HomeUncategorizedಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ - ಸರೋವರ್‌ ಬೆಂಕಿಕೆರೆ

ಜೆಎನ್‌ಯು ಹಿಂಸೆ: ಪ್ರಜಾತಂತ್ರದ ಸೌಂದರ್ಯದ ಮೇಲಿನ ದಾಳಿ – ಸರೋವರ್‌ ಬೆಂಕಿಕೆರೆ

ಪ್ರತಿ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ..

- Advertisement -
- Advertisement -

ಬ್ರಾಹ್ಮಣ ಸಮುದಾಯಕ್ಕೆ ಹೊರತುಪಡಿಸಿ ಇತರೆ ಸಮುದಾಯಗಳಿಗೆ ಬಹುತೇಕ ನಾಗರಿಕ ಹಕ್ಕುಗಳು ಸಹಸ್ರಾರು ವರ್ಷಗಳ ಕಾಲ ನಿರಾಕರಣೆ ಆಗಿದ್ದ ದೇಶದಲ್ಲಿ ಅದರಲ್ಲೂ ಶಿಕ್ಷಣದ ಹತ್ತಿರಕ್ಕೂ ಬಿಟ್ಟುಕೊಳ್ಳದೇ ಜಾತಿ ಪದ್ಧತಿಯನ್ನು ಆಳವಾಗಿ ಬೇರುಬಿಟ್ಟುಕೊಂಡಿರುವ ದೇಶವೊಂದರಲ್ಲಿ ಜೆಎನ್‌ಯು ಅಂಥ ವಿಶ್ವವಿದ್ಯಾಲಯವು ವಿಶೇಷವಾಗಿ ನಿಲ್ಲುತ್ತದೆ. ಸ್ವಾತಂತ್ರ್ಯ ದ 70 ವರ್ಷಗಳ ನಂತರವೂ ಸಾಕ್ಷರತೆಯನ್ನೂ ಗುಣಾತ್ಮಕವಾಗಿ ಸಾಧಿಸಲೂ ಈವರೆಗೂ ಸಾಧ್ಯವಿಲ್ಲದಿರುವಾಗ ದಲಿತರು, ಅಲ್ಪ ಸಂಖ್ಯಾತರು, ಆದಿವಾಸಿ, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದ ಸಮುದಾಯವದರು ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಸಾಧ್ಯ ಮಾಡಿದ್ದು ಜೆಎನ್‌ಯು ಆಗಿದೆ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರಾತಿನಿಧ್ಯವೂ ಇದೆ. ಅಲ್ಲದೆ ಇಲ್ಲಿ ಶಿಕ್ಷಣ ಪಡೆದ ಅನೇಕ ತಳಸಮುದಾಯದ ಯುವತಿಯುವಕರು ಹೊರದೇಶಗಳಲ್ಲಿ, ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರುಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಆಳುವ ಮನುವಾದಿ ಸರ್ಕಾರಗಳಿಗೆ ಹಾಗೂ ಮೇಲ್ವರ್ಗದ ಜನರಿಗೆ ಜೆಎನ್‌ಯು ಎಂದರೆ ‘ಸಹಜವಾಗಿ’ ಅಸಹನೆ ಇದ್ದೇಯಿದೆ!

ಜೆಎನ್ಯು ಮೇಲೆ ಸರ್ಕಾರಕ್ಕೆ ದ್ವೇಷ ಯಾಕೆ?

ಹೈದರಾಬಾದ್‌ನ ಹೆಚ್‌ಸಿಯುನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯ ನಂತರದಲ್ಲಿ ದೇಶದಾದ್ಯಂತ ನಡೆದ ವಿದ್ಯಾರ್ಥಿ ಯುವಜನರ ಹೋರಾಟದಲ್ಲಿ ಜೆಎನ್‌ಯು ಕೇಂದ್ರ ಸರ್ಕಾರದ ವೈಫಲ್ಯವನ್ನು ಗಮನ ಸೆಳೆಯುವಂತೆ ಎತ್ತಿಹಿಡಿದಿತ್ತು. ಇತ್ತೀಚೆಗಷ್ಟೆ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿಗಳು ‘ಒಂದಿಂಚೂ ಹಿಂದೆ ಸರಿಯುವುದಿಲ್ಲ’ ಎನ್ನುವ ಘೋಷಣೆಯೊಂದಿಗೆ ಧೀರೋದ್ಧಾತ ಪ್ರತಿಭಟನೆಗಳನ್ನು ನಡೆಸಿದ್ದರು. ಇದನ್ನು ಕೇಂದ್ರ ನಿರೀಕ್ಷೆ ಮಾಡಿರಲಿಲ್ಲ.

ಇನ್ನು ಸಿಎಎ, ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯು ಕೇಂದ್ರ ಸರ್ಕಾರಕ್ಕೆ ದಂಗು ಬಡಿದಂತಾಗಿತ್ತು. ತಮ್ಮ ಬಹುಮತದಿಂದ ಏನು ಬೇಕಾದರೂ ಮಾಡಬಹುದು ಎಂದು ಅಂದುಕೊಂಡಿದ್ದ ಬಿಜೆಪಿಗೆ ದೇಶದ ವಿದ್ಯಾರ್ಥಿ ಯುವಜನರು ದೊಡ್ಡ ಶಾಕ್ ನೀಡಿದ್ದರು. ಅದರಲ್ಲೂ ಜೆಎನ್‌ಯು ವಿದ್ಯಾರ್ಥಿಗಳು ಬಹುಮುಖ್ಯ ಪಾತ್ರವನ್ನು ವಹಿಸಿದ್ದರು. ಅಲ್ಲದೆ ನಿರಂತರವಾಗಿ ಬರುತ್ತಿದ್ದ ಜನವಿರೋಧಿ ನೀತಿಗಳು, ಆರ್ಥಿಕ ಕುಸಿತ, ನಿರುದ್ಯೋಗ ಏರಿಕೆ ಇತ್ಯಾದಿ ಸೇರಿ ಹತ್ತಾರು ಜನರ ನಿಜವಾದ ವಿಚಾರಗಳು ಮುನ್ನಲೆಗೆ ಬರುವಂತೆ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು ಜೆಎನ್‌ಯು ವಿದ್ಯಾರ್ಥಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಕೇಂದ್ರ ಉತ್ತರ ಕೊಡಲಾಗದ ಪ್ರಶ್ನೆಗಳನ್ನು ಎತ್ತಿದ್ದಾರೆ. ತಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣದ ಜ್ಞಾನ ಪಡೆದಾಗ ಜನಪರವಾದ ಪ್ರಶ್ನೆಗಳು ಕೇಳುವುದು ಸಾಮಾನ್ಯವಾಗಿ ಬರುವ ಗುಣವಾಗಿದೆ. ಮೇಲಿನ ಈ ಎಲ್ಲಾ ಕಾರಣಗಳಿಗಾಗಿ ತಮ್ಮ ವೈಫಲ್ಯವನ್ನು ಸರಿಮಾಡಿಕೊಳ್ಳುವ ಬದಲಾಗಿ ಸರ್ಕಾರವು ದ್ವೇಷವನ್ನು ಬೆಳೆಸಿಕೊಂಡಿದೆ.

ಜೆಎನ್‌ಯು ಕೇವಲ ಎಡಪಕ್ಷದ ಪರವಿರುವ ವಿದ್ಯಾರ್ಥಿಗಳು, ಕೇವಲ ಬಿಜೆಪಿ ವಿರುದ್ಧ ಕೆಲಸ ಮಾಡುವವರು ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಆಳ್ವಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನಂದಿಗ್ರಾಮ ಇತ್ಯಾದಿ ಜಾಗದಲ್ಲಿ ನಡೆದ ಹಿಂಸೆಯ ವಿರುದ್ಧವೂ ಜೆಎನ್‌ಯು ದನಿ ಎತ್ತಿತ್ತು. 1996ರಲ್ಲಿ ಜನಪರವಾದ ಪಕ್ಷದ ಪರ ಬಿಹಾರದಲ್ಲಿ ಪ್ರಚಾರ ಮಾಡಿದ್ದರು ಅನ್ನುವ ಕಾರಣಕ್ಕೆ ಜೆಎನ್‌ಯು ವಿದ್ಯಾರ್ಥಿ ಮುಖಂಡರನ್ನು ಕೊಲೆ ಮಾಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಅವಧಿಯ ನಿರ್ಭಯ ಅತ್ಯಾಚಾರ ಸಂದರ್ಭದಲ್ಲಿ ನಿರಂತರವಾಗಿ ವಿದ್ಯಾರ್ಥಿ ಹೋರಾಟದ ಕಾವನ್ನು ಕಾಪಿಟ್ಟುಕೊಂಡಿದ್ದು ಜೆಎನ್‌ಯು. ಕಾಶ್ಮೀರದ 370 ರದ್ಧತಿ ಸಂದರ್ಭದಲ್ಲಿ, ಹೊಸ ಶಿಕ್ಷಣ ನೀತಿ ಕರಡು ಬಂದ ಸಮಯದಲ್ಲಿ ಮತ್ತು ಹಲವಾರು ಇತರ ಜನವಿರೋಧಿ ನೀತಿಗಳು ಬಂದಾಗ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿರೋಧಗಳು ಬರದೇ ಇದ್ದಾಗ ಜೆಎನ್‌ಯು ಮಾತ್ರ ಪ್ರತಿರೋಧವನ್ನು ಒಡ್ಡುತ್ತಲಿತ್ತು. ಹೀಗೆ ಬಹು ಕಾಲದಿಂದ ಜನಪರವಾಗಿ ವಿದ್ಯಾರ್ಥಿ ಹೋರಾಟದ ಬದ್ಧತೆಯನ್ನು ಜೆಎನ್‌ಯು ಕಾಪಾಡಿಕೊಂಡಿದೆ. ಈ ಬದ್ಧತೆಯನ್ನು ಮುರಿಯುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬರುತ್ತಿವೆ. ಆದರೆ ಈ ಕಾಲದ ಕೇಂದ್ರ ಸರ್ಕಾರ ಕ್ರೂರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ದಾಳಿ ನಡೆಸುತ್ತಿದೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ದಾಳಿ ಏಕಾಯಿತು?

ಸಿಎಎ, ಎನ್‌ಆರ್‌ಸಿ ವಿರುದ್ಧದ ದೇಶದಾದ್ಯಂತ ಬಂದ ಪ್ರತಿರೋಧವನ್ನು ಕೇಂದ್ರ ಸುಧಾರಿಸಿಕೊಳ್ಳದಾಯಿತು. ಅದರಲ್ಲೂ ವಿದ್ಯಾರ್ಥಿ ಯುವಜನರ ಪಾತ್ರ ಅವರಿಗೆ ದಿಗಿಲು ಬಡಿಸಿತ್ತು. ಈ ಹೊತ್ತಿಗಾಗಲೇ ದೇಶದ್ರೋಹದಂತಹ ನೂರಾರು ಸುಳ್ಳು ಕೇಸು, ಜೈಲು ಎಲ್ಲವನ್ನೂ ನೋಡಿ ಬಂದಂತಹ ಜೆಎನ್‌ಯು ವಿದ್ಯಾರ್ಥಿಗಳನ್ನು ಯಾವುದರಿಂದಲೂ ಹೆದರಿಸಲು ಸಾಧ್ಯವಿಲ್ಲ ಎನ್ನುವ ತೀರ್ಮಾನಕ್ಕೆ ಕೇಂದ್ರ ಬಂದಿತ್ತಾದರೂ ಎಬಿವಿಪಿ ಗೂಂಡಾಗಳನ್ನು ಬಳಸಿಕೊಂಡು, ವಿಸಿ ಹಾಗೂ ಪೊಲೀಸರ ಸಹಾಯದಿಂದಲೂ ದಾಳಿ ನಡೆಸಿದೆ.

ಜೆಎನ್‌ಯು ವಿದ್ಯಾರ್ಥಿ ಹಾಗೂ ಪ್ರೊಫೆಸರ್‌ಗಳು ಹೇಳುವಂತೆ ಮೌಖಿಕವಾಗಿ ಪೋಲಿಸರಿಗೆ ಎರಡು ಗಂಟೆಗಳ ಕಾಲ ಸುಮ್ಮನಿದ್ದು ದಾಳಿಕೋರರಿಗೆ ಅವಕಾಶ ನೀಡಬೇಕು ಎನ್ನುವ ಆದೇಶವಿತ್ತು ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ವಿಡಿಯೋಗಳು, ವಾಟ್ಸಾಪ್ ಗ್ರೂಪಿನ ಸಂದೇಶದ ಸ್ಕ್ರೀನ್ ಶಾಟ್‌ಗಳು ಈಗ ಬಹಿರಂಗವಾಗಿವೆ. ಶುಲ್ಕ ಹೆಚ್ಚಳದಿಂದ ಶುರುವಾಗಿ ಸಿಎಎ ವಿರುದ್ಧದ ಪ್ರತಿರೋಧದವರೆಗೂ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಶಾಂತಿಯುತವಾಗಿ ನಡೆಯುತ್ತಿರುವುದು ಕೇಂದ್ರಕ್ಕೆ ಮತ್ತೊಂದು ನುಂಗಲಾರದ ತುತ್ತಾಗಿದೆ. ಇದರ ಮಹತ್ವ ಕುಗ್ಗಿಸಲು ಶಾಂತಿ ಕದಡಲು ವಿದ್ಯಾರ್ಥಿಗಳ ಮಧ್ಯ ಗಲಾಟೆ ನಡೆಯುತ್ತಿದೆ ಎಂದು ಬಿಂಬಿಸಲು ಈ ಪೂರ್ವನಿಯೋಜಿತ ದಾಳಿ ನಡೆಸಿದ್ದಾರೆ. ಈ ದಾಳಿಯ ನಂತರ ‘ಶಟ್‌ಡೌನ್ ಜೆಎನ್‌ಯು’ ಎಂದು ಟ್ರೆಂಡ್ ಮಾಡುತ್ತಿರುವುದೇ ಇವರ ಉದ್ದೇಶ ತಿಳಿಯುತ್ತಿದೆ. ಇದರಿಂದಾಗಿ ಒಂದು ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನದಲ್ಲಿ ಕೇಂದ್ರ ಇದ್ದಂತಿದೆ. ಒಂದು ನಿರಂತರವಾಗಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಮತ್ತೊಂದು ತಳ ಸಮುದಾಯದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು.

ಇದೆಲ್ಲದರ ದಮನದ ನಂತರವೂ ಧೂಳಿನಿಂದ ಎದ್ದುಬರುವ ಫೀನಿಕ್ಸ್ ಪಕ್ಷಿಯಂತೆ ಪ್ರತಿಬಾರಿ ಜೆಎನ್‌ಯು ವಿದ್ಯಾರ್ಥಿ ಹೋರಾಟವೂ ಎದ್ದು ಬರುತ್ತಿದೆ. ಪ್ರಜಾತಂತ್ರವನ್ನು ಕಾಪಾಡಲು ದೇಶದಾದ್ಯಂತ ವಿದ್ಯಾರ್ಥಿಯುವಜನರು ಹೋರಾಟದ ಸಾಗರಕ್ಕೆ ಸೇರುತ್ತಿರುವುದು ಆಶಾದಾಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೌಂದರ್ಯವಲ್ಲ; ಪ್ರಜಾಪ್ರಭುತ್ವದ ಜೀವ ಮತ್ತು ಆತ್ಮದ ಮೇಲಿನ ದಾಳಿ!

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...