HomeUncategorizedಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ - ಸರೋವರ್‌ ಬೆಂಕಿಕೆರೆ

ಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ – ಸರೋವರ್‌ ಬೆಂಕಿಕೆರೆ

ಪ್ರತಿ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ..

- Advertisement -
- Advertisement -

ಬ್ರಾಹ್ಮಣ ಸಮುದಾಯಕ್ಕೆ ಹೊರತುಪಡಿಸಿ ಇತರೆ ಸಮುದಾಯಗಳಿಗೆ ಬಹುತೇಕ ನಾಗರಿಕ ಹಕ್ಕುಗಳು ಸಹಸ್ರಾರು ವರ್ಷಗಳ ಕಾಲ ನಿರಾಕರಣೆ ಆಗಿದ್ದ ದೇಶದಲ್ಲಿ ಅದರಲ್ಲೂ ಶಿಕ್ಷಣದ ಹತ್ತಿರಕ್ಕೂ ಬಿಟ್ಟುಕೊಳ್ಳದೇ ಜಾತಿ ಪದ್ಧತಿಯನ್ನು ಆಳವಾಗಿ ಬೇರುಬಿಟ್ಟುಕೊಂಡಿರುವ ದೇಶವೊಂದರಲ್ಲಿ ಜೆಎನ್‌ಯು ಅಂಥ ವಿಶ್ವವಿದ್ಯಾಲಯವು ವಿಶೇಷವಾಗಿ ನಿಲ್ಲುತ್ತದೆ. ಸ್ವಾತಂತ್ರ್ಯ ದ 70 ವರ್ಷಗಳ ನಂತರವೂ ಸಾಕ್ಷರತೆಯನ್ನೂ ಗುಣಾತ್ಮಕವಾಗಿ ಸಾಧಿಸಲೂ ಈವರೆಗೂ ಸಾಧ್ಯವಿಲ್ಲದಿರುವಾಗ ದಲಿತರು, ಅಲ್ಪ ಸಂಖ್ಯಾತರು, ಆದಿವಾಸಿ, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಸಮುದಾಯವದರು ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಸಾಧ್ಯ ಮಾಡಿದ್ದು ಜೆಎನ್‌ಯು ಆಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರಾತಿನಿಧ್ಯವೂ ಇದೆ. ಅಲ್ಲದೆ ಇಲ್ಲಿ ಶಿಕ್ಷಣ ಪಡೆದ ಅನೇಕ ತಳಸಮುದಾಯದ ಯುವತಿಯುವಕರು ಹೊರದೇಶಗಳಲ್ಲಿ, ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರುಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆಳುವ ಮನುವಾದಿ ಸರ್ಕಾರಗಳಿಗೆ ಹಾಗೂ ಮೇಲ್ವರ್ಗದ ಜನರಿಗೆ ಜೆಎನ್‌ಯು ಎಂದರೆ ‘ಸಹಜವಾಗಿ’ ಅಸಹನೆ ಇದ್ದೇಯಿದೆ!

ಜೆಎನ್ಯು ಮೇಲೆ ಸರ್ಕಾರಕ್ಕೆ ದ್ವೇಷ ಯಾಕೆ?

ಹೈದರಾಬಾದ್‌ನ ಹೆಚ್‌ಸಿಯುನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯ ನಂತರದಲ್ಲಿ ದೇಶದಾದ್ಯಂತ ನಡೆದ ವಿದ್ಯಾರ್ಥಿ ಯುವಜನರ ಹೋರಾಟದಲ್ಲಿ ಜೆಎನ್‌ಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಗಮನ ಸೆಳೆಯುವಂತೆ ಎತ್ತಿಹಿಡಿದಿತ್ತು. ಇತ್ತೀಚೆಗಷ್ಟೆ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ‘ಒಂದಿಂಚೂ ಹಿಂದೆ ಸರಿಯುವುದಿಲ್ಲ’ ಎನ್ನುವ ಘೋಷಣೆಯೊಂದಿಗೆ ಧೀರೋದ್ಧಾತ ಪ್ರತಿಭಟನೆಗಳನ್ನು ನಡೆಸಿದ್ದರು. ಇದನ್ನು ಕೇಂದ್ರ ನಿರೀಕ್ಷೆ ಮಾಡಿರಲಿಲ್ಲ.

ಇನ್ನು ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರಕ್ಕೆ ದಂಗು ಬಡಿದಂತಾಗಿತ್ತು. ತಮ್ಮ ಬಹುಮತದಿಂದ ಏನು ಬೇಕಾದರೂ ಮಾಡಬಹುದು ಎಂದು ಅಂದುಕೊಂಡಿದ್ದ ಬಿಜೆಪಿಗೆ ದೇಶದ ವಿದ್ಯಾರ್ಥಿ ಯುವಜನರು ದೊಡ್ಡ ಶಾಕ್ ನೀಡಿದ್ದರು. ಅದರಲ್ಲೂ ಜೆಎನ್‌ಯು ವಿದ್ಯಾರ್ಥಿಗಳು ಬಹುಮುಖ್ಯ ಪಾತ್ರವನ್ನು ವಹಿಸಿದ್ದರು. ಅಲ್ಲದೆ ನಿರಂತರವಾಗಿ ಬರುತ್ತಿದ್ದ ಜನವಿರೋಧಿ ನೀತಿಗಳು, ಆರ್ಥಿಕ ಕುಸಿತ, ನಿರುದ್ಯೋಗ ಏರಿಕೆ ಇತ್ಯಾದಿ ಸೇರಿ ಹತ್ತಾರು ಜನರ ನಿಜವಾದ ವಿಚಾರಗಳು ಮುನ್ನಲೆಗೆ ಬರುವಂತೆ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ಜೆಎನ್‌ಯು ವಿದ್ಯಾರ್ಥಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಉತ್ತರ ಕೊಡಲಾಗದ ಪ್ರಶ್ನೆಗಳನ್ನು ಎತ್ತಿದ್ದಾರೆ. ತಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣದ ಜ್ಞಾನ ಪಡೆದಾಗ ಜನಪರವಾದ ಪ್ರಶ್ನೆಗಳು ಕೇಳುವುದು ಸಾಮಾನ್ಯವಾಗಿ ಬರುವ ಗುಣವಾಗಿದೆ. ಮೇಲಿನ ಈ ಎಲ್ಲಾ ಕಾರಣಗಳಿಗಾಗಿ ತಮ್ಮ ವೈಫಲ್ಯವನ್ನು ಸರಿಮಾಡಿಕೊಳ್ಳುವ ಬದಲಾಗಿ ಸರ್ಕಾರವು ದ್ವೇಷವನ್ನು ಬೆಳೆಸಿಕೊಂಡಿದೆ.

ಜೆಎನ್‌ಯು ಕೇವಲ ಎಡಪಕ್ಷದ ಪರವಿರುವ ವಿದ್ಯಾರ್ಥಿಗಳು, ಕೇವಲ ಬಿಜೆಪಿ ವಿರುದ್ಧ ಕೆಲಸ ಮಾಡುವವರು ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಆಳ್ವಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನಂದಿಗ್ರಾಮ ಇತ್ಯಾದಿ ಜಾಗದಲ್ಲಿ ನಡೆದ ಹಿಂಸೆಯ ವಿರುದ್ಧವೂ ಜೆಎನ್‌ಯು ದನಿ ಎತ್ತಿತ್ತು. 1996ರಲ್ಲಿ ಜನಪರವಾದ ಪಕ್ಷದ ಪರ ಬಿಹಾರದಲ್ಲಿ ಪ್ರಚಾರ ಮಾಡಿದ್ದರು ಅನ್ನುವ ಕಾರಣಕ್ಕೆ ಜೆಎನ್‌ಯು ವಿದ್ಯಾರ್ಥಿ ಮುಖಂಡರನ್ನು ಕೊಲೆ ಮಾಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಅವಧಿಯ ನಿರ್ಭಯ ಅತ್ಯಾಚಾರ ಸಂದರ್ಭದಲ್ಲಿ ನಿರಂತರವಾಗಿ ವಿದ್ಯಾರ್ಥಿ ಹೋರಾಟದ ಕಾವನ್ನು ಕಾಪಿಟ್ಟುಕೊಂಡಿದ್ದು ಜೆಎನ್‌ಯು. ಕಾಶ್ಮೀರದ 370 ರದ್ಧತಿ ಸಂದರ್ಭದಲ್ಲಿ, ಹೊಸ ಶಿಕ್ಷಣ ನೀತಿ ಕರಡು ಬಂದ ಸಮಯದಲ್ಲಿ ಮತ್ತು ಹಲವಾರು ಇತರ ಜನವಿರೋಧಿ ನೀತಿಗಳು ಬಂದಾಗ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿರೋಧಗಳು ಬರದೇ ಇದ್ದಾಗ ಜೆಎನ್‌ಯು ಮಾತ್ರ ಪ್ರತಿರೋಧವನ್ನು ಒಡ್ಡುತ್ತಲಿತ್ತು. ಹೀಗೆ ಬಹು ಕಾಲದಿಂದ ಜನಪರವಾಗಿ ವಿದ್ಯಾರ್ಥಿ ಹೋರಾಟದ ಬದ್ಧತೆಯನ್ನು ಜೆಎನ್‌ಯು ಕಾಪಾಡಿಕೊಂಡಿದೆ. ಈ ಬದ್ಧತೆಯನ್ನು ಮುರಿಯುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬರುತ್ತಿವೆ. ಆದರೆ ಈ ಕಾಲದ ಕೇಂದ್ರ ಸರ್ಕಾರ ಕ್ರೂರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತಿದೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ದಾಳಿ ಏಕಾಯಿತು?

ಸಿಎಎ, ಎನ್‌ಆರ್‌ಸಿ ವಿರುದ್ಧದ ದೇಶದಾದ್ಯಂತ ಬಂದ ಪ್ರತಿರೋಧವನ್ನು ಕೇಂದ್ರ ಸುಧಾರಿಸಿಕೊಳ್ಳದಾಯಿತು. ಅದರಲ್ಲೂ ವಿದ್ಯಾರ್ಥಿ ಯುವಜನರ ಪಾತ್ರ ಅವರಿಗೆ ದಿಗಿಲು ಬಡಿಸಿತ್ತು. ಈ ಹೊತ್ತಿಗಾಗಲೇ ದೇಶದ್ರೋಹದಂತಹ ನೂರಾರು ಸುಳ್ಳು ಕೇಸು, ಜೈಲು ಎಲ್ಲವನ್ನೂ ನೋಡಿ ಬಂದಂತಹ ಜೆಎನ್‌ಯು ವಿದ್ಯಾರ್ಥಿಗಳನ್ನು ಯಾವುದರಿಂದಲೂ ಹೆದರಿಸಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿತ್ತಾದರೂ ಎಬಿವಿಪಿ ಗೂಂಡಾಗಳನ್ನು ಬಳಸಿಕೊಂಡು, ವಿಸಿ ಹಾಗೂ ಪೊಲೀಸರ ಸಹಾಯದಿಂದಲೂ ದಾಳಿ ನಡೆಸಿದೆ.

ಜೆಎನ್‌ಯು ವಿದ್ಯಾರ್ಥಿ ಹಾಗೂ ಪ್ರೊಫೆಸರ್‌ಗಳು ಹೇಳುವಂತೆ ಮೌಖಿಕವಾಗಿ ಪೋಲಿಸರಿಗೆ ಎರಡು ಗಂಟೆಗಳ ಕಾಲ ಸುಮ್ಮನಿದ್ದು ದಾಳಿಕೋರರಿಗೆ ಅವಕಾಶ ನೀಡಬೇಕು ಎನ್ನುವ ಆದೇಶವಿತ್ತು ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ವಿಡಿಯೋಗಳು, ವಾಟ್ಸಾಪ್ ಗ್ರೂಪಿನ ಸಂದೇಶದ ಸ್ಕ್ರೀನ್ ಶಾಟ್‌ಗಳು ಈಗ ಬಹಿರಂಗವಾಗಿವೆ. ಶುಲ್ಕ ಹೆಚ್ಚಳದಿಂದ ಶುರುವಾಗಿ ಸಿಎಎ ವಿರುದ್ಧದ ಪ್ರತಿರೋಧದವರೆಗೂ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಶಾಂತಿಯುತವಾಗಿ ನಡೆಯುತ್ತಿರುವುದು ಕೇಂದ್ರಕ್ಕೆ ಮತ್ತೊಂದು ನುಂಗಲಾರದ ತುತ್ತಾಗಿದೆ. ಇದರ ಮಹತ್ವ ಕುಗ್ಗಿಸಲು ಶಾಂತಿ ಕದಡಲು ವಿದ್ಯಾರ್ಥಿಗಳ ಮಧ್ಯ ಗಲಾಟೆ ನಡೆಯುತ್ತಿದೆ ಎಂದು ಬಿಂಬಿಸಲು ಈ ಪೂರ್ವನಿಯೋಜಿತ ದಾಳಿ ನಡೆಸಿದ್ದಾರೆ. ಈ ದಾಳಿಯ ನಂತರ ‘ಶಟ್‌ಡೌನ್ ಜೆಎನ್‌ಯು’ ಎಂದು ಟ್ರೆಂಡ್ ಮಾಡುತ್ತಿರುವುದೇ ಇವರ ಉದ್ದೇಶ ತಿಳಿಯುತ್ತಿದೆ. ಇದರಿಂದಾಗಿ ಒಂದು ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನದಲ್ಲಿ ಕೇಂದ್ರ ಇದ್ದಂತಿದೆ. ಒಂದು ನಿರಂತರವಾಗಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಮತ್ತೊಂದು ತಳ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು.

ಇದೆಲ್ಲದರ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ. ಪ್ರಜಾತಂತ್ರವನ್ನು ಕಾಪಾಡಲು ದೇಶದಾದ್ಯಂತ ವಿದ್ಯಾರ್ಥಿಯುವಜನರು ಹೋರಾಟದ ಸಾಗರಕ್ಕೆ ಸೇರುತ್ತಿರುವುದು ಆಶಾದಾಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೌಂದರ್ಯವಲ್ಲ; ಪ್ರಜಾಪ್ರಭುತ್ವದ ಜೀವ ಮತ್ತು ಆತ್ಮದ ಮೇಲಿನ ದಾಳಿ!

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...