Homeಚಳವಳಿಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

- Advertisement -
- Advertisement -

ಶುಲ್ಕ ಹೆಚ್ಚಳದ ವಿರುದ್ಧ ಕಳೆದ 10 ದಿನಗಳಿಂದ ಭಾರೀ ಹೋರಾಟದ ಕಾರಣಕ್ಕೆ ದೇಶದ ಗಮನ ಸೆಳೆದಿರುವ ಜೆಎನ್‌ಯುನಲ್ಲಿ ಪರಿಹಾರ ಭರವಸೆ ದೊರಕಿದೆ. ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ ಕೇಂದ್ರ ಸರ್ಕಾರವು ಅದಕ್ಕೊಂದು ಸಮಿತಿಯನ್ನು ರಚಿಸಿದೆ. ಸಮಿತಿಯು ಈಗಾಗಲೇ ವಿವಿಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರ ಹಕ್ಕೊತ್ತಾಯಗಳ ಕುರಿತು ಚರ್ಚೆ ನಡೆಸಿದೆ.

ಇದು ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವಾಗಿದೆ. ಮುಂದಿನ ಒಂದು ವಾರದಲ್ಲಿ ಜೆಎನ್‌ಯು ಶುಲ್ಕ ಹೆಚ್ಚಳದಲ್ಲಿ ವಿಚಾರದಲ್ಲಿ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ.

ಯುಜಿಸಿ ಮಾಜಿ ಅಧ್ಯಕ್ಷ ವಿ.ಎಸ್.ಚೌಹಾನ್, ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಮತ್ತು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಸೇರಿದಂತೆ ಮೂವರು ಸದಸ್ಯರ ಸಮಿತಿಯು ಶುಕ್ರವಾರ ಜೆಎನ್‌ಯು ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದೆ.

ಇದನ್ನೂ ಓದಿ: JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ವಿದ್ಯಾರ್ಥಿಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರಿಂದ ಸಂಧಾನಕ್ಕಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಮೂರು ಸದಸ್ಯರ ಸಮಿತಿಯನ್ನು ನೇಮಿಸಿದೆ.

“ನಾವು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇವೆ ಮತ್ತು ಅವರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡಿದ್ದೇವೆ. ಸಭೆ ಎರಡು ಗಂಟೆಗಳ ಕಾಲ ನಡೆಯಿತು, ಅಲ್ಲಿ ವಿವಿ ಆಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಭಿನ್ನಾಭಿಪ್ರಾಯದ ಹಿಂದಿನ ಕಾರಣಗಳನ್ನು ನಾವು ತಿಳಿದುಕೊಂಡಿದ್ದೇವೆ” ಎಂದು ಸಮಿತಿಯ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ಇದು ಅಂತಿಮ ಸಭೆಯಾಗಿದ್ದು ನಾವು ಎಲ್ಲಾ ದೃಷ್ಟಿಕೋನಗಳಿಂದಲೂ ಆಲಿಸಿದ್ದೇವೆ. ನಾವು ಈಗ ನಮ್ಮ ಶಿಫಾರಸುಗಳನ್ನು ಒಂದು ವಾರದೊಳಗೆ ಸಲ್ಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಚರ್ಚೆಯು ಸಕಾರಾತ್ಮಕವಾಗಿದೆ ಆದರೆ ಅಂತಿಮ ನಿರ್ಧಾರವನ್ನು ಜೆಎನ್‌ಯು ಆಡಳಿತವು ತೆಗೆದುಕೊಳ್ಳುತ್ತದೆ. ನಾವು ಶೀಘ್ರದಲ್ಲೇ ಶಿಫಾರಸುಗಳನ್ನು ಸಲ್ಲಿಸುತ್ತೇವೆ” ಎಂದು ವಿ.ಎಸ್. ಚೌಹಾನ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾಗಾಗಿ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಹೆಚ್ಚಳದ ಆದೇಶ ವಾಪಸಾತಿ ಆಗುವವರೆಗೂ ತಮ್ಮ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಅವರ ಹೋರಾಟಕ್ಕೆ JNU ಹಿರಿಯ ವಿದ್ಯಾರ್ಥಿಗಳು ಸಹ ಸಾಥ್‌ ನೀಡಿದ್ದು ಇಂದು ದೆಹಲಿಯ ಮಂಡಿಹೌಸ್‌ನಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೊತೆಗೆ ಏಮ್ಸ್‌ (All india Institute of medical science) ವಿದ್ಯಾರ್ಥಿ ಸಂಘವು ಕೂಡ ಪತ್ರಿಕಾ ಹೇಳಿಕೆ ನೀಡಿದ್ದು JNU ವಿದ್ಯಾರ್ಥಿಗಳ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...