರ ನಿರೀಕ್ಷೆ ಮಾಡಿರಲಿಲ್ಲ.

ಇನ್ನು ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರಕ್ಕೆ ದಂಗು ಬಡಿದಂತಾಗಿತ್ತು. ತಮ್ಮ ಬಹುಮತದಿಂದ ಏನು ಬೇಕಾದರೂ ಮಾಡಬಹುದು ಎಂದು ಅಂದುಕೊಂಡಿದ್ದ ಬಿಜೆಪಿಗೆ ದೇಶದ ವಿದ್ಯಾರ್ಥಿ ಯುವಜನರು ದೊಡ್ಡ ಶಾಕ್ ನೀಡಿದ್ದರು. ಅದರಲ್ಲೂ ಜೆಎನ್‌ಯು ವಿದ್ಯಾರ್ಥಿಗಳು ಬಹುಮುಖ್ಯ ಪಾತ್ರವನ್ನು ವಹಿಸಿದ್ದರು. ಅಲ್ಲದೆ ನಿರಂತರವಾಗಿ ಬರುತ್ತಿದ್ದ ಜನವಿರೋಧಿ ನೀತಿಗಳು, ಆರ್ಥಿಕ ಕುಸಿತ, ನಿರುದ್ಯೋಗ ಏರಿಕೆ ಇತ್ಯಾದಿ ಸೇರಿ ಹತ್ತಾರು ಜನರ ನಿಜವಾದ ವಿಚಾರಗಳು ಮುನ್ನಲೆಗೆ ಬರುವಂತೆ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ಜೆಎನ್‌ಯು ವಿದ್ಯಾರ್ಥಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಉತ್ತರ ಕೊಡಲಾಗದ ಪ್ರಶ್ನೆಗಳನ್ನು ಎತ್ತಿದ್ದಾರೆ. ತಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣದ ಜ್ಞಾನ ಪಡೆದಾಗ ಜನಪರವಾದ ಪ್ರಶ್ನೆಗಳು ಕೇಳುವುದು ಸಾಮಾನ್ಯವಾಗಿ ಬರುವ ಗುಣವಾಗಿದೆ. ಮೇಲಿನ ಈ ಎಲ್ಲಾ ಕಾರಣಗಳಿಗಾಗಿ ತಮ್ಮ ವೈಫಲ್ಯವನ್ನು ಸರಿಮಾಡಿಕೊಳ್ಳುವ ಬದಲಾಗಿ ಸರ್ಕಾರವು ದ್ವೇಷವನ್ನು ಬೆಳೆಸಿಕೊಂಡಿದೆ.

ಜೆಎನ್‌ಯು ಕೇವಲ ಎಡಪಕ್ಷದ ಪರವಿರುವ ವಿದ್ಯಾರ್ಥಿಗಳು, ಕೇವಲ ಬಿಜೆಪಿ ವಿರುದ್ಧ ಕೆಲಸ ಮಾಡುವವರು ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಆಳ್ವಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನಂದಿಗ್ರಾಮ ಇತ್ಯಾದಿ ಜಾಗದಲ್ಲಿ ನಡೆದ ಹಿಂಸೆಯ ವಿರುದ್ಧವೂ ಜೆಎನ್‌ಯು ದನಿ ಎತ್ತಿತ್ತು. 1996ರಲ್ಲಿ ಜನಪರವಾದ ಪಕ್ಷದ ಪರ ಬಿಹಾರದಲ್ಲಿ ಪ್ರಚಾರ ಮಾಡಿದ್ದರು ಅನ್ನುವ ಕಾರಣಕ್ಕೆ ಜೆಎನ್‌ಯು ವಿದ್ಯಾರ್ಥಿ ಮುಖಂಡರನ್ನು ಕೊಲೆ ಮಾಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಅವಧಿಯ ನಿರ್ಭಯ ಅತ್ಯಾಚಾರ ಸಂದರ್ಭದಲ್ಲಿ ನಿರಂತರವಾಗಿ ವಿದ್ಯಾರ್ಥಿ ಹೋರಾಟದ ಕಾವನ್ನು ಕಾಪಿಟ್ಟುಕೊಂಡಿದ್ದು ಜೆಎನ್‌ಯು. ಕಾಶ್ಮೀರದ 370 ರದ್ಧತಿ ಸಂದರ್ಭದಲ್ಲಿ, ಹೊಸ ಶಿಕ್ಷಣ ನೀತಿ ಕರಡು ಬಂದ ಸಮಯದಲ್ಲಿ ಮತ್ತು ಹಲವಾರು ಇತರ ಜನವಿರೋಧಿ ನೀತಿಗಳು ಬಂದಾಗ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿರೋಧಗಳು ಬರದೇ ಇದ್ದಾಗ ಜೆಎನ್‌ಯು ಮಾತ್ರ ಪ್ರತಿರೋಧವನ್ನು ಒಡ್ಡುತ್ತಲಿತ್ತು. ಹೀಗೆ ಬಹು ಕಾಲದಿಂದ ಜನಪರವಾಗಿ ವಿದ್ಯಾರ್ಥಿ ಹೋರಾಟದ ಬದ್ಧತೆಯನ್ನು ಜೆಎನ್‌ಯು ಕಾಪಾಡಿಕೊಂಡಿದೆ. ಈ ಬದ್ಧತೆಯನ್ನು ಮುರಿಯುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬರುತ್ತಿವೆ. ಆದರೆ ಈ ಕಾಲದ ಕೇಂದ್ರ ಸರ್ಕಾರ ಕ್ರೂರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತಿದೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ದಾಳಿ ಏಕಾಯಿತು?

ಸಿಎಎ, ಎನ್‌ಆರ್‌ಸಿ ವಿರುದ್ಧದ ದೇಶದಾದ್ಯಂತ ಬಂದ ಪ್ರತಿರೋಧವನ್ನು ಕೇಂದ್ರ ಸುಧಾರಿಸಿಕೊಳ್ಳದಾಯಿತು. ಅದರಲ್ಲೂ ವಿದ್ಯಾರ್ಥಿ ಯುವಜನರ ಪಾತ್ರ ಅವರಿಗೆ ದಿಗಿಲು ಬಡಿಸಿತ್ತು. ಈ ಹೊತ್ತಿಗಾಗಲೇ ದೇಶದ್ರೋಹದಂತಹ ನೂರಾರು ಸುಳ್ಳು ಕೇಸು, ಜೈಲು ಎಲ್ಲವನ್ನೂ ನೋಡಿ ಬಂದಂತಹ ಜೆಎನ್‌ಯು ವಿದ್ಯಾರ್ಥಿಗಳನ್ನು ಯಾವುದರಿಂದಲೂ ಹೆದರಿಸಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿತ್ತಾದರೂ ಎಬಿವಿಪಿ ಗೂಂಡಾಗಳನ್ನು ಬಳಸಿಕೊಂಡು, ವಿಸಿ ಹಾಗೂ ಪೊಲೀಸರ ಸಹಾಯದಿಂದಲೂ ದಾಳಿ ನಡೆಸಿದೆ.

ಜೆಎನ್‌ಯು ವಿದ್ಯಾರ್ಥಿ ಹಾಗೂ ಪ್ರೊಫೆಸರ್‌ಗಳು ಹೇಳುವಂತೆ ಮೌಖಿಕವಾಗಿ ಪೋಲಿಸರಿಗೆ ಎರಡು ಗಂಟೆಗಳ ಕಾಲ ಸುಮ್ಮನಿದ್ದು ದಾಳಿಕೋರರಿಗೆ ಅವಕಾಶ ನೀಡಬೇಕು ಎನ್ನುವ ಆದೇಶವಿತ್ತು ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ವಿಡಿಯೋಗಳು, ವಾಟ್ಸಾಪ್ ಗ್ರೂಪಿನ ಸಂದೇಶದ ಸ್ಕ್ರೀನ್ ಶಾಟ್‌ಗಳು ಈಗ ಬಹಿರಂಗವಾಗಿವೆ. ಶುಲ್ಕ ಹೆಚ್ಚಳದಿಂದ ಶುರುವಾಗಿ ಸಿಎಎ ವಿರುದ್ಧದ ಪ್ರತಿರೋಧದವರೆಗೂ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಶಾಂತಿಯುತವಾಗಿ ನಡೆಯುತ್ತಿರುವುದು ಕೇಂದ್ರಕ್ಕೆ ಮತ್ತೊಂದು ನುಂಗಲಾರದ ತುತ್ತಾಗಿದೆ. ಇದರ ಮಹತ್ವ ಕುಗ್ಗಿಸಲು ಶಾಂತಿ ಕದಡಲು ವಿದ್ಯಾರ್ಥಿಗಳ ಮಧ್ಯ ಗಲಾಟೆ ನಡೆಯುತ್ತಿದೆ ಎಂದು ಬಿಂಬಿಸಲು ಈ ಪೂರ್ವನಿಯೋಜಿತ ದಾಳಿ ನಡೆಸಿದ್ದಾರೆ. ಈ ದಾಳಿಯ ನಂತರ ‘ಶಟ್‌ಡೌನ್ ಜೆಎನ್‌ಯು’ ಎಂದು ಟ್ರೆಂಡ್ ಮಾಡುತ್ತಿರುವುದೇ ಇವರ ಉದ್ದೇಶ ತಿಳಿಯುತ್ತಿದೆ. ಇದರಿಂದಾಗಿ ಒಂದು ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನದಲ್ಲಿ ಕೇಂದ್ರ ಇದ್ದಂತಿದೆ. ಒಂದು ನಿರಂತರವಾಗಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಮತ್ತೊಂದು ತಳ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು.

ಇದೆಲ್ಲದರ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ. ಪ್ರಜಾತಂತ್ರವನ್ನು ಕಾಪಾಡಲು ದೇಶದಾದ್ಯಂತ ವಿದ್ಯಾರ್ಥಿಯುವಜನರು ಹೋರಾಟದ ಸಾಗರಕ್ಕೆ ಸೇರುತ್ತಿರುವುದು ಆಶಾದಾಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೌಂದರ್ಯವಲ್ಲ; ಪ್ರಜಾಪ್ರಭುತ್ವದ ಜೀವ ಮತ್ತು ಆತ್ಮದ ಮೇಲಿನ ದಾಳಿ!

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...