HomeUncategorizedಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ - ಸರೋವರ್‌ ಬೆಂಕಿಕೆರೆ

ಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ – ಸರೋವರ್‌ ಬೆಂಕಿಕೆರೆ

ಪ್ರತಿ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ..

- Advertisement -
- Advertisement -

ಬ್ರಾಹ್ಮಣ ಸಮುದಾಯಕ್ಕೆ ಹೊರತುಪಡಿಸಿ ಇತರೆ ಸಮುದಾಯಗಳಿಗೆ ಬಹುತೇಕ ನಾಗರಿಕ ಹಕ್ಕುಗಳು ಸಹಸ್ರಾರು ವರ್ಷಗಳ ಕಾಲ ನಿರಾಕರಣೆ ಆಗಿದ್ದ ದೇಶದಲ್ಲಿ ಅದರಲ್ಲೂ ಶಿಕ್ಷಣದ ಹತ್ತಿರಕ್ಕೂ ಬಿಟ್ಟುಕೊಳ್ಳದೇ ಜಾತಿ ಪದ್ಧತಿಯನ್ನು ಆಳವಾಗಿ ಬೇರುಬಿಟ್ಟುಕೊಂಡಿರುವ ದೇಶವೊಂದರಲ್ಲಿ ಜೆಎನ್‌ಯು ಅಂಥ ವಿಶ್ವವಿದ್ಯಾಲಯವು ವಿಶೇಷವಾಗಿ ನಿಲ್ಲುತ್ತದೆ. ಸ್ವಾತಂತ್ರ್ಯ ದ 70 ವರ್ಷಗಳ ನಂತರವೂ ಸಾಕ್ಷರತೆಯನ್ನೂ ಗುಣಾತ್ಮಕವಾಗಿ ಸಾಧಿಸಲೂ ಈವರೆಗೂ ಸಾಧ್ಯವಿಲ್ಲದಿರುವಾಗ ದಲಿತರು, ಅಲ್ಪ ಸಂಖ್ಯಾತರು, ಆದಿವಾಸಿ, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಸಮುದಾಯವದರು ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಸಾಧ್ಯ ಮಾಡಿದ್ದು ಜೆಎನ್‌ಯು ಆಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರಾತಿನಿಧ್ಯವೂ ಇದೆ. ಅಲ್ಲದೆ ಇಲ್ಲಿ ಶಿಕ್ಷಣ ಪಡೆದ ಅನೇಕ ತಳಸಮುದಾಯದ ಯುವತಿಯುವಕರು ಹೊರದೇಶಗಳಲ್ಲಿ, ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರುಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆಳುವ ಮನುವಾದಿ ಸರ್ಕಾರಗಳಿಗೆ ಹಾಗೂ ಮೇಲ್ವರ್ಗದ ಜನರಿಗೆ ಜೆಎನ್‌ಯು ಎಂದರೆ ‘ಸಹಜವಾಗಿ’ ಅಸಹನೆ ಇದ್ದೇಯಿದೆ!

ಜೆಎನ್ಯು ಮೇಲೆ ಸರ್ಕಾರಕ್ಕೆ ದ್ವೇಷ ಯಾಕೆ?

ಹೈದರಾಬಾದ್‌ನ ಹೆಚ್‌ಸಿಯುನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯ ನಂತರದಲ್ಲಿ ದೇಶದಾದ್ಯಂತ ನಡೆದ ವಿದ್ಯಾರ್ಥಿ ಯುವಜನರ ಹೋರಾಟದಲ್ಲಿ ಜೆಎನ್‌ಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಗಮನ ಸೆಳೆಯುವಂತೆ ಎತ್ತಿಹಿಡಿದಿತ್ತು. ಇತ್ತೀಚೆಗಷ್ಟೆ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ‘ಒಂದಿಂಚೂ ಹಿಂದೆ ಸರಿಯುವುದಿಲ್ಲ’ ಎನ್ನುವ ಘೋಷಣೆಯೊಂದಿಗೆ ಧೀರೋದ್ಧಾತ ಪ್ರತಿಭಟನೆಗಳನ್ನು ನಡೆಸಿದ್ದರು. ಇದನ್ನು ಕೇಂದ್ರ ನಿರೀಕ್ಷೆ ಮಾಡಿರಲಿಲ್ಲ.

ಇನ್ನು ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರಕ್ಕೆ ದಂಗು ಬಡಿದಂತಾಗಿತ್ತು. ತಮ್ಮ ಬಹುಮತದಿಂದ ಏನು ಬೇಕಾದರೂ ಮಾಡಬಹುದು ಎಂದು ಅಂದುಕೊಂಡಿದ್ದ ಬಿಜೆಪಿಗೆ ದೇಶದ ವಿದ್ಯಾರ್ಥಿ ಯುವಜನರು ದೊಡ್ಡ ಶಾಕ್ ನೀಡಿದ್ದರು. ಅದರಲ್ಲೂ ಜೆಎನ್‌ಯು ವಿದ್ಯಾರ್ಥಿಗಳು ಬಹುಮುಖ್ಯ ಪಾತ್ರವನ್ನು ವಹಿಸಿದ್ದರು. ಅಲ್ಲದೆ ನಿರಂತರವಾಗಿ ಬರುತ್ತಿದ್ದ ಜನವಿರೋಧಿ ನೀತಿಗಳು, ಆರ್ಥಿಕ ಕುಸಿತ, ನಿರುದ್ಯೋಗ ಏರಿಕೆ ಇತ್ಯಾದಿ ಸೇರಿ ಹತ್ತಾರು ಜನರ ನಿಜವಾದ ವಿಚಾರಗಳು ಮುನ್ನಲೆಗೆ ಬರುವಂತೆ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ಜೆಎನ್‌ಯು ವಿದ್ಯಾರ್ಥಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಉತ್ತರ ಕೊಡಲಾಗದ ಪ್ರಶ್ನೆಗಳನ್ನು ಎತ್ತಿದ್ದಾರೆ. ತಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣದ ಜ್ಞಾನ ಪಡೆದಾಗ ಜನಪರವಾದ ಪ್ರಶ್ನೆಗಳು ಕೇಳುವುದು ಸಾಮಾನ್ಯವಾಗಿ ಬರುವ ಗುಣವಾಗಿದೆ. ಮೇಲಿನ ಈ ಎಲ್ಲಾ ಕಾರಣಗಳಿಗಾಗಿ ತಮ್ಮ ವೈಫಲ್ಯವನ್ನು ಸರಿಮಾಡಿಕೊಳ್ಳುವ ಬದಲಾಗಿ ಸರ್ಕಾರವು ದ್ವೇಷವನ್ನು ಬೆಳೆಸಿಕೊಂಡಿದೆ.

ಜೆಎನ್‌ಯು ಕೇವಲ ಎಡಪಕ್ಷದ ಪರವಿರುವ ವಿದ್ಯಾರ್ಥಿಗಳು, ಕೇವಲ ಬಿಜೆಪಿ ವಿರುದ್ಧ ಕೆಲಸ ಮಾಡುವವರು ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಆಳ್ವಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನಂದಿಗ್ರಾಮ ಇತ್ಯಾದಿ ಜಾಗದಲ್ಲಿ ನಡೆದ ಹಿಂಸೆಯ ವಿರುದ್ಧವೂ ಜೆಎನ್‌ಯು ದನಿ ಎತ್ತಿತ್ತು. 1996ರಲ್ಲಿ ಜನಪರವಾದ ಪಕ್ಷದ ಪರ ಬಿಹಾರದಲ್ಲಿ ಪ್ರಚಾರ ಮಾಡಿದ್ದರು ಅನ್ನುವ ಕಾರಣಕ್ಕೆ ಜೆಎನ್‌ಯು ವಿದ್ಯಾರ್ಥಿ ಮುಖಂಡರನ್ನು ಕೊಲೆ ಮಾಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಅವಧಿಯ ನಿರ್ಭಯ ಅತ್ಯಾಚಾರ ಸಂದರ್ಭದಲ್ಲಿ ನಿರಂತರವಾಗಿ ವಿದ್ಯಾರ್ಥಿ ಹೋರಾಟದ ಕಾವನ್ನು ಕಾಪಿಟ್ಟುಕೊಂಡಿದ್ದು ಜೆಎನ್‌ಯು. ಕಾಶ್ಮೀರದ 370 ರದ್ಧತಿ ಸಂದರ್ಭದಲ್ಲಿ, ಹೊಸ ಶಿಕ್ಷಣ ನೀತಿ ಕರಡು ಬಂದ ಸಮಯದಲ್ಲಿ ಮತ್ತು ಹಲವಾರು ಇತರ ಜನವಿರೋಧಿ ನೀತಿಗಳು ಬಂದಾಗ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿರೋಧಗಳು ಬರದೇ ಇದ್ದಾಗ ಜೆಎನ್‌ಯು ಮಾತ್ರ ಪ್ರತಿರೋಧವನ್ನು ಒಡ್ಡುತ್ತಲಿತ್ತು. ಹೀಗೆ ಬಹು ಕಾಲದಿಂದ ಜನಪರವಾಗಿ ವಿದ್ಯಾರ್ಥಿ ಹೋರಾಟದ ಬದ್ಧತೆಯನ್ನು ಜೆಎನ್‌ಯು ಕಾಪಾಡಿಕೊಂಡಿದೆ. ಈ ಬದ್ಧತೆಯನ್ನು ಮುರಿಯುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬರುತ್ತಿವೆ. ಆದರೆ ಈ ಕಾಲದ ಕೇಂದ್ರ ಸರ್ಕಾರ ಕ್ರೂರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತಿದೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ದಾಳಿ ಏಕಾಯಿತು?

ಸಿಎಎ, ಎನ್‌ಆರ್‌ಸಿ ವಿರುದ್ಧದ ದೇಶದಾದ್ಯಂತ ಬಂದ ಪ್ರತಿರೋಧವನ್ನು ಕೇಂದ್ರ ಸುಧಾರಿಸಿಕೊಳ್ಳದಾಯಿತು. ಅದರಲ್ಲೂ ವಿದ್ಯಾರ್ಥಿ ಯುವಜನರ ಪಾತ್ರ ಅವರಿಗೆ ದಿಗಿಲು ಬಡಿಸಿತ್ತು. ಈ ಹೊತ್ತಿಗಾಗಲೇ ದೇಶದ್ರೋಹದಂತಹ ನೂರಾರು ಸುಳ್ಳು ಕೇಸು, ಜೈಲು ಎಲ್ಲವನ್ನೂ ನೋಡಿ ಬಂದಂತಹ ಜೆಎನ್‌ಯು ವಿದ್ಯಾರ್ಥಿಗಳನ್ನು ಯಾವುದರಿಂದಲೂ ಹೆದರಿಸಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿತ್ತಾದರೂ ಎಬಿವಿಪಿ ಗೂಂಡಾಗಳನ್ನು ಬಳಸಿಕೊಂಡು, ವಿಸಿ ಹಾಗೂ ಪೊಲೀಸರ ಸಹಾಯದಿಂದಲೂ ದಾಳಿ ನಡೆಸಿದೆ.

ಜೆಎನ್‌ಯು ವಿದ್ಯಾರ್ಥಿ ಹಾಗೂ ಪ್ರೊಫೆಸರ್‌ಗಳು ಹೇಳುವಂತೆ ಮೌಖಿಕವಾಗಿ ಪೋಲಿಸರಿಗೆ ಎರಡು ಗಂಟೆಗಳ ಕಾಲ ಸುಮ್ಮನಿದ್ದು ದಾಳಿಕೋರರಿಗೆ ಅವಕಾಶ ನೀಡಬೇಕು ಎನ್ನುವ ಆದೇಶವಿತ್ತು ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ವಿಡಿಯೋಗಳು, ವಾಟ್ಸಾಪ್ ಗ್ರೂಪಿನ ಸಂದೇಶದ ಸ್ಕ್ರೀನ್ ಶಾಟ್‌ಗಳು ಈಗ ಬಹಿರಂಗವಾಗಿವೆ. ಶುಲ್ಕ ಹೆಚ್ಚಳದಿಂದ ಶುರುವಾಗಿ ಸಿಎಎ ವಿರುದ್ಧದ ಪ್ರತಿರೋಧದವರೆಗೂ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಶಾಂತಿಯುತವಾಗಿ ನಡೆಯುತ್ತಿರುವುದು ಕೇಂದ್ರಕ್ಕೆ ಮತ್ತೊಂದು ನುಂಗಲಾರದ ತುತ್ತಾಗಿದೆ. ಇದರ ಮಹತ್ವ ಕುಗ್ಗಿಸಲು ಶಾಂತಿ ಕದಡಲು ವಿದ್ಯಾರ್ಥಿಗಳ ಮಧ್ಯ ಗಲಾಟೆ ನಡೆಯುತ್ತಿದೆ ಎಂದು ಬಿಂಬಿಸಲು ಈ ಪೂರ್ವನಿಯೋಜಿತ ದಾಳಿ ನಡೆಸಿದ್ದಾರೆ. ಈ ದಾಳಿಯ ನಂತರ ‘ಶಟ್‌ಡೌನ್ ಜೆಎನ್‌ಯು’ ಎಂದು ಟ್ರೆಂಡ್ ಮಾಡುತ್ತಿರುವುದೇ ಇವರ ಉದ್ದೇಶ ತಿಳಿಯುತ್ತಿದೆ. ಇದರಿಂದಾಗಿ ಒಂದು ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನದಲ್ಲಿ ಕೇಂದ್ರ ಇದ್ದಂತಿದೆ. ಒಂದು ನಿರಂತರವಾಗಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಮತ್ತೊಂದು ತಳ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು.

ಇದೆಲ್ಲದರ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ. ಪ್ರಜಾತಂತ್ರವನ್ನು ಕಾಪಾಡಲು ದೇಶದಾದ್ಯಂತ ವಿದ್ಯಾರ್ಥಿಯುವಜನರು ಹೋರಾಟದ ಸಾಗರಕ್ಕೆ ಸೇರುತ್ತಿರುವುದು ಆಶಾದಾಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೌಂದರ್ಯವಲ್ಲ; ಪ್ರಜಾಪ್ರಭುತ್ವದ ಜೀವ ಮತ್ತು ಆತ್ಮದ ಮೇಲಿನ ದಾಳಿ!

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...