HomeUncategorizedಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ - ಸರೋವರ್‌ ಬೆಂಕಿಕೆರೆ

ಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ – ಸರೋವರ್‌ ಬೆಂಕಿಕೆರೆ

ಪ್ರತಿ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ..

- Advertisement -
- Advertisement -

ಬ್ರಾಹ್ಮಣ ಸಮುದಾಯಕ್ಕೆ ಹೊರತುಪಡಿಸಿ ಇತರೆ ಸಮುದಾಯಗಳಿಗೆ ಬಹುತೇಕ ನಾಗರಿಕ ಹಕ್ಕುಗಳು ಸಹಸ್ರಾರು ವರ್ಷಗಳ ಕಾಲ ನಿರಾಕರಣೆ ಆಗಿದ್ದ ದೇಶದಲ್ಲಿ ಅದರಲ್ಲೂ ಶಿಕ್ಷಣದ ಹತ್ತಿರಕ್ಕೂ ಬಿಟ್ಟುಕೊಳ್ಳದೇ ಜಾತಿ ಪದ್ಧತಿಯನ್ನು ಆಳವಾಗಿ ಬೇರುಬಿಟ್ಟುಕೊಂಡಿರುವ ದೇಶವೊಂದರಲ್ಲಿ ಜೆಎನ್‌ಯು ಅಂಥ ವಿಶ್ವವಿದ್ಯಾಲಯವು ವಿಶೇಷವಾಗಿ ನಿಲ್ಲುತ್ತದೆ. ಸ್ವಾತಂತ್ರ್ಯ ದ 70 ವರ್ಷಗಳ ನಂತರವೂ ಸಾಕ್ಷರತೆಯನ್ನೂ ಗುಣಾತ್ಮಕವಾಗಿ ಸಾಧಿಸಲೂ ಈವರೆಗೂ ಸಾಧ್ಯವಿಲ್ಲದಿರುವಾಗ ದಲಿತರು, ಅಲ್ಪ ಸಂಖ್ಯಾತರು, ಆದಿವಾಸಿ, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಸಮುದಾಯವದರು ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಸಾಧ್ಯ ಮಾಡಿದ್ದು ಜೆಎನ್‌ಯು ಆಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರಾತಿನಿಧ್ಯವೂ ಇದೆ. ಅಲ್ಲದೆ ಇಲ್ಲಿ ಶಿಕ್ಷಣ ಪಡೆದ ಅನೇಕ ತಳಸಮುದಾಯದ ಯುವತಿಯುವಕರು ಹೊರದೇಶಗಳಲ್ಲಿ, ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರುಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆಳುವ ಮನುವಾದಿ ಸರ್ಕಾರಗಳಿಗೆ ಹಾಗೂ ಮೇಲ್ವರ್ಗದ ಜನರಿಗೆ ಜೆಎನ್‌ಯು ಎಂದರೆ ‘ಸಹಜವಾಗಿ’ ಅಸಹನೆ ಇದ್ದೇಯಿದೆ!

ಜೆಎನ್ಯು ಮೇಲೆ ಸರ್ಕಾರಕ್ಕೆ ದ್ವೇಷ ಯಾಕೆ?

ಹೈದರಾಬಾದ್‌ನ ಹೆಚ್‌ಸಿಯುನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯ ನಂತರದಲ್ಲಿ ದೇಶದಾದ್ಯಂತ ನಡೆದ ವಿದ್ಯಾರ್ಥಿ ಯುವಜನರ ಹೋರಾಟದಲ್ಲಿ ಜೆಎನ್‌ಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಗಮನ ಸೆಳೆಯುವಂತೆ ಎತ್ತಿಹಿಡಿದಿತ್ತು. ಇತ್ತೀಚೆಗಷ್ಟೆ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ‘ಒಂದಿಂಚೂ ಹಿಂದೆ ಸರಿಯುವುದಿಲ್ಲ’ ಎನ್ನುವ ಘೋಷಣೆಯೊಂದಿಗೆ ಧೀರೋದ್ಧಾತ ಪ್ರತಿಭಟನೆಗಳನ್ನು ನಡೆಸಿದ್ದರು. ಇದನ್ನು ಕೇಂದ್ರ ನಿರೀಕ್ಷೆ ಮಾಡಿರಲಿಲ್ಲ.

ಇನ್ನು ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರಕ್ಕೆ ದಂಗು ಬಡಿದಂತಾಗಿತ್ತು. ತಮ್ಮ ಬಹುಮತದಿಂದ ಏನು ಬೇಕಾದರೂ ಮಾಡಬಹುದು ಎಂದು ಅಂದುಕೊಂಡಿದ್ದ ಬಿಜೆಪಿಗೆ ದೇಶದ ವಿದ್ಯಾರ್ಥಿ ಯುವಜನರು ದೊಡ್ಡ ಶಾಕ್ ನೀಡಿದ್ದರು. ಅದರಲ್ಲೂ ಜೆಎನ್‌ಯು ವಿದ್ಯಾರ್ಥಿಗಳು ಬಹುಮುಖ್ಯ ಪಾತ್ರವನ್ನು ವಹಿಸಿದ್ದರು. ಅಲ್ಲದೆ ನಿರಂತರವಾಗಿ ಬರುತ್ತಿದ್ದ ಜನವಿರೋಧಿ ನೀತಿಗಳು, ಆರ್ಥಿಕ ಕುಸಿತ, ನಿರುದ್ಯೋಗ ಏರಿಕೆ ಇತ್ಯಾದಿ ಸೇರಿ ಹತ್ತಾರು ಜನರ ನಿಜವಾದ ವಿಚಾರಗಳು ಮುನ್ನಲೆಗೆ ಬರುವಂತೆ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ಜೆಎನ್‌ಯು ವಿದ್ಯಾರ್ಥಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಉತ್ತರ ಕೊಡಲಾಗದ ಪ್ರಶ್ನೆಗಳನ್ನು ಎತ್ತಿದ್ದಾರೆ. ತಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣದ ಜ್ಞಾನ ಪಡೆದಾಗ ಜನಪರವಾದ ಪ್ರಶ್ನೆಗಳು ಕೇಳುವುದು ಸಾಮಾನ್ಯವಾಗಿ ಬರುವ ಗುಣವಾಗಿದೆ. ಮೇಲಿನ ಈ ಎಲ್ಲಾ ಕಾರಣಗಳಿಗಾಗಿ ತಮ್ಮ ವೈಫಲ್ಯವನ್ನು ಸರಿಮಾಡಿಕೊಳ್ಳುವ ಬದಲಾಗಿ ಸರ್ಕಾರವು ದ್ವೇಷವನ್ನು ಬೆಳೆಸಿಕೊಂಡಿದೆ.

ಜೆಎನ್‌ಯು ಕೇವಲ ಎಡಪಕ್ಷದ ಪರವಿರುವ ವಿದ್ಯಾರ್ಥಿಗಳು, ಕೇವಲ ಬಿಜೆಪಿ ವಿರುದ್ಧ ಕೆಲಸ ಮಾಡುವವರು ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಆಳ್ವಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನಂದಿಗ್ರಾಮ ಇತ್ಯಾದಿ ಜಾಗದಲ್ಲಿ ನಡೆದ ಹಿಂಸೆಯ ವಿರುದ್ಧವೂ ಜೆಎನ್‌ಯು ದನಿ ಎತ್ತಿತ್ತು. 1996ರಲ್ಲಿ ಜನಪರವಾದ ಪಕ್ಷದ ಪರ ಬಿಹಾರದಲ್ಲಿ ಪ್ರಚಾರ ಮಾಡಿದ್ದರು ಅನ್ನುವ ಕಾರಣಕ್ಕೆ ಜೆಎನ್‌ಯು ವಿದ್ಯಾರ್ಥಿ ಮುಖಂಡರನ್ನು ಕೊಲೆ ಮಾಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಅವಧಿಯ ನಿರ್ಭಯ ಅತ್ಯಾಚಾರ ಸಂದರ್ಭದಲ್ಲಿ ನಿರಂತರವಾಗಿ ವಿದ್ಯಾರ್ಥಿ ಹೋರಾಟದ ಕಾವನ್ನು ಕಾಪಿಟ್ಟುಕೊಂಡಿದ್ದು ಜೆಎನ್‌ಯು. ಕಾಶ್ಮೀರದ 370 ರದ್ಧತಿ ಸಂದರ್ಭದಲ್ಲಿ, ಹೊಸ ಶಿಕ್ಷಣ ನೀತಿ ಕರಡು ಬಂದ ಸಮಯದಲ್ಲಿ ಮತ್ತು ಹಲವಾರು ಇತರ ಜನವಿರೋಧಿ ನೀತಿಗಳು ಬಂದಾಗ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿರೋಧಗಳು ಬರದೇ ಇದ್ದಾಗ ಜೆಎನ್‌ಯು ಮಾತ್ರ ಪ್ರತಿರೋಧವನ್ನು ಒಡ್ಡುತ್ತಲಿತ್ತು. ಹೀಗೆ ಬಹು ಕಾಲದಿಂದ ಜನಪರವಾಗಿ ವಿದ್ಯಾರ್ಥಿ ಹೋರಾಟದ ಬದ್ಧತೆಯನ್ನು ಜೆಎನ್‌ಯು ಕಾಪಾಡಿಕೊಂಡಿದೆ. ಈ ಬದ್ಧತೆಯನ್ನು ಮುರಿಯುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬರುತ್ತಿವೆ. ಆದರೆ ಈ ಕಾಲದ ಕೇಂದ್ರ ಸರ್ಕಾರ ಕ್ರೂರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತಿದೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ದಾಳಿ ಏಕಾಯಿತು?

ಸಿಎಎ, ಎನ್‌ಆರ್‌ಸಿ ವಿರುದ್ಧದ ದೇಶದಾದ್ಯಂತ ಬಂದ ಪ್ರತಿರೋಧವನ್ನು ಕೇಂದ್ರ ಸುಧಾರಿಸಿಕೊಳ್ಳದಾಯಿತು. ಅದರಲ್ಲೂ ವಿದ್ಯಾರ್ಥಿ ಯುವಜನರ ಪಾತ್ರ ಅವರಿಗೆ ದಿಗಿಲು ಬಡಿಸಿತ್ತು. ಈ ಹೊತ್ತಿಗಾಗಲೇ ದೇಶದ್ರೋಹದಂತಹ ನೂರಾರು ಸುಳ್ಳು ಕೇಸು, ಜೈಲು ಎಲ್ಲವನ್ನೂ ನೋಡಿ ಬಂದಂತಹ ಜೆಎನ್‌ಯು ವಿದ್ಯಾರ್ಥಿಗಳನ್ನು ಯಾವುದರಿಂದಲೂ ಹೆದರಿಸಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿತ್ತಾದರೂ ಎಬಿವಿಪಿ ಗೂಂಡಾಗಳನ್ನು ಬಳಸಿಕೊಂಡು, ವಿಸಿ ಹಾಗೂ ಪೊಲೀಸರ ಸಹಾಯದಿಂದಲೂ ದಾಳಿ ನಡೆಸಿದೆ.

ಜೆಎನ್‌ಯು ವಿದ್ಯಾರ್ಥಿ ಹಾಗೂ ಪ್ರೊಫೆಸರ್‌ಗಳು ಹೇಳುವಂತೆ ಮೌಖಿಕವಾಗಿ ಪೋಲಿಸರಿಗೆ ಎರಡು ಗಂಟೆಗಳ ಕಾಲ ಸುಮ್ಮನಿದ್ದು ದಾಳಿಕೋರರಿಗೆ ಅವಕಾಶ ನೀಡಬೇಕು ಎನ್ನುವ ಆದೇಶವಿತ್ತು ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ವಿಡಿಯೋಗಳು, ವಾಟ್ಸಾಪ್ ಗ್ರೂಪಿನ ಸಂದೇಶದ ಸ್ಕ್ರೀನ್ ಶಾಟ್‌ಗಳು ಈಗ ಬಹಿರಂಗವಾಗಿವೆ. ಶುಲ್ಕ ಹೆಚ್ಚಳದಿಂದ ಶುರುವಾಗಿ ಸಿಎಎ ವಿರುದ್ಧದ ಪ್ರತಿರೋಧದವರೆಗೂ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಶಾಂತಿಯುತವಾಗಿ ನಡೆಯುತ್ತಿರುವುದು ಕೇಂದ್ರಕ್ಕೆ ಮತ್ತೊಂದು ನುಂಗಲಾರದ ತುತ್ತಾಗಿದೆ. ಇದರ ಮಹತ್ವ ಕುಗ್ಗಿಸಲು ಶಾಂತಿ ಕದಡಲು ವಿದ್ಯಾರ್ಥಿಗಳ ಮಧ್ಯ ಗಲಾಟೆ ನಡೆಯುತ್ತಿದೆ ಎಂದು ಬಿಂಬಿಸಲು ಈ ಪೂರ್ವನಿಯೋಜಿತ ದಾಳಿ ನಡೆಸಿದ್ದಾರೆ. ಈ ದಾಳಿಯ ನಂತರ ‘ಶಟ್‌ಡೌನ್ ಜೆಎನ್‌ಯು’ ಎಂದು ಟ್ರೆಂಡ್ ಮಾಡುತ್ತಿರುವುದೇ ಇವರ ಉದ್ದೇಶ ತಿಳಿಯುತ್ತಿದೆ. ಇದರಿಂದಾಗಿ ಒಂದು ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನದಲ್ಲಿ ಕೇಂದ್ರ ಇದ್ದಂತಿದೆ. ಒಂದು ನಿರಂತರವಾಗಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಮತ್ತೊಂದು ತಳ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು.

ಇದೆಲ್ಲದರ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ. ಪ್ರಜಾತಂತ್ರವನ್ನು ಕಾಪಾಡಲು ದೇಶದಾದ್ಯಂತ ವಿದ್ಯಾರ್ಥಿಯುವಜನರು ಹೋರಾಟದ ಸಾಗರಕ್ಕೆ ಸೇರುತ್ತಿರುವುದು ಆಶಾದಾಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೌಂದರ್ಯವಲ್ಲ; ಪ್ರಜಾಪ್ರಭುತ್ವದ ಜೀವ ಮತ್ತು ಆತ್ಮದ ಮೇಲಿನ ದಾಳಿ!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...