HomeUncategorizedಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ - ಸರೋವರ್‌ ಬೆಂಕಿಕೆರೆ

ಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ – ಸರೋವರ್‌ ಬೆಂಕಿಕೆರೆ

ಪ್ರತಿ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ..

- Advertisement -
- Advertisement -

ಬ್ರಾಹ್ಮಣ ಸಮುದಾಯಕ್ಕೆ ಹೊರತುಪಡಿಸಿ ಇತರೆ ಸಮುದಾಯಗಳಿಗೆ ಬಹುತೇಕ ನಾಗರಿಕ ಹಕ್ಕುಗಳು ಸಹಸ್ರಾರು ವರ್ಷಗಳ ಕಾಲ ನಿರಾಕರಣೆ ಆಗಿದ್ದ ದೇಶದಲ್ಲಿ ಅದರಲ್ಲೂ ಶಿಕ್ಷಣದ ಹತ್ತಿರಕ್ಕೂ ಬಿಟ್ಟುಕೊಳ್ಳದೇ ಜಾತಿ ಪದ್ಧತಿಯನ್ನು ಆಳವಾಗಿ ಬೇರುಬಿಟ್ಟುಕೊಂಡಿರುವ ದೇಶವೊಂದರಲ್ಲಿ ಜೆಎನ್‌ಯು ಅಂಥ ವಿಶ್ವವಿದ್ಯಾಲಯವು ವಿಶೇಷವಾಗಿ ನಿಲ್ಲುತ್ತದೆ. ಸ್ವಾತಂತ್ರ್ಯ ದ 70 ವರ್ಷಗಳ ನಂತರವೂ ಸಾಕ್ಷರತೆಯನ್ನೂ ಗುಣಾತ್ಮಕವಾಗಿ ಸಾಧಿಸಲೂ ಈವರೆಗೂ ಸಾಧ್ಯವಿಲ್ಲದಿರುವಾಗ ದಲಿತರು, ಅಲ್ಪ ಸಂಖ್ಯಾತರು, ಆದಿವಾಸಿ, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಸಮುದಾಯವದರು ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಸಾಧ್ಯ ಮಾಡಿದ್ದು ಜೆಎನ್‌ಯು ಆಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರಾತಿನಿಧ್ಯವೂ ಇದೆ. ಅಲ್ಲದೆ ಇಲ್ಲಿ ಶಿಕ್ಷಣ ಪಡೆದ ಅನೇಕ ತಳಸಮುದಾಯದ ಯುವತಿಯುವಕರು ಹೊರದೇಶಗಳಲ್ಲಿ, ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರುಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆಳುವ ಮನುವಾದಿ ಸರ್ಕಾರಗಳಿಗೆ ಹಾಗೂ ಮೇಲ್ವರ್ಗದ ಜನರಿಗೆ ಜೆಎನ್‌ಯು ಎಂದರೆ ‘ಸಹಜವಾಗಿ’ ಅಸಹನೆ ಇದ್ದೇಯಿದೆ!

ಜೆಎನ್ಯು ಮೇಲೆ ಸರ್ಕಾರಕ್ಕೆ ದ್ವೇಷ ಯಾಕೆ?

ಹೈದರಾಬಾದ್‌ನ ಹೆಚ್‌ಸಿಯುನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯ ನಂತರದಲ್ಲಿ ದೇಶದಾದ್ಯಂತ ನಡೆದ ವಿದ್ಯಾರ್ಥಿ ಯುವಜನರ ಹೋರಾಟದಲ್ಲಿ ಜೆಎನ್‌ಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಗಮನ ಸೆಳೆಯುವಂತೆ ಎತ್ತಿಹಿಡಿದಿತ್ತು. ಇತ್ತೀಚೆಗಷ್ಟೆ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ‘ಒಂದಿಂಚೂ ಹಿಂದೆ ಸರಿಯುವುದಿಲ್ಲ’ ಎನ್ನುವ ಘೋಷಣೆಯೊಂದಿಗೆ ಧೀರೋದ್ಧಾತ ಪ್ರತಿಭಟನೆಗಳನ್ನು ನಡೆಸಿದ್ದರು. ಇದನ್ನು ಕೇಂದ್ರ ನಿರೀಕ್ಷೆ ಮಾಡಿರಲಿಲ್ಲ.

ಇನ್ನು ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರಕ್ಕೆ ದಂಗು ಬಡಿದಂತಾಗಿತ್ತು. ತಮ್ಮ ಬಹುಮತದಿಂದ ಏನು ಬೇಕಾದರೂ ಮಾಡಬಹುದು ಎಂದು ಅಂದುಕೊಂಡಿದ್ದ ಬಿಜೆಪಿಗೆ ದೇಶದ ವಿದ್ಯಾರ್ಥಿ ಯುವಜನರು ದೊಡ್ಡ ಶಾಕ್ ನೀಡಿದ್ದರು. ಅದರಲ್ಲೂ ಜೆಎನ್‌ಯು ವಿದ್ಯಾರ್ಥಿಗಳು ಬಹುಮುಖ್ಯ ಪಾತ್ರವನ್ನು ವಹಿಸಿದ್ದರು. ಅಲ್ಲದೆ ನಿರಂತರವಾಗಿ ಬರುತ್ತಿದ್ದ ಜನವಿರೋಧಿ ನೀತಿಗಳು, ಆರ್ಥಿಕ ಕುಸಿತ, ನಿರುದ್ಯೋಗ ಏರಿಕೆ ಇತ್ಯಾದಿ ಸೇರಿ ಹತ್ತಾರು ಜನರ ನಿಜವಾದ ವಿಚಾರಗಳು ಮುನ್ನಲೆಗೆ ಬರುವಂತೆ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ಜೆಎನ್‌ಯು ವಿದ್ಯಾರ್ಥಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಉತ್ತರ ಕೊಡಲಾಗದ ಪ್ರಶ್ನೆಗಳನ್ನು ಎತ್ತಿದ್ದಾರೆ. ತಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣದ ಜ್ಞಾನ ಪಡೆದಾಗ ಜನಪರವಾದ ಪ್ರಶ್ನೆಗಳು ಕೇಳುವುದು ಸಾಮಾನ್ಯವಾಗಿ ಬರುವ ಗುಣವಾಗಿದೆ. ಮೇಲಿನ ಈ ಎಲ್ಲಾ ಕಾರಣಗಳಿಗಾಗಿ ತಮ್ಮ ವೈಫಲ್ಯವನ್ನು ಸರಿಮಾಡಿಕೊಳ್ಳುವ ಬದಲಾಗಿ ಸರ್ಕಾರವು ದ್ವೇಷವನ್ನು ಬೆಳೆಸಿಕೊಂಡಿದೆ.

ಜೆಎನ್‌ಯು ಕೇವಲ ಎಡಪಕ್ಷದ ಪರವಿರುವ ವಿದ್ಯಾರ್ಥಿಗಳು, ಕೇವಲ ಬಿಜೆಪಿ ವಿರುದ್ಧ ಕೆಲಸ ಮಾಡುವವರು ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಆಳ್ವಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನಂದಿಗ್ರಾಮ ಇತ್ಯಾದಿ ಜಾಗದಲ್ಲಿ ನಡೆದ ಹಿಂಸೆಯ ವಿರುದ್ಧವೂ ಜೆಎನ್‌ಯು ದನಿ ಎತ್ತಿತ್ತು. 1996ರಲ್ಲಿ ಜನಪರವಾದ ಪಕ್ಷದ ಪರ ಬಿಹಾರದಲ್ಲಿ ಪ್ರಚಾರ ಮಾಡಿದ್ದರು ಅನ್ನುವ ಕಾರಣಕ್ಕೆ ಜೆಎನ್‌ಯು ವಿದ್ಯಾರ್ಥಿ ಮುಖಂಡರನ್ನು ಕೊಲೆ ಮಾಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಅವಧಿಯ ನಿರ್ಭಯ ಅತ್ಯಾಚಾರ ಸಂದರ್ಭದಲ್ಲಿ ನಿರಂತರವಾಗಿ ವಿದ್ಯಾರ್ಥಿ ಹೋರಾಟದ ಕಾವನ್ನು ಕಾಪಿಟ್ಟುಕೊಂಡಿದ್ದು ಜೆಎನ್‌ಯು. ಕಾಶ್ಮೀರದ 370 ರದ್ಧತಿ ಸಂದರ್ಭದಲ್ಲಿ, ಹೊಸ ಶಿಕ್ಷಣ ನೀತಿ ಕರಡು ಬಂದ ಸಮಯದಲ್ಲಿ ಮತ್ತು ಹಲವಾರು ಇತರ ಜನವಿರೋಧಿ ನೀತಿಗಳು ಬಂದಾಗ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿರೋಧಗಳು ಬರದೇ ಇದ್ದಾಗ ಜೆಎನ್‌ಯು ಮಾತ್ರ ಪ್ರತಿರೋಧವನ್ನು ಒಡ್ಡುತ್ತಲಿತ್ತು. ಹೀಗೆ ಬಹು ಕಾಲದಿಂದ ಜನಪರವಾಗಿ ವಿದ್ಯಾರ್ಥಿ ಹೋರಾಟದ ಬದ್ಧತೆಯನ್ನು ಜೆಎನ್‌ಯು ಕಾಪಾಡಿಕೊಂಡಿದೆ. ಈ ಬದ್ಧತೆಯನ್ನು ಮುರಿಯುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬರುತ್ತಿವೆ. ಆದರೆ ಈ ಕಾಲದ ಕೇಂದ್ರ ಸರ್ಕಾರ ಕ್ರೂರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತಿದೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ದಾಳಿ ಏಕಾಯಿತು?

ಸಿಎಎ, ಎನ್‌ಆರ್‌ಸಿ ವಿರುದ್ಧದ ದೇಶದಾದ್ಯಂತ ಬಂದ ಪ್ರತಿರೋಧವನ್ನು ಕೇಂದ್ರ ಸುಧಾರಿಸಿಕೊಳ್ಳದಾಯಿತು. ಅದರಲ್ಲೂ ವಿದ್ಯಾರ್ಥಿ ಯುವಜನರ ಪಾತ್ರ ಅವರಿಗೆ ದಿಗಿಲು ಬಡಿಸಿತ್ತು. ಈ ಹೊತ್ತಿಗಾಗಲೇ ದೇಶದ್ರೋಹದಂತಹ ನೂರಾರು ಸುಳ್ಳು ಕೇಸು, ಜೈಲು ಎಲ್ಲವನ್ನೂ ನೋಡಿ ಬಂದಂತಹ ಜೆಎನ್‌ಯು ವಿದ್ಯಾರ್ಥಿಗಳನ್ನು ಯಾವುದರಿಂದಲೂ ಹೆದರಿಸಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿತ್ತಾದರೂ ಎಬಿವಿಪಿ ಗೂಂಡಾಗಳನ್ನು ಬಳಸಿಕೊಂಡು, ವಿಸಿ ಹಾಗೂ ಪೊಲೀಸರ ಸಹಾಯದಿಂದಲೂ ದಾಳಿ ನಡೆಸಿದೆ.

ಜೆಎನ್‌ಯು ವಿದ್ಯಾರ್ಥಿ ಹಾಗೂ ಪ್ರೊಫೆಸರ್‌ಗಳು ಹೇಳುವಂತೆ ಮೌಖಿಕವಾಗಿ ಪೋಲಿಸರಿಗೆ ಎರಡು ಗಂಟೆಗಳ ಕಾಲ ಸುಮ್ಮನಿದ್ದು ದಾಳಿಕೋರರಿಗೆ ಅವಕಾಶ ನೀಡಬೇಕು ಎನ್ನುವ ಆದೇಶವಿತ್ತು ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ವಿಡಿಯೋಗಳು, ವಾಟ್ಸಾಪ್ ಗ್ರೂಪಿನ ಸಂದೇಶದ ಸ್ಕ್ರೀನ್ ಶಾಟ್‌ಗಳು ಈಗ ಬಹಿರಂಗವಾಗಿವೆ. ಶುಲ್ಕ ಹೆಚ್ಚಳದಿಂದ ಶುರುವಾಗಿ ಸಿಎಎ ವಿರುದ್ಧದ ಪ್ರತಿರೋಧದವರೆಗೂ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಶಾಂತಿಯುತವಾಗಿ ನಡೆಯುತ್ತಿರುವುದು ಕೇಂದ್ರಕ್ಕೆ ಮತ್ತೊಂದು ನುಂಗಲಾರದ ತುತ್ತಾಗಿದೆ. ಇದರ ಮಹತ್ವ ಕುಗ್ಗಿಸಲು ಶಾಂತಿ ಕದಡಲು ವಿದ್ಯಾರ್ಥಿಗಳ ಮಧ್ಯ ಗಲಾಟೆ ನಡೆಯುತ್ತಿದೆ ಎಂದು ಬಿಂಬಿಸಲು ಈ ಪೂರ್ವನಿಯೋಜಿತ ದಾಳಿ ನಡೆಸಿದ್ದಾರೆ. ಈ ದಾಳಿಯ ನಂತರ ‘ಶಟ್‌ಡೌನ್ ಜೆಎನ್‌ಯು’ ಎಂದು ಟ್ರೆಂಡ್ ಮಾಡುತ್ತಿರುವುದೇ ಇವರ ಉದ್ದೇಶ ತಿಳಿಯುತ್ತಿದೆ. ಇದರಿಂದಾಗಿ ಒಂದು ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನದಲ್ಲಿ ಕೇಂದ್ರ ಇದ್ದಂತಿದೆ. ಒಂದು ನಿರಂತರವಾಗಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಮತ್ತೊಂದು ತಳ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು.

ಇದೆಲ್ಲದರ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ. ಪ್ರಜಾತಂತ್ರವನ್ನು ಕಾಪಾಡಲು ದೇಶದಾದ್ಯಂತ ವಿದ್ಯಾರ್ಥಿಯುವಜನರು ಹೋರಾಟದ ಸಾಗರಕ್ಕೆ ಸೇರುತ್ತಿರುವುದು ಆಶಾದಾಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೌಂದರ್ಯವಲ್ಲ; ಪ್ರಜಾಪ್ರಭುತ್ವದ ಜೀವ ಮತ್ತು ಆತ್ಮದ ಮೇಲಿನ ದಾಳಿ!

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...